ಬದುರಿಯ/ಹಿಂಗಲ್ಗಂಜ್:‘ಜನಾದೇಶ ಸಿಗದು ಎಂಬುದು ಬಿಜೆಪಿಗೆ ಗೊತ್ತಾಗಿದೆ. ಹಾಗಾಗಿ, ಆ ಪಕ್ಷವು ಜನರನ್ನು ಕೊಲ್ಲುವ ಪಿತೂರಿ ನಡೆಸಿದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಈ ಷಡ್ಯಂತ್ರ ಮಾಡಿದ್ದಾರೆ. ಹಾಗಾಗಿ, ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.