<p><strong>ನವದೆಹಲಿ:</strong> ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಎರಡನೇ ಸುತ್ತಿನ ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರವೂ ಹಾಜರಾದರು.</p>.<p>ಸೋನಿಯಾ ಅವರನ್ನು ವಿಚಾರಣೆಗೆ ಒಳಪಡಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಲವು ಮಂದಿ ಕಾಂಗ್ರೆಸ್ ಸಂಸದರು ಹಾಗೂ ಕಾರ್ಯಕರ್ತರು ವಿಜಯ ಚೌಕ್ನಿಂದ ರಾಷ್ಟ್ರಪತಿ ನಿವಾಸದತ್ತ ಮೆರವಣಿಗೆ ಆರಂಭಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದರು.</p>.<p><a href="https://www.prajavani.net/district/dakshina-kannada/hindu-organisation-decided-to-precession-of-praveen-dead-body-957971.html" itemprop="url">ಪ್ರವೀಣ್ ಮೃತದೇಹ ಮೆರವಣಿಗೆ: ಮೂರು ತಾಲ್ಲೂಕು ಬಂದ್- ಹಿಂದೂ ಸಂಘಟನೆಗಳ ಸೂಚನೆ </a></p>.<p>‘ನಾವು ಜನಸಾಮಾನ್ಯರ ಪರ ಸಂಸತ್ನಲ್ಲಿ ಧ್ವನಿಯೆತ್ತಲು ಬಯಸಿದ್ದೆವು. ರಾಷ್ಟ್ರಪತಿ ಭವನದತ್ತ ತೆರಳುತ್ತಿದ್ದಾಗ ನಮ್ಮನ್ನು ಪೊಲೀಸರು ವಶಕ್ಕೆ ಪಡೆದರು’ ಎಂದು ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ಹೇಳಿದರು.</p>.<p>ಈ ಮಧ್ಯೆ, ಸೋನಿಯಾ ಗಾಂಧಿ ಅವರು ಇ.ಡಿ ಅಧಿಕಾರಿಗಳ ಎದುರು ಮೂರನೇ ದಿವಸ ತಮ್ಮ ಹೇಳಿಕೆ ದಾಖಲಿಸಿದರು.</p>.<p>ಬೆಳಿಗ್ಗೆ 11 ಗಂಟೆಗೆ ಇ.ಡಿ ಕಚೇರಿ ತಲುಪಿದ ಅವರು ವಿಚಾರಣೆ ಎದುರಿಸಿದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಜತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಎರಡನೇ ಸುತ್ತಿನ ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರವೂ ಹಾಜರಾದರು.</p>.<p>ಸೋನಿಯಾ ಅವರನ್ನು ವಿಚಾರಣೆಗೆ ಒಳಪಡಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆಲವು ಮಂದಿ ಕಾಂಗ್ರೆಸ್ ಸಂಸದರು ಹಾಗೂ ಕಾರ್ಯಕರ್ತರು ವಿಜಯ ಚೌಕ್ನಿಂದ ರಾಷ್ಟ್ರಪತಿ ನಿವಾಸದತ್ತ ಮೆರವಣಿಗೆ ಆರಂಭಿಸಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದರು.</p>.<p><a href="https://www.prajavani.net/district/dakshina-kannada/hindu-organisation-decided-to-precession-of-praveen-dead-body-957971.html" itemprop="url">ಪ್ರವೀಣ್ ಮೃತದೇಹ ಮೆರವಣಿಗೆ: ಮೂರು ತಾಲ್ಲೂಕು ಬಂದ್- ಹಿಂದೂ ಸಂಘಟನೆಗಳ ಸೂಚನೆ </a></p>.<p>‘ನಾವು ಜನಸಾಮಾನ್ಯರ ಪರ ಸಂಸತ್ನಲ್ಲಿ ಧ್ವನಿಯೆತ್ತಲು ಬಯಸಿದ್ದೆವು. ರಾಷ್ಟ್ರಪತಿ ಭವನದತ್ತ ತೆರಳುತ್ತಿದ್ದಾಗ ನಮ್ಮನ್ನು ಪೊಲೀಸರು ವಶಕ್ಕೆ ಪಡೆದರು’ ಎಂದು ಕಾಂಗ್ರೆಸ್ ಸಂಸದ ಮನೀಷ್ ತಿವಾರಿ ಹೇಳಿದರು.</p>.<p>ಈ ಮಧ್ಯೆ, ಸೋನಿಯಾ ಗಾಂಧಿ ಅವರು ಇ.ಡಿ ಅಧಿಕಾರಿಗಳ ಎದುರು ಮೂರನೇ ದಿವಸ ತಮ್ಮ ಹೇಳಿಕೆ ದಾಖಲಿಸಿದರು.</p>.<p>ಬೆಳಿಗ್ಗೆ 11 ಗಂಟೆಗೆ ಇ.ಡಿ ಕಚೇರಿ ತಲುಪಿದ ಅವರು ವಿಚಾರಣೆ ಎದುರಿಸಿದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾಜತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>