<p><strong>ನವದೆಹಲಿ:</strong>ದೇಶದಾದ್ಯಂತ ಕೋವಿಡ್–19 ಸೋಂಕು ಪ್ರಕರಣಗಳು ಏರುತ್ತಲೇ ಸಾಗಿದ್ದು,ಇದುವರೆಗೆ ಒಟ್ಟು 4.04 ಕೋಟಿ ಜನರಿಗೆ ಕೋವಿಡ್–19 ಮಾದರಿ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನೆಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.</p>.<p>‘ನಿನ್ನೆ ನಡೆಸಲಾಗಿರುವ 9,28,761 ಪರೀಕ್ಷೆ ಸೇರಿದಂತೆ ಆಗಸ್ಟ್ 28ರ ವರೆಗೆ ಒಟ್ಟು 4,04,06,609 ಮಾದರಿ ಪರೀಕ್ಷೆಯನ್ನು ನಡೆಸಲಾಗಿದೆ’ ಎಂದು ಟ್ವಿಟರ್ ಮೂಲಕ ತಿಳಿಸಿದೆ.</p>.<p>ದೇಶದಲ್ಲಿ ಇದುವರೆಗೆ 35 ಲಕ್ಷ ಜನರಿಗೆ ಸೋಂಕು ದೃಢಪಟ್ಟಿದೆ. ಅದರಲ್ಲಿ26ಕ್ಕೂ ಹೆಚ್ಚುಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿಚೇತರಿಕೆ ಪ್ರಮಾಣ ಶೇ. 76.47ಕ್ಕೆ ಏರಿಕೆಯಾಗಿದೆ.ಸಾವಿನ ದರಶೇ.1.81ಕ್ಕೆ ಇಳಿದಿದೆ.</p>.<p><strong>ಕರ್ನಾಟಕದಲ್ಲಿ 3.27 ಲಕ್ಷ ಪ್ರಕರಣ</strong><br />ಕರ್ನಾಟಕದಲ್ಲಿ ಇಂದು 8,324 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,27,076ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.<p>ಶನಿವಾರ 8,110 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಗುಣಮುಖರಾದವರ ಸಂಖ್ಯೆ 2,35,128ಕ್ಕೆ ಏರಿದೆ.5,483 ಮಂದಿ ಮೃತಪಟ್ಟಿದ್ದಾರೆ.</p>.<p><strong>ಪಂಜಾಬ್ನಲ್ಲಿ 1,474 ಹೊಸ ಪ್ರಕರಣ</strong><br />ಪಂಜಾಬ್ನಲ್ಲಿ ಇಂದು ಒಟ್ಟು 1,474 ಹೊಸ ಪ್ರಕರಣಗಳು ವರದಿಯಾಗಿವೆ. 1,083 ಮಂದಿ ಚೇತರಿಸಿಕೊಂಡಿದ್ದು, 41 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.</p>.<p>ಇದರೊಂದಿಗೆ ಪಂಜಾಬ್ನಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 50,848ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,348ಕ್ಕೆ ತಲುಪಿದೆ.</p>.<p><strong>ಉತ್ತರ ಪ್ರದೇಶದಲ್ಲಿ 62 ಸಾವು</strong><br />ಉತ್ತರ ಪ್ರದೇಶದಲ್ಲಿ ಒಂದೇದಿನ 62 ಜನರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಇಲ್ಲಿ ಸಾವಿನ ಸಂಖ್ಯೆ 3,356ಕ್ಕೆ ಏರಿಕೆಯಾಗಿದೆ. ಹೊಸದಾಗಿ 5,684 ಸೋಂಕು ಪ್ರಕರಣಗಳು ಖಚಿತವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2.19 ಲಕ್ಷ ದಾಟಿದೆ.</p>.<p><strong>ತಮಿಳುನಾಡಲ್ಲಿ 6,352 ಹೊಸ ಪ್ರಕರಣ</strong><br />ತಮಿಳುನಾಡಿನಲ್ಲಿ ಇಂದು ಒಟ್ಟು 6,352 ಹೊಸ ಪ್ರಕರಣಗಳು ವರದಿಯಾಗಿದ್ದು, 87 ಮಂದಿ ಮೃತಪಟ್ಟಿದ್ದಾರೆ.ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ4,15,590 ಆಗಿದ್ದು,3,55,727 ಮಂದಿ ಗುಣಮುಖರಾಗಿದ್ದಾರೆ. ಇನ್ನೂ 52,726 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಚೆನ್ನೈ ಒಂದರಲ್ಲೇ 1,285 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು 1,33,173 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ7,137ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ದೇಶದಾದ್ಯಂತ ಕೋವಿಡ್–19 ಸೋಂಕು ಪ್ರಕರಣಗಳು ಏರುತ್ತಲೇ ಸಾಗಿದ್ದು,ಇದುವರೆಗೆ ಒಟ್ಟು 4.04 ಕೋಟಿ ಜನರಿಗೆ ಕೋವಿಡ್–19 ಮಾದರಿ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನೆಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.</p>.<p>‘ನಿನ್ನೆ ನಡೆಸಲಾಗಿರುವ 9,28,761 ಪರೀಕ್ಷೆ ಸೇರಿದಂತೆ ಆಗಸ್ಟ್ 28ರ ವರೆಗೆ ಒಟ್ಟು 4,04,06,609 ಮಾದರಿ ಪರೀಕ್ಷೆಯನ್ನು ನಡೆಸಲಾಗಿದೆ’ ಎಂದು ಟ್ವಿಟರ್ ಮೂಲಕ ತಿಳಿಸಿದೆ.</p>.<p>ದೇಶದಲ್ಲಿ ಇದುವರೆಗೆ 35 ಲಕ್ಷ ಜನರಿಗೆ ಸೋಂಕು ದೃಢಪಟ್ಟಿದೆ. ಅದರಲ್ಲಿ26ಕ್ಕೂ ಹೆಚ್ಚುಸೋಂಕಿತರು ಗುಣಮುಖರಾಗಿದ್ದಾರೆ. ಹೀಗಾಗಿಚೇತರಿಕೆ ಪ್ರಮಾಣ ಶೇ. 76.47ಕ್ಕೆ ಏರಿಕೆಯಾಗಿದೆ.ಸಾವಿನ ದರಶೇ.1.81ಕ್ಕೆ ಇಳಿದಿದೆ.</p>.<p><strong>ಕರ್ನಾಟಕದಲ್ಲಿ 3.27 ಲಕ್ಷ ಪ್ರಕರಣ</strong><br />ಕರ್ನಾಟಕದಲ್ಲಿ ಇಂದು 8,324 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,27,076ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.<p>ಶನಿವಾರ 8,110 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಗುಣಮುಖರಾದವರ ಸಂಖ್ಯೆ 2,35,128ಕ್ಕೆ ಏರಿದೆ.5,483 ಮಂದಿ ಮೃತಪಟ್ಟಿದ್ದಾರೆ.</p>.<p><strong>ಪಂಜಾಬ್ನಲ್ಲಿ 1,474 ಹೊಸ ಪ್ರಕರಣ</strong><br />ಪಂಜಾಬ್ನಲ್ಲಿ ಇಂದು ಒಟ್ಟು 1,474 ಹೊಸ ಪ್ರಕರಣಗಳು ವರದಿಯಾಗಿವೆ. 1,083 ಮಂದಿ ಚೇತರಿಸಿಕೊಂಡಿದ್ದು, 41 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.</p>.<p>ಇದರೊಂದಿಗೆ ಪಂಜಾಬ್ನಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 50,848ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,348ಕ್ಕೆ ತಲುಪಿದೆ.</p>.<p><strong>ಉತ್ತರ ಪ್ರದೇಶದಲ್ಲಿ 62 ಸಾವು</strong><br />ಉತ್ತರ ಪ್ರದೇಶದಲ್ಲಿ ಒಂದೇದಿನ 62 ಜನರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಇಲ್ಲಿ ಸಾವಿನ ಸಂಖ್ಯೆ 3,356ಕ್ಕೆ ಏರಿಕೆಯಾಗಿದೆ. ಹೊಸದಾಗಿ 5,684 ಸೋಂಕು ಪ್ರಕರಣಗಳು ಖಚಿತವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2.19 ಲಕ್ಷ ದಾಟಿದೆ.</p>.<p><strong>ತಮಿಳುನಾಡಲ್ಲಿ 6,352 ಹೊಸ ಪ್ರಕರಣ</strong><br />ತಮಿಳುನಾಡಿನಲ್ಲಿ ಇಂದು ಒಟ್ಟು 6,352 ಹೊಸ ಪ್ರಕರಣಗಳು ವರದಿಯಾಗಿದ್ದು, 87 ಮಂದಿ ಮೃತಪಟ್ಟಿದ್ದಾರೆ.ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ4,15,590 ಆಗಿದ್ದು,3,55,727 ಮಂದಿ ಗುಣಮುಖರಾಗಿದ್ದಾರೆ. ಇನ್ನೂ 52,726 ಪ್ರಕರಣಗಳು ಸಕ್ರಿಯವಾಗಿವೆ.</p>.<p>ಚೆನ್ನೈ ಒಂದರಲ್ಲೇ 1,285 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು 1,33,173 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ7,137ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>