ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 13ರಿಂದ ಕಾಂಗ್ರೆಸ್‌ ನವ ಸಂಕಲ್ಪ ಶಿಬಿರ: ಸಾರ್ವತ್ರಿಕ ಚುನಾವಣೆಗೆ ಕಾರ್ಯತಂತ್ರ

Last Updated 25 ಏಪ್ರಿಲ್ 2022, 13:03 IST
ಅಕ್ಷರ ಗಾತ್ರ

ನವದೆಹಲಿ: ಮೇ 13 ರಿಂದ ರಾಜಸ್ತಾನದ ಉದಯಪುರದಲ್ಲಿ 'ನವ ಸಂಕಲ್ಪ ಶಿಬಿರ' ಎಂಬ ಮೂರು ದಿನಗಳ ಚಿಂತನ-ಮಂಥನ ಸಮಾವೇಶ ನಡೆಸಲಿದೆ. ಈ ವೇಳೆ 2024ರ ಸಾರ್ವತ್ರಿಕ ಚುನಾವಣೆಯತ್ತ ಗಮನ ಹರಿಸಲಾಗುವುದು ಎಂದು ಕಾಂಗ್ರೆಸ್ ಸೋಮವಾರ ತಿಳಿಸಿದೆ.

'ಕಾಂಗ್ರೆಸ್ ಅಧ್ಯಕ್ಷರು 2022ರ ಮೇ 13, 14 ಮತ್ತು 15 ರಂದು ಉದಯಪುರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 'ನವ ಸಂಕಲ್ಪ'ದ ಚಿಂತನ ಮಂಥನ ಶಿಬಿರವನ್ನು ನಡೆಸಲು ನಿರ್ಧರಿಸಿದ್ದಾರೆ. ಪ್ರತಿ ರಾಜ್ಯದಿಂದ ಸುಮಾರು 400 ಕಾಂಗ್ರೆಸ್ ಸದಸ್ಯರು ಮತ್ತು ಮಹಿಳೆಯರು ಭಾಗವಹಿಸಲಿದ್ದಾರೆ' ಎಂದು ಪಕ್ಷ ಹೇಳಿದೆ.

ಸಮಾವೇಶದಲ್ಲಿ ಸದ್ಯದ ರಾಜಕೀಯ ಮತ್ತು ಆರ್ಥಿಕ ಪರಿಸ್ಥಿತಿ ಹಾಗೂ ಅವು ನಮ್ಮ ಸಮಾಜಕ್ಕೆ ಒಡ್ಡುತ್ತಿರುವ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಲಾಗುತ್ತದೆ. ರೈತರು ಮತ್ತು ಕೃಷಿ ಕೆಲಸಗಾರರು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಒಬಿಸಿಗಳು, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಯೋಗಕ್ಷೇಮಕ್ಕೆ ಸಂಬಂಧಿಸಿದ ಸಮಸ್ಯೆಗಳು, ಮಹಿಳಾ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮತ್ತು ಯುವಕರ ಬಗ್ಗೆಯೂ ವಿವರವಾಗಿ ಚರ್ಚಿಸಲಾಗುವುದು.

ಇದಲ್ಲದೆ ಪಕ್ಷದ ಸಾಂಸ್ಥಿಕ ಪುನರ್‌ರಚನೆ ಮತ್ತು ಬಲಪಡಿಸುವಿಕೆಗೆ ಸಂಬಂಧಿಸಿದ ವಿಷಯಗಳನ್ನು ಸಹ ಪರಿಶೀಲಿಸಲಾಗುತ್ತದೆ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

2024ರ ಲೋಕಸಭೆ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆಯೂ ಚಿಂತನ ಶಿಬಿರದಲ್ಲಿ ಚರ್ಚಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT