<p><strong>ಲಖನೌ:</strong> ನೂತನ ಕೃಷಿ ಕಾಯ್ದೆಗಳ ರದ್ದತಿಗಾಗಿ ರೈತರುನಡೆಸುತ್ತಿರುವ ಹೋರಾಟ ಬೆಂಬಲಿಸಿ ಸೋಮವಾರ ಭದ್ರತೆಯನ್ನು ಭೇದಿಸಿ ಪಕ್ಷದ ಕಾರ್ಯಕರ್ತರೊಂದಿಗೆ ರಸ್ತೆಯಲ್ಲೇ ಧರಣಿ ಕುಳಿತಿದ್ದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಧರಣಿ ನಡೆಸುವುದನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಇಲ್ಲಿನ ಸಮಾಜವಾದಿ ಪಕ್ಷದ ಕೇಂದ್ರ ಕಚೇರಿ ಸುತ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಆ ಪೊಲೀಸ್ ರಕ್ಷಣೆಯನ್ನು ಭೇದಿಸಿ ಪಕ್ಷದ ಕಾರ್ಯಕರ್ತರೊಂದಿಗೆ ಅಖಿಲೇಶ್ ಯಾದವ್ ಧರಣಿ ನಡೆಸಲು ಮುಂದಾದರು. ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿ ಕರೆದೊಯ್ದರು.</p>.<p>‘ಹೊಸ ಕೃಷಿ ಕಾಯ್ದೆಗಳು ರೈತರಿಗೆ ನೆರವಾಗುವುದಾಗಿದ್ದರೆ, ಅವರು ಏಕೆ ಇಷ್ಟೆಲ್ಲ ಪ್ರತಿಭಟನೆ ಮಾಡುತ್ತಿದ್ದರು ? ಇಷ್ಟೆಲ್ಲ ಪ್ರತಿಭಟನೆ ನಡೆದರೂ ಸರ್ಕಾರ ಏಕೆ ತನ್ನ ನಿಲುವನ್ನು ಬದಲಿಸಿಕೊಂಡಿಲ್ಲ ? ರೈತರು ಹೊಸ ಕಾಯ್ದೆಗಳನ್ನು ತಿರಸ್ಕರಿಸುತ್ತಿರುವಾಗ, ಸರ್ಕಾರ ತಮ್ಮ ನಿಲುವಿನಿಂದ ಹಿಂದಕ್ಕೆ ಸರಿಯಬೇಕು‘ ಎಂದುಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ನೂತನ ಕೃಷಿ ಕಾಯ್ದೆಗಳ ರದ್ದತಿಗಾಗಿ ರೈತರುನಡೆಸುತ್ತಿರುವ ಹೋರಾಟ ಬೆಂಬಲಿಸಿ ಸೋಮವಾರ ಭದ್ರತೆಯನ್ನು ಭೇದಿಸಿ ಪಕ್ಷದ ಕಾರ್ಯಕರ್ತರೊಂದಿಗೆ ರಸ್ತೆಯಲ್ಲೇ ಧರಣಿ ಕುಳಿತಿದ್ದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಧರಣಿ ನಡೆಸುವುದನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಇಲ್ಲಿನ ಸಮಾಜವಾದಿ ಪಕ್ಷದ ಕೇಂದ್ರ ಕಚೇರಿ ಸುತ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಆ ಪೊಲೀಸ್ ರಕ್ಷಣೆಯನ್ನು ಭೇದಿಸಿ ಪಕ್ಷದ ಕಾರ್ಯಕರ್ತರೊಂದಿಗೆ ಅಖಿಲೇಶ್ ಯಾದವ್ ಧರಣಿ ನಡೆಸಲು ಮುಂದಾದರು. ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿ ಕರೆದೊಯ್ದರು.</p>.<p>‘ಹೊಸ ಕೃಷಿ ಕಾಯ್ದೆಗಳು ರೈತರಿಗೆ ನೆರವಾಗುವುದಾಗಿದ್ದರೆ, ಅವರು ಏಕೆ ಇಷ್ಟೆಲ್ಲ ಪ್ರತಿಭಟನೆ ಮಾಡುತ್ತಿದ್ದರು ? ಇಷ್ಟೆಲ್ಲ ಪ್ರತಿಭಟನೆ ನಡೆದರೂ ಸರ್ಕಾರ ಏಕೆ ತನ್ನ ನಿಲುವನ್ನು ಬದಲಿಸಿಕೊಂಡಿಲ್ಲ ? ರೈತರು ಹೊಸ ಕಾಯ್ದೆಗಳನ್ನು ತಿರಸ್ಕರಿಸುತ್ತಿರುವಾಗ, ಸರ್ಕಾರ ತಮ್ಮ ನಿಲುವಿನಿಂದ ಹಿಂದಕ್ಕೆ ಸರಿಯಬೇಕು‘ ಎಂದುಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>