ಹೈದರಾಬಾದ್: ಆಕಸ್ಮಿಕವಾಗಿ ಹಾರಿದ ಗುಂಡಿನಿಂದ ವಿಶೇಷ ರಕ್ಷಣಾ ಪಡೆ (ಎಸ್ಪಿಎಫ್) ಕಾನ್ಸ್ಟೆಬಲ್ ಒಬ್ಬರು ಭಾನುವಾರ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ರಾಣಿಗಂಜ್ನಲ್ಲಿರುವ ರಾಷ್ಟ್ರೀಕೃತ ಬ್ಯಾಂಕ್ನ ರಕ್ಷಣೆಗಾಗಿ ಕಾನ್ಸ್ಟೆಬಲ್ ಅವರನ್ನು ನಿಯೋಜಿಸಲಾಗಿತ್ತು. ರೈಫಲ್ನಿಂದ ಆಕಸ್ಮಿಕವಾಗಿ ಹಾರಿದ ಗುಂಡು ಕಾನ್ಸ್ಟೆಬಲ್ ಗಲ್ಲವನ್ನು ಛಿದ್ರಗೊಳಿಸಿದೆ. ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಅವರು ವಿವರಿಸಿದ್ದಾರೆ.
ಇತರ ಮೂವರು ಸಿಬ್ಬಂದಿ ಅವಘಡ ನಡೆದ ಸ್ಥಳದಲ್ಲಿಯೇ ಇದ್ದರು. ಅವರಿಂದ ಹೇಳಿಕೆ ಪಡೆಯಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.