ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜುಲೈ 14ರಂದು ಸಂಸತ್ ಕಾರ್ಯ ಯೋಜನಾ ತಂಡದ ಸಭೆ ಕರೆದಿದ್ದಾರೆ. ಮೂಲಗಳ ಪ್ರಕಾರ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಬದಲಾವಣೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಲೋಕಸಭೆಯಲ್ಲಿ ಪಕ್ಷದ ನಾಯಕನ ಆಯ್ಕೆಗೆ ಶಶಿ ತರೂರ್, ಮನೀಶ್ ತಿವಾರಿ ಹಾಗೂ ಗೌರವ್ ಗೊಗೊಯಿ ಹೆಸರುಗಳನ್ನು ಪರಿಗಣಿಸುವ ಸಾಧ್ಯತೆ ಇರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.