<p><strong>ಬದುರಿಯ/ಹಿಂಗಲ್ಗಂಜ್:</strong>‘ಜನಾದೇಶ ಸಿಗದು ಎಂಬುದು ಬಿಜೆಪಿಗೆ ಗೊತ್ತಾಗಿದೆ. ಹಾಗಾಗಿ, ಆ ಪಕ್ಷವು ಜನರನ್ನು ಕೊಲ್ಲುವ ಪಿತೂರಿ ನಡೆಸಿದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಈ ಷಡ್ಯಂತ್ರ ಮಾಡಿದ್ದಾರೆ. ಹಾಗಾಗಿ, ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಸೀತಾಲಕುಚಿ ಘಟನೆಗೆ ಸಂಬಂಧಿಸಿ ಜನರು ಶಾಂತಿ ಕಾಯ್ದುಕೊಳ್ಳಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.</p>.<p>ಕೇಂದ್ರೀಯ ಪಡೆಗಳು ಹೀಗೆ ವರ್ತಿಸಬಹುದು ಎಂಬ ಭೀತಿ ತಮ್ಮಲ್ಲಿ ಮೊದಲೇ ಇತ್ತು. ಆದರೆ, ಜನರು ಶಾಂತಿಯುತವಾಗಿ ಮತದಾನ ಮಾಡಬೇಕು. ಅವರನ್ನು ಸೋಲಿಸುವ ಮೂಲಕ ಈ ಸಾವಿಗೆ ಪ್ರತೀಕಾರ ತೀರಿಸಿ ಎಂದು ಮಮತಾ ಹೇಳಿದ್ದಾರೆ.</p>.<p>ಮತದಾನಕ್ಕಾಗಿ ಸರದಿಯಲ್ಲಿ ನಿಂತಿದ್ದ ಜನರ ಮೇಲೆ ಕೇಂದ್ರೀಯ ಪಡೆಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದೂ ಅವರು ಆಪಾದಿಸಿದ್ದಾರೆ. ಭಾನುವಾರ ಮಧ್ಯಾಹ್ನ 2ರಿಂದ 4 ಗಂಟೆ ವರೆಗೆ ರಾಜ್ಯದಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಪಕ್ಷದ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಬೇಕು ಎಂದು ಅವರು ಸೂಚಿಸಿದ್ದಾರೆ.</p>.<p>ಮೂರು ವರ್ಷ ಹಿಂದೆ ನಡೆದ ಪಂಚಾಯಿತಿ ಚುನಾವಣೆಗಿಂತ ಈ ಬಾರಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಚುನಾವಣೆ ಘೋಷಣೆಯಾದಾಗಿನಿಂದ ಕೊಲೆಯಾದವರ ಲೆಕ್ಕ ಹಾಕಿದರೆ 17–18 ಮಂದಿ ಜೀವ ಕಳೆದುಕೊಂಡಿದ್ದಾರೆ. ಅವರಲ್ಲಿ 12 ಮಂದಿಯಾದರೂ ಟಿಎಂಸಿಯವರು ಇದ್ದಾರೆ ಎಂದು ಸೀತಾಲಕುಚಿ ಅವರು ಹೇಳಿದ್ದಾರೆ.</p>.<p>‘ಸೀತಾಲಕುಚಿಯಲ್ಲಿನ ಘಟನೆಗೆ ಚುನಾವಣಾ ಆಯೋಗ ಕೂಡ ವಿವರಣೆ ನೀಡಬೇಕು. ಏಕೆಂದರೆ, ಆಡಳಿತದ ಹೊಣೆಯು ಈಗ ನಮ್ಮ ಕೈಯಲ್ಲಿ ಇಲ್ಲ. ಅದನ್ನು ಚುನಾವಣಾ ಆಯೋಗವು ನೋಡಿಕೊಳ್ಳುತ್ತಿದೆ’ ಎಂದಿದ್ದಾರೆ.</p>.<p>‘ಸ್ವರಕ್ಷಣೆ’ ವರದಿಗೆ ಆಕ್ಷೇಪ:ಸ್ವರಕ್ಷಣೆಗಾಗಿ ಸಿಐಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂಬ ವರದಿಗೆ ಮಮತಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಸಲಾಗುವುದು ಎಂದಿದ್ದಾರೆ. ಕೇಂದ್ರೀಯ ಪಡೆಗಳ ಹೇಳಿಕೆಯನ್ನು ಸಮರ್ಥಿಸುವ ವಿಡಿಯೊ ದೃಶ್ಯಗಳಾಗಲಿ, ಬೇರೆ ಸಾಕ್ಷ್ಯಗಳಾಗಲಿ ಇಲ್ಲ. ಹಾಗಿರುವಾಗ ಸ್ವರಕ್ಷಣೆಗಾಗಿ ಗುಂಡು ಹಾರಿಸಿದರು ಎಂಬುದನ್ನು ನಂಬುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದುರಿಯ/ಹಿಂಗಲ್ಗಂಜ್:</strong>‘ಜನಾದೇಶ ಸಿಗದು ಎಂಬುದು ಬಿಜೆಪಿಗೆ ಗೊತ್ತಾಗಿದೆ. ಹಾಗಾಗಿ, ಆ ಪಕ್ಷವು ಜನರನ್ನು ಕೊಲ್ಲುವ ಪಿತೂರಿ ನಡೆಸಿದೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಈ ಷಡ್ಯಂತ್ರ ಮಾಡಿದ್ದಾರೆ. ಹಾಗಾಗಿ, ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಸೀತಾಲಕುಚಿ ಘಟನೆಗೆ ಸಂಬಂಧಿಸಿ ಜನರು ಶಾಂತಿ ಕಾಯ್ದುಕೊಳ್ಳಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ.</p>.<p>ಕೇಂದ್ರೀಯ ಪಡೆಗಳು ಹೀಗೆ ವರ್ತಿಸಬಹುದು ಎಂಬ ಭೀತಿ ತಮ್ಮಲ್ಲಿ ಮೊದಲೇ ಇತ್ತು. ಆದರೆ, ಜನರು ಶಾಂತಿಯುತವಾಗಿ ಮತದಾನ ಮಾಡಬೇಕು. ಅವರನ್ನು ಸೋಲಿಸುವ ಮೂಲಕ ಈ ಸಾವಿಗೆ ಪ್ರತೀಕಾರ ತೀರಿಸಿ ಎಂದು ಮಮತಾ ಹೇಳಿದ್ದಾರೆ.</p>.<p>ಮತದಾನಕ್ಕಾಗಿ ಸರದಿಯಲ್ಲಿ ನಿಂತಿದ್ದ ಜನರ ಮೇಲೆ ಕೇಂದ್ರೀಯ ಪಡೆಯ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದೂ ಅವರು ಆಪಾದಿಸಿದ್ದಾರೆ. ಭಾನುವಾರ ಮಧ್ಯಾಹ್ನ 2ರಿಂದ 4 ಗಂಟೆ ವರೆಗೆ ರಾಜ್ಯದಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಪಕ್ಷದ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಬೇಕು ಎಂದು ಅವರು ಸೂಚಿಸಿದ್ದಾರೆ.</p>.<p>ಮೂರು ವರ್ಷ ಹಿಂದೆ ನಡೆದ ಪಂಚಾಯಿತಿ ಚುನಾವಣೆಗಿಂತ ಈ ಬಾರಿ ಸಾವಿನ ಸಂಖ್ಯೆ ಹೆಚ್ಚಾಗಿದೆ. ಚುನಾವಣೆ ಘೋಷಣೆಯಾದಾಗಿನಿಂದ ಕೊಲೆಯಾದವರ ಲೆಕ್ಕ ಹಾಕಿದರೆ 17–18 ಮಂದಿ ಜೀವ ಕಳೆದುಕೊಂಡಿದ್ದಾರೆ. ಅವರಲ್ಲಿ 12 ಮಂದಿಯಾದರೂ ಟಿಎಂಸಿಯವರು ಇದ್ದಾರೆ ಎಂದು ಸೀತಾಲಕುಚಿ ಅವರು ಹೇಳಿದ್ದಾರೆ.</p>.<p>‘ಸೀತಾಲಕುಚಿಯಲ್ಲಿನ ಘಟನೆಗೆ ಚುನಾವಣಾ ಆಯೋಗ ಕೂಡ ವಿವರಣೆ ನೀಡಬೇಕು. ಏಕೆಂದರೆ, ಆಡಳಿತದ ಹೊಣೆಯು ಈಗ ನಮ್ಮ ಕೈಯಲ್ಲಿ ಇಲ್ಲ. ಅದನ್ನು ಚುನಾವಣಾ ಆಯೋಗವು ನೋಡಿಕೊಳ್ಳುತ್ತಿದೆ’ ಎಂದಿದ್ದಾರೆ.</p>.<p>‘ಸ್ವರಕ್ಷಣೆ’ ವರದಿಗೆ ಆಕ್ಷೇಪ:ಸ್ವರಕ್ಷಣೆಗಾಗಿ ಸಿಐಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂಬ ವರದಿಗೆ ಮಮತಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಸಿಐಡಿ ತನಿಖೆ ನಡೆಸಲಾಗುವುದು ಎಂದಿದ್ದಾರೆ. ಕೇಂದ್ರೀಯ ಪಡೆಗಳ ಹೇಳಿಕೆಯನ್ನು ಸಮರ್ಥಿಸುವ ವಿಡಿಯೊ ದೃಶ್ಯಗಳಾಗಲಿ, ಬೇರೆ ಸಾಕ್ಷ್ಯಗಳಾಗಲಿ ಇಲ್ಲ. ಹಾಗಿರುವಾಗ ಸ್ವರಕ್ಷಣೆಗಾಗಿ ಗುಂಡು ಹಾರಿಸಿದರು ಎಂಬುದನ್ನು ನಂಬುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>