ಸಂವಿಧಾನದ 127ನೇ ತಿದ್ದುಪಡಿ ಮಸೂದೆಯು ಸೋಮವಾರ ಲೋಕಸಭೆಯಲ್ಲಿ ಮಂಡನೆಯಾಗಲಿದ್ದು, ಪೆಗಾಸಸ್ ಪ್ರಕರಣದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಪಟ್ಟುಹಿಡಿದು ನಡೆಸುತ್ತಿರುವ ಪ್ರತಿಭಟನೆಯನ್ನು ಪ್ರತಿಪಕ್ಷಗಳು ನಿಲ್ಲಿಸುವ ಸಾಧ್ಯತೆಯಿದೆ. ಕಲಾಪಕ್ಕೆ ಅಡ್ಡಿಪಡಿಸಿದಲ್ಲಿ, ಒಬಿಸಿ ವರ್ಗ ಗುರುತಿಸುವ ಅಧಿಕಾರ ರಾಜ್ಯಗಳಿಗೆ ಕೊಡಲು ಪ್ರತಿಪಕ್ಷಗಳು ಅಡ್ಡಿಯಾದವು ಎಂದು ಸರ್ಕಾರ ಹೇಳಬಹುದು. ಇದು ಉತ್ತರಪ್ರದೇಶ ಮತ್ತು ಪಂಜಾಬ್ ವಿಧಾನಸಭೆಗೆ ಕೆಲವೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಪರಿಣಾಮ ಬೀರಬಹುದು ಎಂಬ ಕಳವಳ ವಿರೋಧ ಪಕ್ಷ
ಗಳಲ್ಲಿ ಇದೆ.