<div><strong>ನವದೆಹಲಿ:</strong> ದೇಶದಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕು ಪ್ರಕರಣಗಳಿಗೆ ಕಡಿವಾಣ ಹಾಕಲು ‘ಸಾರ್ವಜನಿಕ ಹಿತಾಸಕ್ತಿ ದೃಷ್ಟಿ’ಯಿಂದ ಲಾಕ್ಡೌನ್ ಹೇರುವ ಸಾಧ್ಯತೆಗಳನ್ನು ಪರಿಶೀಲಿಸಬೇಕು ಎಂದು ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.</div>.<div>ಮೂವರು ಸದಸ್ಯರ ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಡಿ.ವೈಚಂದ್ರಚೂಡ್ ಅವರು ಈ ಮಾತು ಹೇಳಿದರು. ಹೆಚ್ಚುತ್ತಿರುವ ಸೋಂಕಿನ ಹಿನ್ನೆಲೆಯಲ್ಲಿ ಭವಿಷ್ಯದ ಕಾರ್ಯಸೂಚಿ, ಕಾರ್ಯಕ್ರಮಗಳ ಕುರಿತು ಮೇ 10ರೊಳಗೆ ವರದಿ ಸಲ್ಲಿಸಬೇಕು ಎಂದು ಪೀಠ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸೂಚಿಸಿತು.</div>.<div>ಸೋಂಕು ತಡೆ ಕ್ರಮವಾಗಿ ವಿವಿಧ ರಾಜ್ಯಗಳಲ್ಲಿ ಕರ್ಫ್ಯೂಜಾರಿ ಸೇರಿದಂತೆ ಕೆಲವೊಂದು ನಿರ್ಬಂಧಗಳನ್ನು ವಿಧಿಸಿರುವಂತೆಯೇ ಸುಪ್ರೀಂ ಕೋರ್ಟ್ ಈ ಸಲಹೆ ನೀಡಿದೆ. ಸ್ವಯಂಪ್ರೇರಿತವಾಗಿ ಕೈಗೊಂಡ ಪ್ರಕರಣ ಕುರಿತು ಭಾನುವಾರ ಆದೇಶವನ್ನು ಬಿಡುಗಡೆ ಮಾಡಲಾಗಿದೆ.</div>.<div>‘ಲಾಕ್ಡೌನ್ನಿಂದಾಗುವ ಮುಖ್ಯವಾಗಿ ಸಮಾಜದ ನಿರ್ಲಕ್ಷ್ಯಿತ ಸಮುದಾಯಗಳ ಮೇಲೆ, ಒಟ್ಟಾಗಿ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಅರಿವು ನಮಗಿದೆ. ಒಂದು ವೇಳೆ ಲಾಕ್ಡೌನ್ ಅನ್ನು ಜಾರಿಗೊಳಿಸಿದರೆ, ಈ ವರ್ಗಗಳ ಅಗತ್ಯಗಳನ್ನು ಈಡೇರಿಸಲು ಸೂಕ್ತ ಕ್ರಮ ಜರುಗಿಸಬೇಕು‘ ಎಂದು ಸ್ಪಷ್ಟಪಡಿಸಿದೆ.</div>.<div>ಅಗತ್ಯ ಔಷಧಗಳು, ಆಮ್ಲಜನಕ ಮತ್ತು ಲಸಿಕೆಗಳನ್ನು ಖರೀದಿಸುವುದಕ್ಕೆ ಇರುವ ನೀತಿಯನ್ನು ಮರುಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ಮಾಡಿದ ಸುಪ್ರೀಂ ಕೋರ್ಟ್, ಆರೋಗ್ಯ ಆರೈಕೆ ಸಿಬ್ಬಂದಿ, ವೈದ್ಯರ ಕುಶಲವನ್ನು ಗಮನಿಸಬೇಕು ಎಂದು ಹೇಳಿದೆ.</div>.<div>‘ಇಂಥ ಸುರಕ್ಷತಾ ಕ್ರಮಗಳು ಕೇವಲ ವೈದ್ಯರಿಗಷ್ಟೇ ಅಲ್ಲ, ದಾದಿಯರು, ಆಸ್ಪತ್ರೆ ಸಿಬ್ಬಂದಿ, ಆಂಬುಲೆನ್ಸ್ ಸಿಬ್ಬಂದಿ, ಸ್ವಚ್ಚತಾ ಸಿಬ್ಬಂದಿ, ಚಿತಾಗಾರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಿತವನ್ನು ಈ ಪಿಡುಗಿನ ಸಂದರ್ಭದಲ್ಲಿ ಗಮನಿಸಬೇಕು’ ಎಂದು ತಿಳಿಸಿತು.</div>.<div><br />ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಮತ್ತ ಎಸ್.ರವೀಂದ್ರ ಭಟ್ ಅವರಿದ್ದ ಪೀಠವು, ಆರೋಗ್ಯ ಕಾರ್ಯಕರ್ತರಿಗೆ ಜಾರಿಗೊಳಿಸಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ವಿಮಾ ಭದ್ರತೆ ಯೋಜನೆಯ ಅವಧಿಯನ್ನು ಒಂದು ವರ್ಷ ವಿಸ್ತರಿಸಿರುವುದನ್ನು ಗಣನೆಗೆ ತೆಗೆದುಕೊಂಡಿತು.</div>.<div><br />ಯೋಜನೆಯಡಿ 168 ವೈದ್ಯರು ಸೇರಿದಂತೆ ಕೇವಲ 287 ಜನರ ಕುಟುಂಬಗಳಿಗೆ ಸಂಬಂಧಿಸಿದ ಕ್ಲೇಮುಗಳನ್ನಷ್ಟೇ ಇತ್ಯರ್ಥಪಡಿಸಿರುವುದನ್ನೂ ಅದು ಉಲ್ಲೇಖಿಸಿದೆ.</div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div><strong>ನವದೆಹಲಿ:</strong> ದೇಶದಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕು ಪ್ರಕರಣಗಳಿಗೆ ಕಡಿವಾಣ ಹಾಕಲು ‘ಸಾರ್ವಜನಿಕ ಹಿತಾಸಕ್ತಿ ದೃಷ್ಟಿ’ಯಿಂದ ಲಾಕ್ಡೌನ್ ಹೇರುವ ಸಾಧ್ಯತೆಗಳನ್ನು ಪರಿಶೀಲಿಸಬೇಕು ಎಂದು ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.</div>.<div>ಮೂವರು ಸದಸ್ಯರ ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಡಿ.ವೈಚಂದ್ರಚೂಡ್ ಅವರು ಈ ಮಾತು ಹೇಳಿದರು. ಹೆಚ್ಚುತ್ತಿರುವ ಸೋಂಕಿನ ಹಿನ್ನೆಲೆಯಲ್ಲಿ ಭವಿಷ್ಯದ ಕಾರ್ಯಸೂಚಿ, ಕಾರ್ಯಕ್ರಮಗಳ ಕುರಿತು ಮೇ 10ರೊಳಗೆ ವರದಿ ಸಲ್ಲಿಸಬೇಕು ಎಂದು ಪೀಠ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸೂಚಿಸಿತು.</div>.<div>ಸೋಂಕು ತಡೆ ಕ್ರಮವಾಗಿ ವಿವಿಧ ರಾಜ್ಯಗಳಲ್ಲಿ ಕರ್ಫ್ಯೂಜಾರಿ ಸೇರಿದಂತೆ ಕೆಲವೊಂದು ನಿರ್ಬಂಧಗಳನ್ನು ವಿಧಿಸಿರುವಂತೆಯೇ ಸುಪ್ರೀಂ ಕೋರ್ಟ್ ಈ ಸಲಹೆ ನೀಡಿದೆ. ಸ್ವಯಂಪ್ರೇರಿತವಾಗಿ ಕೈಗೊಂಡ ಪ್ರಕರಣ ಕುರಿತು ಭಾನುವಾರ ಆದೇಶವನ್ನು ಬಿಡುಗಡೆ ಮಾಡಲಾಗಿದೆ.</div>.<div>‘ಲಾಕ್ಡೌನ್ನಿಂದಾಗುವ ಮುಖ್ಯವಾಗಿ ಸಮಾಜದ ನಿರ್ಲಕ್ಷ್ಯಿತ ಸಮುದಾಯಗಳ ಮೇಲೆ, ಒಟ್ಟಾಗಿ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಅರಿವು ನಮಗಿದೆ. ಒಂದು ವೇಳೆ ಲಾಕ್ಡೌನ್ ಅನ್ನು ಜಾರಿಗೊಳಿಸಿದರೆ, ಈ ವರ್ಗಗಳ ಅಗತ್ಯಗಳನ್ನು ಈಡೇರಿಸಲು ಸೂಕ್ತ ಕ್ರಮ ಜರುಗಿಸಬೇಕು‘ ಎಂದು ಸ್ಪಷ್ಟಪಡಿಸಿದೆ.</div>.<div>ಅಗತ್ಯ ಔಷಧಗಳು, ಆಮ್ಲಜನಕ ಮತ್ತು ಲಸಿಕೆಗಳನ್ನು ಖರೀದಿಸುವುದಕ್ಕೆ ಇರುವ ನೀತಿಯನ್ನು ಮರುಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ಮಾಡಿದ ಸುಪ್ರೀಂ ಕೋರ್ಟ್, ಆರೋಗ್ಯ ಆರೈಕೆ ಸಿಬ್ಬಂದಿ, ವೈದ್ಯರ ಕುಶಲವನ್ನು ಗಮನಿಸಬೇಕು ಎಂದು ಹೇಳಿದೆ.</div>.<div>‘ಇಂಥ ಸುರಕ್ಷತಾ ಕ್ರಮಗಳು ಕೇವಲ ವೈದ್ಯರಿಗಷ್ಟೇ ಅಲ್ಲ, ದಾದಿಯರು, ಆಸ್ಪತ್ರೆ ಸಿಬ್ಬಂದಿ, ಆಂಬುಲೆನ್ಸ್ ಸಿಬ್ಬಂದಿ, ಸ್ವಚ್ಚತಾ ಸಿಬ್ಬಂದಿ, ಚಿತಾಗಾರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಿತವನ್ನು ಈ ಪಿಡುಗಿನ ಸಂದರ್ಭದಲ್ಲಿ ಗಮನಿಸಬೇಕು’ ಎಂದು ತಿಳಿಸಿತು.</div>.<div><br />ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರರಾವ್ ಮತ್ತ ಎಸ್.ರವೀಂದ್ರ ಭಟ್ ಅವರಿದ್ದ ಪೀಠವು, ಆರೋಗ್ಯ ಕಾರ್ಯಕರ್ತರಿಗೆ ಜಾರಿಗೊಳಿಸಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ವಿಮಾ ಭದ್ರತೆ ಯೋಜನೆಯ ಅವಧಿಯನ್ನು ಒಂದು ವರ್ಷ ವಿಸ್ತರಿಸಿರುವುದನ್ನು ಗಣನೆಗೆ ತೆಗೆದುಕೊಂಡಿತು.</div>.<div><br />ಯೋಜನೆಯಡಿ 168 ವೈದ್ಯರು ಸೇರಿದಂತೆ ಕೇವಲ 287 ಜನರ ಕುಟುಂಬಗಳಿಗೆ ಸಂಬಂಧಿಸಿದ ಕ್ಲೇಮುಗಳನ್ನಷ್ಟೇ ಇತ್ಯರ್ಥಪಡಿಸಿರುವುದನ್ನೂ ಅದು ಉಲ್ಲೇಖಿಸಿದೆ.</div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>