<p><strong>ಅಲಹಾಬಾದ್:</strong> ಕೇವಲ ವಿವಾಹದ ಉದ್ದೇಶದಿಂದ ಆದ ಮತಾಂತರವು ಮಾನ್ಯವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಪ್ರಕರಣವೊಂದರಲ್ಲಿ ಹೇಳಿದೆ.</p>.<p>ಹೊಸದಾಗಿ ಮದುವೆಯಾದ ದಂಪತಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿದೆ. ತಮ್ಮ ವೈವಾಹಿಕ ಜೀವನಕ್ಕೆ ತೊಂದರೆ ನೀಡದಂತೆ ಪೊಲೀಸರಿಗೆ ಮತ್ತು ಮಹಿಳೆಯ ತಂದೆಗೆ ನಿರ್ದೇಶನ ನೀಡಲು ಕೋರಿ ದಂಪತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ಕಳೆದ ತಿಂಗಳು ಪ್ರಿಯಾನ್ಶಿ ಅಲಿಯಾಸ್ ಸಮ್ರೀನ್ ಮತ್ತು ಆಕೆಯ ಪತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಮೂರ್ತಿ ಎಂ.ಸಿ. ತ್ರಿಪಾಠಿ ಈ ಆದೇಶವನ್ನು ನೀಡಿದ್ದಾರೆ.</p>.<p>ಅರ್ಜಿಯಲ್ಲಿ, ಈ ವರ್ಷ ಜುಲೈನಲ್ಲಿ ದಂಪತಿ ವಿವಾಹವಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ ಮಹಿಳೆ ಕುಟುಂಬ ಸದಸ್ಯರು ತಮ್ಮ ವೈವಾಹಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ದೂರಿದ್ದರು.</p>.<p>ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಅರ್ಜಿದಾರರು ಜೂನ್ 29, 2020 ರಂದು ಮದುವೆಗೂ ಒಂದು ತಿಂಗಳು ಮೊದಲು ಅನ್ಯ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅವರು ಜುಲೈ 31, 2020 ರಂದು ತಮ್ಮ ಮದುವೆಯನ್ನು ದೃಢೀಕರಿಸಿರುವುದು ನ್ಯಾಯಾಲಯಕ್ಕೆ ಸ್ಪಷ್ಟವಾಗಿ ತಿಳಿಯುತ್ತಿದೆ. ಈ ಮತಾಂತರವು ವಿವಾಹದ ಉದ್ದೇಶಕ್ಕಾಗಿ ಮಾತ್ರ ನಡೆದಿದೆ ಎಂಜು ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ ತಿಳಿಸಿದೆ.</p>.<p>2014ರಲ್ಲಿ ಕೇವಲ ವಿವಾಹದ ಉದ್ದೇಶಕ್ಕಾಗಿ ಮತಾಂತರವಾಗುವುದು ಸ್ವೀಕಾರಾರ್ಹವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿರುವ ನೂರ್ ಜಹಾನ್ ಬೇಗಂ ಅವರ ಪ್ರಕರಣವನ್ನು ನ್ಯಾಯಾಲಯ ಉಲ್ಲೇಖಿಸಿದೆ.</p>.<p>ಈ ಪ್ರಕರಣದಲ್ಲಿ ಹಿಂದೂ ಬಾಲಕಿ ಇಸ್ಲಾಂಗೆ ಮತಾಂತರಗೊಂಡ ನಂತರ ಮದುವೆಯಾದ ಕಾರಣ ವಿವಾಹಿತ ದಂಪತಿಗೆ ರಕ್ಷಣೆ ನೀಡುವಂತೆ ನೂರ್ ಜಹಾನ್ ಬೇಗಂ ನ್ಯಾಯಾಲಯವನ್ನು ಕೋರಿದ್ದರು. ಈ ಪ್ರಕರಣದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಲಹಾಬಾದ್:</strong> ಕೇವಲ ವಿವಾಹದ ಉದ್ದೇಶದಿಂದ ಆದ ಮತಾಂತರವು ಮಾನ್ಯವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಪ್ರಕರಣವೊಂದರಲ್ಲಿ ಹೇಳಿದೆ.</p>.<p>ಹೊಸದಾಗಿ ಮದುವೆಯಾದ ದಂಪತಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸುವಾಗ ನ್ಯಾಯಾಲಯ ಈ ಹೇಳಿಕೆ ನೀಡಿದೆ. ತಮ್ಮ ವೈವಾಹಿಕ ಜೀವನಕ್ಕೆ ತೊಂದರೆ ನೀಡದಂತೆ ಪೊಲೀಸರಿಗೆ ಮತ್ತು ಮಹಿಳೆಯ ತಂದೆಗೆ ನಿರ್ದೇಶನ ನೀಡಲು ಕೋರಿ ದಂಪತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ಕಳೆದ ತಿಂಗಳು ಪ್ರಿಯಾನ್ಶಿ ಅಲಿಯಾಸ್ ಸಮ್ರೀನ್ ಮತ್ತು ಆಕೆಯ ಪತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಮೂರ್ತಿ ಎಂ.ಸಿ. ತ್ರಿಪಾಠಿ ಈ ಆದೇಶವನ್ನು ನೀಡಿದ್ದಾರೆ.</p>.<p>ಅರ್ಜಿಯಲ್ಲಿ, ಈ ವರ್ಷ ಜುಲೈನಲ್ಲಿ ದಂಪತಿ ವಿವಾಹವಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ ಮಹಿಳೆ ಕುಟುಂಬ ಸದಸ್ಯರು ತಮ್ಮ ವೈವಾಹಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ದೂರಿದ್ದರು.</p>.<p>ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಅರ್ಜಿದಾರರು ಜೂನ್ 29, 2020 ರಂದು ಮದುವೆಗೂ ಒಂದು ತಿಂಗಳು ಮೊದಲು ಅನ್ಯ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಅವರು ಜುಲೈ 31, 2020 ರಂದು ತಮ್ಮ ಮದುವೆಯನ್ನು ದೃಢೀಕರಿಸಿರುವುದು ನ್ಯಾಯಾಲಯಕ್ಕೆ ಸ್ಪಷ್ಟವಾಗಿ ತಿಳಿಯುತ್ತಿದೆ. ಈ ಮತಾಂತರವು ವಿವಾಹದ ಉದ್ದೇಶಕ್ಕಾಗಿ ಮಾತ್ರ ನಡೆದಿದೆ ಎಂಜು ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಾಲಯ ತಿಳಿಸಿದೆ.</p>.<p>2014ರಲ್ಲಿ ಕೇವಲ ವಿವಾಹದ ಉದ್ದೇಶಕ್ಕಾಗಿ ಮತಾಂತರವಾಗುವುದು ಸ್ವೀಕಾರಾರ್ಹವಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿರುವ ನೂರ್ ಜಹಾನ್ ಬೇಗಂ ಅವರ ಪ್ರಕರಣವನ್ನು ನ್ಯಾಯಾಲಯ ಉಲ್ಲೇಖಿಸಿದೆ.</p>.<p>ಈ ಪ್ರಕರಣದಲ್ಲಿ ಹಿಂದೂ ಬಾಲಕಿ ಇಸ್ಲಾಂಗೆ ಮತಾಂತರಗೊಂಡ ನಂತರ ಮದುವೆಯಾದ ಕಾರಣ ವಿವಾಹಿತ ದಂಪತಿಗೆ ರಕ್ಷಣೆ ನೀಡುವಂತೆ ನೂರ್ ಜಹಾನ್ ಬೇಗಂ ನ್ಯಾಯಾಲಯವನ್ನು ಕೋರಿದ್ದರು. ಈ ಪ್ರಕರಣದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>