<p><strong>ನವದೆಹಲಿ</strong>: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕ್ಷಿಣಿಸುತ್ತಿದ್ದು ಕೋವಿಡ್ ಲಸಿಕೆ ಅಭಿಯಾನಕ್ಕೆ ದಿನಗಣನೇ ಆರಂಭವಾಗಿದೆ.</p>.<p>ದೇಶದಾದ್ಯಂತ ಕೋವಿಡ್ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ನಾಳೆ (ಜ.11) ಸಂಜೆ 4 ಗಂಟೆಗೆ ಚರ್ಚೆ ನಡೆಸಲಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಎಲ್ಲಾ ರಾಜ್ಯಗಳ ಮುಖ್ಯಮುಂತ್ರಿಗಳು ಚರ್ಚೆಯಲ್ಲಿ ಪಾಲ್ಗೊಳಲ್ಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.</p>.<p>ಜನವರಿ 16ರಿಂದ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಲಾಗುವುದು. ಮೊದಲು 3 ಕೋಟಿ ಆರೋಗ್ಯ ಸೇವೆ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ಹಾಕಲಾಗುವುದು. ಆ ಬಳಿಕ 50 ವರ್ಷ ಮೇಲ್ಪಟ್ಟ, 50 ವರ್ಷದೊಳಗಿನ(ಅನಾರೋಗ್ಯ ಪೀಡಿತ) 27 ಕೋಟಿ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p>.<p>ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 18,645 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 201 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.<p>ದೇಶದಲ್ಲಿ ಈ ವರೆಗೆ ಒಟ್ಟು 1,04,50,284 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,50,999 ಮಂದಿ ಸಾವಿಗೀಡಾಗಿದ್ದಾರೆ.</p>.<p>ಕಳೆದ 24 ಗಂಟೆಗಳಲ್ಲಿ 19,299 ಸೋಂಕಿತರು ಚೇತರಿಸಿಕೊಂಡಿದ್ದು, ಈ ವರೆಗೆ ಗುಣಮುಖರಾದವರ ಸಂಖ್ಯೆ 1,00,75,950ಕ್ಕೆ ತಲುಪಿದೆ. 2,23,335 ಸಕ್ರಿಯ ಪ್ರಕರಣಗಳಿವೆ.</p>.<p>ಕೋವಿಡ್ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.96.42ಕ್ಕೆ ತಲುಪಿದ್ದು, ಶೇ.2.14 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 1.44 ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕ್ಷಿಣಿಸುತ್ತಿದ್ದು ಕೋವಿಡ್ ಲಸಿಕೆ ಅಭಿಯಾನಕ್ಕೆ ದಿನಗಣನೇ ಆರಂಭವಾಗಿದೆ.</p>.<p>ದೇಶದಾದ್ಯಂತ ಕೋವಿಡ್ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ನಾಳೆ (ಜ.11) ಸಂಜೆ 4 ಗಂಟೆಗೆ ಚರ್ಚೆ ನಡೆಸಲಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಎಲ್ಲಾ ರಾಜ್ಯಗಳ ಮುಖ್ಯಮುಂತ್ರಿಗಳು ಚರ್ಚೆಯಲ್ಲಿ ಪಾಲ್ಗೊಳಲ್ಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.</p>.<p>ಜನವರಿ 16ರಿಂದ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಲಾಗುವುದು. ಮೊದಲು 3 ಕೋಟಿ ಆರೋಗ್ಯ ಸೇವೆ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ಹಾಕಲಾಗುವುದು. ಆ ಬಳಿಕ 50 ವರ್ಷ ಮೇಲ್ಪಟ್ಟ, 50 ವರ್ಷದೊಳಗಿನ(ಅನಾರೋಗ್ಯ ಪೀಡಿತ) 27 ಕೋಟಿ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.</p>.<p>ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 18,645 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 201 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.<p>ದೇಶದಲ್ಲಿ ಈ ವರೆಗೆ ಒಟ್ಟು 1,04,50,284 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,50,999 ಮಂದಿ ಸಾವಿಗೀಡಾಗಿದ್ದಾರೆ.</p>.<p>ಕಳೆದ 24 ಗಂಟೆಗಳಲ್ಲಿ 19,299 ಸೋಂಕಿತರು ಚೇತರಿಸಿಕೊಂಡಿದ್ದು, ಈ ವರೆಗೆ ಗುಣಮುಖರಾದವರ ಸಂಖ್ಯೆ 1,00,75,950ಕ್ಕೆ ತಲುಪಿದೆ. 2,23,335 ಸಕ್ರಿಯ ಪ್ರಕರಣಗಳಿವೆ.</p>.<p>ಕೋವಿಡ್ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.96.42ಕ್ಕೆ ತಲುಪಿದ್ದು, ಶೇ.2.14 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 1.44 ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>