<p><strong>ಭುವನೇಶ್ವರ:</strong> ಒಡಿಶಾದಲ್ಲಿ 120 ಕೈದಿಗಳಿಗೆ ಕೋವಿಡ್-19 ದೃಢಗೊಂಡಿದ್ದು, ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<p>ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಡಿಐಜಿ (ಕಾರಾಗೃಹ) ಶುಭಕಾಂತ ಮಿಶ್ರಾ, ಗಂಭೀರ ರೋಗಿಗಳನ್ನು ಕೋವಿಡ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದ್ದು, 449 ಅಪರಾಧಿಗಳನ್ನು 90 ದಿನಗಳ ಪೆರೋಲ್ನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/covid-19-coronavirus-control-from-the-fourth-week-of-lockdown-830431.html" itemprop="url">ದೆಹಲಿ | ಲಾಕ್ಡೌನ್ನ 4ನೇ ವಾರದಿಂದ ಕೊರೊನಾ ನಿಯಂತ್ರಣ: ಸೋಂಕಿತರ ಪ್ರಮಾಣ ಇಳಿಮುಖ </a></p>.<p>ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಪಾಟ್ನಾಗಡ ಸಬ್ ಜೈಲು ಮತ್ತು ಬೆರ್ಹಾಂಪುರ ಜೈಲಿನಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ ಎಂದು ಹೇಳಿದ್ದಾರೆ.</p>.<p>ಒಡಿಶಾದಲ್ಲಿ ಇದುವರೆಗೆ 5.5 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಕೋವಿಡ್ ಸೋಂಕು ದೃಢಗೊಂಡಿದ್ದು, 2,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.</p>.<p>ರಾಜ್ಯದಲ್ಲಿ 1,00,313 ಸಕ್ರಿಯ ಪ್ರಕರಣಗಳಿದ್ದು, 4.5 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಒಡಿಶಾದಲ್ಲಿ 120 ಕೈದಿಗಳಿಗೆ ಕೋವಿಡ್-19 ದೃಢಗೊಂಡಿದ್ದು, ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<p>ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಡಿಐಜಿ (ಕಾರಾಗೃಹ) ಶುಭಕಾಂತ ಮಿಶ್ರಾ, ಗಂಭೀರ ರೋಗಿಗಳನ್ನು ಕೋವಿಡ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದ್ದು, 449 ಅಪರಾಧಿಗಳನ್ನು 90 ದಿನಗಳ ಪೆರೋಲ್ನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/covid-19-coronavirus-control-from-the-fourth-week-of-lockdown-830431.html" itemprop="url">ದೆಹಲಿ | ಲಾಕ್ಡೌನ್ನ 4ನೇ ವಾರದಿಂದ ಕೊರೊನಾ ನಿಯಂತ್ರಣ: ಸೋಂಕಿತರ ಪ್ರಮಾಣ ಇಳಿಮುಖ </a></p>.<p>ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಪಾಟ್ನಾಗಡ ಸಬ್ ಜೈಲು ಮತ್ತು ಬೆರ್ಹಾಂಪುರ ಜೈಲಿನಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ ಎಂದು ಹೇಳಿದ್ದಾರೆ.</p>.<p>ಒಡಿಶಾದಲ್ಲಿ ಇದುವರೆಗೆ 5.5 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಕೋವಿಡ್ ಸೋಂಕು ದೃಢಗೊಂಡಿದ್ದು, 2,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.</p>.<p>ರಾಜ್ಯದಲ್ಲಿ 1,00,313 ಸಕ್ರಿಯ ಪ್ರಕರಣಗಳಿದ್ದು, 4.5 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>