<p><strong>ನವದೆಹಲಿ</strong>: ಹೊಸ ವರ್ಷಕ್ಕೆ ಕೋವಿಡ್ ಲಸಿಕೆಯ ಭರವಸೆಯ ಪರಿಣಾಮ ದೇಶದಲ್ಲಿ ಕೋವೀಡ್ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ.</p>.<p>ಈಗಾಗಲೇ ಭಾರತ ಸರ್ಕಾರ ಕೋವಿಶೀಲ್ಡ್ ತುರ್ತು ಬಳಕೆಗೆ ಅನುಮತಿ ನೀಡಿದೆ. ಮತ್ತೊಂದು ಲಸಿಕೆ ಕೋವಾಕ್ಸಿನ್ ಕೂಡ ಒಂದೆರಡು ದಿನಗಳಲ್ಲಿ ಬಳಕೆಗೆ ಲಭ್ಯವಾಗಲಿದೆ ಎನ್ನಲಾಗಿದೆ.</p>.<p>ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 19,078 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 224 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.</p>.<p>ಈ ವರೆಗೆ ಭಾರತದಲ್ಲಿ ಒಟ್ಟು 1,03,05,788 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 99,06,387 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.</p>.<p>ಇಲ್ಲಿಯವರೆಗೂ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,49,218ಕ್ಕೆ ತಲುಪಿದೆ. ಶುಕ್ರವಾರ ಒಂದೇ ದಿನಕ್ಕೆ 22,926 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p>ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್ಗಡ ರಾಜ್ಯಗಳಲ್ಲಿ ಶೇ.62 ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹೊಸ ವರ್ಷಕ್ಕೆ ಕೋವಿಡ್ ಲಸಿಕೆಯ ಭರವಸೆಯ ಪರಿಣಾಮ ದೇಶದಲ್ಲಿ ಕೋವೀಡ್ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ.</p>.<p>ಈಗಾಗಲೇ ಭಾರತ ಸರ್ಕಾರ ಕೋವಿಶೀಲ್ಡ್ ತುರ್ತು ಬಳಕೆಗೆ ಅನುಮತಿ ನೀಡಿದೆ. ಮತ್ತೊಂದು ಲಸಿಕೆ ಕೋವಾಕ್ಸಿನ್ ಕೂಡ ಒಂದೆರಡು ದಿನಗಳಲ್ಲಿ ಬಳಕೆಗೆ ಲಭ್ಯವಾಗಲಿದೆ ಎನ್ನಲಾಗಿದೆ.</p>.<p>ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 19,078 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 224 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.</p>.<p>ಈ ವರೆಗೆ ಭಾರತದಲ್ಲಿ ಒಟ್ಟು 1,03,05,788 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 99,06,387 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.</p>.<p>ಇಲ್ಲಿಯವರೆಗೂ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,49,218ಕ್ಕೆ ತಲುಪಿದೆ. ಶುಕ್ರವಾರ ಒಂದೇ ದಿನಕ್ಕೆ 22,926 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p>ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್ಗಡ ರಾಜ್ಯಗಳಲ್ಲಿ ಶೇ.62 ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>