<p><strong>ಘಾಜಿಯಾಬಾದ್:</strong> ಉತ್ತರ ಪ್ರದೇಶದ ಮುರಾದ್ನಗರದ ಸ್ಮಶಾನದಲ್ಲಿ ಭಾನುವಾರ ಸಂಭವಿಸಿದ ಸಂಕೀರ್ಣವೊಂದರ ಚಾವಣಿ ಕುಸಿತ ದುರಂತದಲ್ಲಿ ಸತ್ತವರ ಸಂಖ್ಯೆ 24ಕ್ಕೆ ಏರಿದ್ದು, ಘಟನೆಗೆ ಸಂಬಂಧಿಸಿದಂತೆ ಘಾಜಿಯಾಬಾದ್ ಪೊಲೀಸರು ಮಹಾನಗರ ಪಾಲಿಕೆಯ ಮೂವರು ಅಧಿಕಾರಿಗಳನ್ನು ಸೋಮವಾರ ಬಂಧಿಸಿದ್ದಾರೆ.</p>.<p>‘ಘಟನೆಯ ಸಂಬಂಧ ಮಹಾನಗರ ಪಾಲಿಕೆಯ ಕಾರ್ಯನಿರ್ವಹಣಾಧಿಕಾರಿ ನಿಹಾರಿಕಾ ಸಿಂಗ್, ಜೂನಿಯರ್ ಎಂಜಿನಿಯರ್ ಚಂದ್ರಪಾಲ್ ಮತ್ತು ಸೂಪರ್ವೈಸರ್ ಆಶಿಶ್ ಅವರನ್ನು ಬಂಧಿಸಿರುವುದಾಗಿ ಮುರಾದ್ನಗರ ಗ್ರಾಮಾಂತರ ವಿಭಾಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇರಾಜ್ ರಾಜಾ ತಿಳಿಸಿದ್ದಾರೆ.</p>.<p>ತಲೆಮರೆಸಿಕೊಂಡಿರುವ ಗುತ್ತಿಗೆದಾರರ ಅಜಯ್ ತ್ಯಾಗಿ ಅವರಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.</p>.<p>ಈ ನಡುವೆ ಮೃತರ ಕುಟುಂಬದವರು ಹೆಚ್ಚುವರಿ ಪರಿಹಾರ ಹಾಗೂ ಪ್ರತಿ ಕುಟುಂಬಕ್ಕೆ ಸರ್ಕಾರಿ ಕೆಲಸ ನೀಡುವಂತೆ ಒತ್ತಾಯಿಸಿ ದೆಹಲಿ –ಮೀರತ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.</p>.<p>ಶವಸಂಸ್ಕಾರದಲ್ಲಿ ಪಾಲ್ಗೊಳ್ಳಲು ಇಲ್ಲಿನ ಸ್ಮಶಾನಕ್ಕೆ ತೆರಳಿದ್ದ 24 ಮಂದಿ, ಸುರಿಯುತ್ತಿದ್ದ ಮಳೆಯಿಂದ ರಕ್ಷಣೆ ಪಡೆಯಲು ಸ್ಮಶಾನದ ಸಂಕೀರ್ಣವೊಂದರ ಚಾವಣಿಯ ಕೆಳಗೆ ನಿಂತಿದ್ದರು. ಜೋರಾದ ಮಳೆಯಿಂದಾಗಿ ಚಾವಣಿ ಕುಸಿದ ಪರಿಣಾಮ ಸ್ಥಳದಲ್ಲೇ 15 ಮಂದಿ ಸಾವನ್ನಪ್ಪಿದ್ದರು.</p>.<p>ಘಟನೆಯಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ತಲಾ ₹ 2ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಘಾಜಿಯಾಬಾದ್:</strong> ಉತ್ತರ ಪ್ರದೇಶದ ಮುರಾದ್ನಗರದ ಸ್ಮಶಾನದಲ್ಲಿ ಭಾನುವಾರ ಸಂಭವಿಸಿದ ಸಂಕೀರ್ಣವೊಂದರ ಚಾವಣಿ ಕುಸಿತ ದುರಂತದಲ್ಲಿ ಸತ್ತವರ ಸಂಖ್ಯೆ 24ಕ್ಕೆ ಏರಿದ್ದು, ಘಟನೆಗೆ ಸಂಬಂಧಿಸಿದಂತೆ ಘಾಜಿಯಾಬಾದ್ ಪೊಲೀಸರು ಮಹಾನಗರ ಪಾಲಿಕೆಯ ಮೂವರು ಅಧಿಕಾರಿಗಳನ್ನು ಸೋಮವಾರ ಬಂಧಿಸಿದ್ದಾರೆ.</p>.<p>‘ಘಟನೆಯ ಸಂಬಂಧ ಮಹಾನಗರ ಪಾಲಿಕೆಯ ಕಾರ್ಯನಿರ್ವಹಣಾಧಿಕಾರಿ ನಿಹಾರಿಕಾ ಸಿಂಗ್, ಜೂನಿಯರ್ ಎಂಜಿನಿಯರ್ ಚಂದ್ರಪಾಲ್ ಮತ್ತು ಸೂಪರ್ವೈಸರ್ ಆಶಿಶ್ ಅವರನ್ನು ಬಂಧಿಸಿರುವುದಾಗಿ ಮುರಾದ್ನಗರ ಗ್ರಾಮಾಂತರ ವಿಭಾಗದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇರಾಜ್ ರಾಜಾ ತಿಳಿಸಿದ್ದಾರೆ.</p>.<p>ತಲೆಮರೆಸಿಕೊಂಡಿರುವ ಗುತ್ತಿಗೆದಾರರ ಅಜಯ್ ತ್ಯಾಗಿ ಅವರಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.</p>.<p>ಈ ನಡುವೆ ಮೃತರ ಕುಟುಂಬದವರು ಹೆಚ್ಚುವರಿ ಪರಿಹಾರ ಹಾಗೂ ಪ್ರತಿ ಕುಟುಂಬಕ್ಕೆ ಸರ್ಕಾರಿ ಕೆಲಸ ನೀಡುವಂತೆ ಒತ್ತಾಯಿಸಿ ದೆಹಲಿ –ಮೀರತ್ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.</p>.<p>ಶವಸಂಸ್ಕಾರದಲ್ಲಿ ಪಾಲ್ಗೊಳ್ಳಲು ಇಲ್ಲಿನ ಸ್ಮಶಾನಕ್ಕೆ ತೆರಳಿದ್ದ 24 ಮಂದಿ, ಸುರಿಯುತ್ತಿದ್ದ ಮಳೆಯಿಂದ ರಕ್ಷಣೆ ಪಡೆಯಲು ಸ್ಮಶಾನದ ಸಂಕೀರ್ಣವೊಂದರ ಚಾವಣಿಯ ಕೆಳಗೆ ನಿಂತಿದ್ದರು. ಜೋರಾದ ಮಳೆಯಿಂದಾಗಿ ಚಾವಣಿ ಕುಸಿದ ಪರಿಣಾಮ ಸ್ಥಳದಲ್ಲೇ 15 ಮಂದಿ ಸಾವನ್ನಪ್ಪಿದ್ದರು.</p>.<p>ಘಟನೆಯಲ್ಲಿ ಮೃತಪಟ್ಟವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ ತಲಾ ₹ 2ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>