<p><strong>ನವದೆಹಲಿ: </strong>ವಿಶ್ವಸಂಸ್ಥೆಯು ಹವಾಮಾನ ಒಪ್ಪಂದಕ್ಕೆ ಸಂಬಂಧಿಸಿದ ಮೊದಲ ಅನೌಪಚಾರಿಕ ಕರಡು ಪ್ರತಿಯನ್ನು ಗುರುವಾರ ಪ್ರಕಟಿಸಿದೆ. ಎಲ್ಲಾ ಬಗೆಯ ಪಳೆಯುಳಿಕೆ ಇಂಧನಗಳನ್ನು ತ್ಯಜಿಸುವ ಕುರಿತ ಭಾರತದ ಪ್ರಸ್ತಾವನೆಯನ್ನು ಇದರಲ್ಲಿ ಸೇರ್ಪಡೆ ಮಾಡಿಲ್ಲ.</p>.<p>ಪಳೆಯುಳಿಕೆ ಇಂಧನಗಳು ಮಾಲಿನ್ಯಕ್ಕೆ ದಾರಿ ಮಾಡಿಕೊಡುತ್ತವೆ. ಹೀಗಾಗಿ ಇವುಗಳ ಬಳಕೆ ತಗ್ಗಿಸಬೇಕೆಂದು ಭಾರತವುವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ (ಸಿಒಪಿ–27) ಒತ್ತಿ ಹೇಳಿತ್ತು. ಯುರೋಪಿಯನ್ ಒಕ್ಕೂಟ ಹಾಗೂ ಇತರ ರಾಷ್ಟ್ರಗಳು ಇದಕ್ಕೆ ಸಹಮತ ವ್ಯಕ್ತಪಡಿಸಿದ್ದವು.</p>.<p>ದೇಶಗಳ ಅಗತ್ಯತೆ ಹಾಗೂ ಬೇಡಿಕೆಯನ್ನು ಪ್ರತಿಬಿಂಬಿಸುವ ಈ ಕರಡು ಪ್ರತಿಯಲ್ಲಿ, ಕಲ್ಲಿದ್ದಲು ಇಂಧನದ ಮಿತಿಮೀರಿದ ಬಳಕೆಗೆ ಕಡಿವಾಣ ಹಾಕುವ ದಿಸೆಯಲ್ಲಿ ನಡೆಯುತ್ತಿರುವ ಪ್ರಯತ್ನಗಳನ್ನು ಇನ್ನಷ್ಟು ತೀವ್ರಗೊಳಿಸುವ ಹಾಗೂ ಪರಿಣಾಮಕಾರಿಯಲ್ಲದ ಪಳೆಯುಳಿಕೆ ಇಂಧನಕ್ಕೆ ನೀಡಲಾಗುತ್ತಿರುವ ಸಹಾಯಧನ ರದ್ದುಗೊಳಿಸುವುದನ್ನು ಉತ್ತೇಜಿಸುವ ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ.</p>.<p>‘ಆರ್ಥಿಕ ಮತ್ತು ತಾಂತ್ರಿಕವಾಗಿ ಸಶಕ್ತವಾಗಿರುವ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು, ಹಸಿರು ಮನೆ ಅನಿಲ ಹೊರಸೂಸುವಿಕೆ ತಗ್ಗಿಸುವಲ್ಲಿ ಪದೇ ಪದೇ ವಿಫಲವಾಗುತ್ತಿವೆ’ ಎಂದು ವರದಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.</p>.<p>ಹವಾಮಾನ ಬದಲಾವಣೆಯಿಂದಾಗುವ ನಷ್ಟ ಹಾಗೂ ಹಾನಿಯನ್ನು ಸರಿದೂಗಿಸಲು ಅಗತ್ಯ ಹಣಕಾಸಿನ ನೆರವು ಒದಗಿಸಬೇಕೆಂದು ಬಡ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳು ಸಿಒಪಿ–27ರಲ್ಲಿ ಒತ್ತಾಯಿಸಿದ್ದವು. ಈ ನೆರವನ್ನು ಯಾವಾಗ ನೀಡಲಾಗುತ್ತದೆ. ಅದರ ಸ್ವರೂಪ ಏನು ಎಂಬುದನ್ನು ಕರಡು ಪ್ರತಿಯಲ್ಲಿ ಉಲ್ಲೇಖಿಸಿಲ್ಲ.</p>.<p>ಪ್ಯಾರಿಸ್ ಒಪ್ಪಂದದ ಅನುಸಾರ ಜಾಗತಿಕ ತಾಪಮಾನದ ಏರಿಕೆಯನ್ನು 1.5 ಡಿಗ್ರಿ ಸೆಲ್ಷಿಯಸ್ಗೆ ಮಿತಗೊಳಿಸಬೇಕು. ಈ ಗುರಿ ಸಾಧಿಸಲು ಎಲ್ಲಾ ಹಂತಗಳಲ್ಲೂ ಎಲ್ಲಾ ಬಗೆಯ ಪ್ರಯತ್ನಗಳನ್ನು ನಡೆಸಬೇಕು ಎಂದು20 ಪುಟಗಳ ಕರಡು ಪ್ರತಿಯಲ್ಲಿ ಒತ್ತಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿಶ್ವಸಂಸ್ಥೆಯು ಹವಾಮಾನ ಒಪ್ಪಂದಕ್ಕೆ ಸಂಬಂಧಿಸಿದ ಮೊದಲ ಅನೌಪಚಾರಿಕ ಕರಡು ಪ್ರತಿಯನ್ನು ಗುರುವಾರ ಪ್ರಕಟಿಸಿದೆ. ಎಲ್ಲಾ ಬಗೆಯ ಪಳೆಯುಳಿಕೆ ಇಂಧನಗಳನ್ನು ತ್ಯಜಿಸುವ ಕುರಿತ ಭಾರತದ ಪ್ರಸ್ತಾವನೆಯನ್ನು ಇದರಲ್ಲಿ ಸೇರ್ಪಡೆ ಮಾಡಿಲ್ಲ.</p>.<p>ಪಳೆಯುಳಿಕೆ ಇಂಧನಗಳು ಮಾಲಿನ್ಯಕ್ಕೆ ದಾರಿ ಮಾಡಿಕೊಡುತ್ತವೆ. ಹೀಗಾಗಿ ಇವುಗಳ ಬಳಕೆ ತಗ್ಗಿಸಬೇಕೆಂದು ಭಾರತವುವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ (ಸಿಒಪಿ–27) ಒತ್ತಿ ಹೇಳಿತ್ತು. ಯುರೋಪಿಯನ್ ಒಕ್ಕೂಟ ಹಾಗೂ ಇತರ ರಾಷ್ಟ್ರಗಳು ಇದಕ್ಕೆ ಸಹಮತ ವ್ಯಕ್ತಪಡಿಸಿದ್ದವು.</p>.<p>ದೇಶಗಳ ಅಗತ್ಯತೆ ಹಾಗೂ ಬೇಡಿಕೆಯನ್ನು ಪ್ರತಿಬಿಂಬಿಸುವ ಈ ಕರಡು ಪ್ರತಿಯಲ್ಲಿ, ಕಲ್ಲಿದ್ದಲು ಇಂಧನದ ಮಿತಿಮೀರಿದ ಬಳಕೆಗೆ ಕಡಿವಾಣ ಹಾಕುವ ದಿಸೆಯಲ್ಲಿ ನಡೆಯುತ್ತಿರುವ ಪ್ರಯತ್ನಗಳನ್ನು ಇನ್ನಷ್ಟು ತೀವ್ರಗೊಳಿಸುವ ಹಾಗೂ ಪರಿಣಾಮಕಾರಿಯಲ್ಲದ ಪಳೆಯುಳಿಕೆ ಇಂಧನಕ್ಕೆ ನೀಡಲಾಗುತ್ತಿರುವ ಸಹಾಯಧನ ರದ್ದುಗೊಳಿಸುವುದನ್ನು ಉತ್ತೇಜಿಸುವ ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ.</p>.<p>‘ಆರ್ಥಿಕ ಮತ್ತು ತಾಂತ್ರಿಕವಾಗಿ ಸಶಕ್ತವಾಗಿರುವ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು, ಹಸಿರು ಮನೆ ಅನಿಲ ಹೊರಸೂಸುವಿಕೆ ತಗ್ಗಿಸುವಲ್ಲಿ ಪದೇ ಪದೇ ವಿಫಲವಾಗುತ್ತಿವೆ’ ಎಂದು ವರದಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ.</p>.<p>ಹವಾಮಾನ ಬದಲಾವಣೆಯಿಂದಾಗುವ ನಷ್ಟ ಹಾಗೂ ಹಾನಿಯನ್ನು ಸರಿದೂಗಿಸಲು ಅಗತ್ಯ ಹಣಕಾಸಿನ ನೆರವು ಒದಗಿಸಬೇಕೆಂದು ಬಡ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳು ಸಿಒಪಿ–27ರಲ್ಲಿ ಒತ್ತಾಯಿಸಿದ್ದವು. ಈ ನೆರವನ್ನು ಯಾವಾಗ ನೀಡಲಾಗುತ್ತದೆ. ಅದರ ಸ್ವರೂಪ ಏನು ಎಂಬುದನ್ನು ಕರಡು ಪ್ರತಿಯಲ್ಲಿ ಉಲ್ಲೇಖಿಸಿಲ್ಲ.</p>.<p>ಪ್ಯಾರಿಸ್ ಒಪ್ಪಂದದ ಅನುಸಾರ ಜಾಗತಿಕ ತಾಪಮಾನದ ಏರಿಕೆಯನ್ನು 1.5 ಡಿಗ್ರಿ ಸೆಲ್ಷಿಯಸ್ಗೆ ಮಿತಗೊಳಿಸಬೇಕು. ಈ ಗುರಿ ಸಾಧಿಸಲು ಎಲ್ಲಾ ಹಂತಗಳಲ್ಲೂ ಎಲ್ಲಾ ಬಗೆಯ ಪ್ರಯತ್ನಗಳನ್ನು ನಡೆಸಬೇಕು ಎಂದು20 ಪುಟಗಳ ಕರಡು ಪ್ರತಿಯಲ್ಲಿ ಒತ್ತಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>