ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದಲ್ಲಿ ನಾಯಕರ ಸೈದ್ಧಾಂತಿಕ ಬದ್ಧತೆ ಪರಿಶೀಲನೆ ಅಗತ್ಯ: ಎಂ.ವೀರಪ್ಪ ಮೊಯಿಲಿ

ಜಿತಿನ್ ಪ್ರಸಾದ್ ರಾಜೀನಾಮನೆ ಬೆನ್ನಲ್ಲೇ ಕಾಂಗ್ರೆಸ್‌ ವರಿಷ್ಠರಿಗೆ ಸಲಹೆ
Last Updated 10 ಜೂನ್ 2021, 9:15 IST
ಅಕ್ಷರ ಗಾತ್ರ

ನವದೆಹಲಿ: ‘ಪಕ್ಷದಲ್ಲಿ ಮುಖಂಡರಿಗೆ ಪ್ರಮುಖ ಹುದ್ದೆ, ಜವಾಬ್ದಾರಿಯನ್ನು ನೀಡುವ ವೇಳೆ ಪಕ್ಷದ ತತ್ವ–ಸಿದ್ಧಾಂತದ ಬಗ್ಗೆ ಅವರಲ್ಲಿನ ಬದ್ಧತೆಯನ್ನು ಪರಿಶೀಲಿಸಬೇಕು’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಗುರುವಾರ ಹೇಳಿದ್ದಾರೆ.

ಜಿತಿನ್ ಪ್ರಸಾದ್ ಅವರು ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮರುದಿನವೇ ಮೊಯಿಲಿ ಅವರಿಂದ ಈ ಅಭಿಪ್ರಾಯ ಹೊರಬಿದ್ದಿದೆ.

‘ಕಾಂಗ್ರೆಸ್‌ ಪಕ್ಷಕ್ಕೆ ‘ದೊಡ್ಡ ಶಸ್ತ್ರಚಿಕಿತ್ಸೆ’ಯ ಅಗತ್ಯವಿದೆ. ಕೇವಲ ವಂಶಪಾರಂಪರ್ಯವನ್ನು ಪರಿಗಣಿಸಿ ಮುಖಂಡರಿಗೆ ಮಣೆ ಹಾಕುವುದನ್ನು ನಿಲ್ಲಿಸಬೇಕು’ ಎಂದು ಅವರುಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

‘ಜಿತಿನ್‌ ಪ್ರಸಾದ್‌ ನೇತೃತ್ವದಲ್ಲಿಯೇ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಎದುರಿಸಲಾಯಿತು. ಪಕ್ಷಕ್ಕೆ ಒಂದೇ ಒಂದು ಸ್ಥಾನ ಸಿಗಲಿಲ್ಲ. ಅವರು ಅಸಮರ್ಥರು ಎಂಬುದನ್ನು ಇದು ಸಾಬೀತುಪಡಿಸಿತ್ತು’ ಎಂದು ಹೇಳಿದ್ದಾರೆ.

‘ಜಿತಿನ್‌ ಪ್ರಸಾದ್‌ ಅವರಿಗೆ ಪಕ್ಷಕ್ಕಿಂತ ವೈಯಕ್ತಿಕ ಮಹತ್ವಾಕಾಂಕ್ಷೆಯೇ ಮುಖ್ಯವಾಗಿತ್ತು. ಪಕ್ಷದ ತತ್ವ–ಸಿದ್ಧಾಂತದ ಬಗೆಗಿನ ಇವರ ಬದ್ಧತೆ ಬಗ್ಗೆ ಮೊದಲಿನಿಂದಲೂ ಸಂಶಯ ಇತ್ತು’ ಎಂದೂ ಆರೋಪಿಸಿದರು.

‘ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು. ಪಕ್ಷದಲ್ಲಿರುವ ಮುಖಂಡರ ಕುರಿತು ವರಿಷ್ಠರು ಸಮರ್ಪಕ ಮೌಲ್ಯಮಾಪನ ಮಾಡುವುದು ಅಗತ್ಯ. ಪಕ್ಷದ ಮರುಸಂಘಟನೆಯಾಗಬೇಕು. ಪ್ರಮುಖ ಹುದ್ದೆಗಳಲ್ಲಿ ಸಮರ್ಥರನ್ನೇ ನೇಮಕ ಮಾಡಬೇಕು. ಪಕ್ಷವು ಆತ್ಮಾವಲೋಕನ ನಡೆಸಬೇಕು. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಒಂದು ಪಾಠವಾಗಬೇಕು’ ’ ಎಂದೂ ಮೊಯಿಲಿ ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT