ದೆಹಲಿಯ ಗಡಿ ಭಾಗಗಳಾದ ಸಿಂಘು, ಟಿಕ್ರಿ ಮತ್ತು ಗಾಜಿಪುರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳ ಹೊರತುಪಡಿಸಿ ರಸ್ತೆಗಳಲ್ಲಿ ಹಾಕಿರುವ ಬ್ಯಾರಿಕೇಡ್ಗಳನ್ನು ತೆರೆದು, ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ಅಕ್ಟೋಬರ್ 21ರಂದು ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಈ ಬ್ಯಾರಿಕೇಡ್ಗಳನ್ನು ತೆಗೆಯಲು ಮುಂದಾಗಿದ್ದಾರೆ.