ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಉಪ ಉಸ್ತುವಾರಿ ಆಗಿರುವ ಅವರು, ಇಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಈ ಮಾತು ಹೇಳಿದ್ದಾರೆ.‘ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರವು, ‘ಗೂಂಡಾರಾಜ್’ ವಿರುದ್ಧ ತೆಗೆದುಕೊಂಡ ಕಠಿಣ ಕ್ರಮಗಳು, ಅಭೂತಪೂರ್ವವಾದ ಅಭಿವೃದ್ಧಿ ಕೆಲಸಗಳು ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಕಾರಣ ಜನರಿಂದ ಉತ್ತಮ ಬಿಜೆಪಿ ಪರವಾದ ಅಲೆ ಸೃಷ್ಟಿಯಾಗಿದೆ’ ಎಂದು ಅವರು ಹೇಳಿದ್ದಾರೆ.