‘ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು. ಪಕ್ಷದಲ್ಲಿರುವ ಮುಖಂಡರ ಕುರಿತು ವರಿಷ್ಠರು ಸಮರ್ಪಕ ಮೌಲ್ಯಮಾಪನ ಮಾಡುವುದು ಅಗತ್ಯ. ಪಕ್ಷದ ಮರುಸಂಘಟನೆಯಾಗಬೇಕು. ಪ್ರಮುಖ ಹುದ್ದೆಗಳಲ್ಲಿ ಸಮರ್ಥರನ್ನೇ ನೇಮಕ ಮಾಡಬೇಕು. ಪಕ್ಷವು ಆತ್ಮಾವಲೋಕನ ನಡೆಸಬೇಕು. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಒಂದು ಪಾಠವಾಗಬೇಕು’ ’ ಎಂದೂ ಮೊಯಿಲಿ ಪ್ರತಿಪಾದಿಸಿದರು.