<p><strong>ನವದೆಹಲ</strong>: ‘ದೇಶದ್ರೋಹ’ದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ದೇಶದ್ರೋಹವನ್ನು ಅಪರಾಧ ಎಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆಯ 124ಎ ವಿಧಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಯು.ಯು. ಲಲಿತ್, ಇಂದಿರಾ ಬ್ಯಾನರ್ಜಿ ಮತ್ತು ಕೆ.ಎಂ. ಜೋಸೆಫ್ ಅವರ ಪೀಠವು ವಿಚಾರಣೆ ನಡೆಸಿತು.</p>.<p>ಪತ್ರಕರ್ತರಾದ ಮಣಿಪುರದ ಕಿಶೋರ್ಚಂದ್ರ ವಾಂಗ್ಖೇಮ್ಚಾ ಮತ್ತು ಛತ್ತೀಸಗಡದ ಕನ್ಹಯ್ಯ ಲಾಲ್ ಶುಕ್ಲಾ ಅವರು ಅರ್ಜಿ ಸಲ್ಲಿಸಿದ್ದರು. 1860ರ ಈ ಕಾಯ್ದೆಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರ್ಟ್ಗೆ ಒತ್ತಾಯಿಸಿದ್ದರು.</p>.<p>ಅರ್ಜಿದಾರರು ತಮ್ಮ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆ ಎತ್ತಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಕಾಮೆಂಟ್ಗಳು ಮತ್ತು ವ್ಯಂಗ್ಯಚಿತ್ರಗಳಿಗಾಗಿ ತಮ್ಮ ಮೇಲೆ 124 ಎ ವಿಧಿ ಅಡಿಯಲ್ಲಿ ದೇಶದ್ರೋಹದ ಆರೋಪ ಹೊರಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>1962ರಿಂದಲೂ ಈ ವಿಧಿಯನ್ನು ಸತತವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರಸ್ತುತ ಕಾನೂನಿನಲ್ಲಿರುವ ಅಸ್ಪಷ್ಟತೆಯ ಲಾಭ ಪಡೆಯಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>ಜಗತ್ತಿನಾದ್ಯಂತ ವಸಾಹತುಶಾಹಿ ನಂತರದ ಪ್ರಜಾಪ್ರಭುತ್ವವಾದಿ ದೇಶಗಳು, ದೇಶದ್ರೋಹದ ವಿಧಿಗಳನ್ನು ರದ್ದುಗೊಳಿಸಿವೆ. ಭಾರತವು ತನ್ನನ್ನು ‘ಪ್ರಜಾಪ್ರಭುತ್ವವಾದಿ’ ದೇಶ ಎಂದು ಕರೆದುಕೊಳ್ಳುತ್ತದೆ. ಆದರೆ ದೇಶದ್ರೋಹದ ಅಪರಾಧವನ್ನು ‘ಪ್ರಜಾಪ್ರಭುತ್ವ ವಿರೋಧಿ’, ಅನಪೇಕ್ಷಿತ ಮತ್ತು ಅನಗತ್ಯವೆಂದುಪ್ರಪಂಚದಾದ್ಯಂತ ಖಂಡಿಸಲಾಗುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.</p>.<p>1962ರಲ್ಲಿ ಕೇದಾರನಾಥ್ ಸಿಂಗ್ ವರ್ಸಸ್ ಬಿಹಾರ ರಾಜ್ಯದ ಪ್ರಕರಣದಲ್ಲಿ ಕಾನೂನಿನ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದ ತೀರ್ಪನ್ನು ಅರ್ಜಿದಾರರು ಉಲ್ಲೇಖಿಸಿದ್ದಾರೆ. ಸುಮಾರು ಆರು ದಶಕಗಳ ಹಿಂದೆ ನ್ಯಾಯಾಲಯಕ್ಕೆ ಕಾನೂನು ಸರಿ ಕಂಡಿರಬಹುದು. ಆದರೆ ಆ ಕಾನೂನು ಇಂದು ಸಾಂವಿಧಾನಿಕ ಮೌಲ್ಯ ಹೊಂದಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲ</strong>: ‘ದೇಶದ್ರೋಹ’ದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ದೇಶದ್ರೋಹವನ್ನು ಅಪರಾಧ ಎಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆಯ 124ಎ ವಿಧಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಯು.ಯು. ಲಲಿತ್, ಇಂದಿರಾ ಬ್ಯಾನರ್ಜಿ ಮತ್ತು ಕೆ.ಎಂ. ಜೋಸೆಫ್ ಅವರ ಪೀಠವು ವಿಚಾರಣೆ ನಡೆಸಿತು.</p>.<p>ಪತ್ರಕರ್ತರಾದ ಮಣಿಪುರದ ಕಿಶೋರ್ಚಂದ್ರ ವಾಂಗ್ಖೇಮ್ಚಾ ಮತ್ತು ಛತ್ತೀಸಗಡದ ಕನ್ಹಯ್ಯ ಲಾಲ್ ಶುಕ್ಲಾ ಅವರು ಅರ್ಜಿ ಸಲ್ಲಿಸಿದ್ದರು. 1860ರ ಈ ಕಾಯ್ದೆಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರ್ಟ್ಗೆ ಒತ್ತಾಯಿಸಿದ್ದರು.</p>.<p>ಅರ್ಜಿದಾರರು ತಮ್ಮ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರಶ್ನೆ ಎತ್ತಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಕಾಮೆಂಟ್ಗಳು ಮತ್ತು ವ್ಯಂಗ್ಯಚಿತ್ರಗಳಿಗಾಗಿ ತಮ್ಮ ಮೇಲೆ 124 ಎ ವಿಧಿ ಅಡಿಯಲ್ಲಿ ದೇಶದ್ರೋಹದ ಆರೋಪ ಹೊರಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>1962ರಿಂದಲೂ ಈ ವಿಧಿಯನ್ನು ಸತತವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರಸ್ತುತ ಕಾನೂನಿನಲ್ಲಿರುವ ಅಸ್ಪಷ್ಟತೆಯ ಲಾಭ ಪಡೆಯಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>ಜಗತ್ತಿನಾದ್ಯಂತ ವಸಾಹತುಶಾಹಿ ನಂತರದ ಪ್ರಜಾಪ್ರಭುತ್ವವಾದಿ ದೇಶಗಳು, ದೇಶದ್ರೋಹದ ವಿಧಿಗಳನ್ನು ರದ್ದುಗೊಳಿಸಿವೆ. ಭಾರತವು ತನ್ನನ್ನು ‘ಪ್ರಜಾಪ್ರಭುತ್ವವಾದಿ’ ದೇಶ ಎಂದು ಕರೆದುಕೊಳ್ಳುತ್ತದೆ. ಆದರೆ ದೇಶದ್ರೋಹದ ಅಪರಾಧವನ್ನು ‘ಪ್ರಜಾಪ್ರಭುತ್ವ ವಿರೋಧಿ’, ಅನಪೇಕ್ಷಿತ ಮತ್ತು ಅನಗತ್ಯವೆಂದುಪ್ರಪಂಚದಾದ್ಯಂತ ಖಂಡಿಸಲಾಗುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.</p>.<p>1962ರಲ್ಲಿ ಕೇದಾರನಾಥ್ ಸಿಂಗ್ ವರ್ಸಸ್ ಬಿಹಾರ ರಾಜ್ಯದ ಪ್ರಕರಣದಲ್ಲಿ ಕಾನೂನಿನ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದ ತೀರ್ಪನ್ನು ಅರ್ಜಿದಾರರು ಉಲ್ಲೇಖಿಸಿದ್ದಾರೆ. ಸುಮಾರು ಆರು ದಶಕಗಳ ಹಿಂದೆ ನ್ಯಾಯಾಲಯಕ್ಕೆ ಕಾನೂನು ಸರಿ ಕಂಡಿರಬಹುದು. ಆದರೆ ಆ ಕಾನೂನು ಇಂದು ಸಾಂವಿಧಾನಿಕ ಮೌಲ್ಯ ಹೊಂದಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>