ಲಖನೌ: ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಕೋವಿಡ್ ಲಸಿಕೆ ನೀಡುವ ಆರೋಗ್ಯ ಅಧಿಕಾರಿಗಳನ್ನು ಕಂಡ ತಕ್ಷಣ ಗ್ರಾಮಸ್ಥರು ಹತ್ತಿರದ ನದಿಯ ಕಡೆಗೆ ಓಡಿ ಹೋಗಿದ್ದಾರೆ. ಅವರನ್ನು ಹಿಂಬಾಲಿಸಿದ ಅಧಿಕಾರಿಗಳು ನದಿಯ ದಡವನ್ನು ಸಮೀಪಿಸುತ್ತಿದ್ದಂತೆ ಗ್ರಾಮಸ್ಥರು ನದಿಗೆ ಹಾರಿರುವ ವಿಲಕ್ಷಣ ಘಟನೆ ನಡೆದಿದೆ.
ಉತ್ತರ ಪ್ರದೇಶದ ಬಾರಬಂಕಿ ಜಿಲ್ಲೆಯ ಸಿಸೌಡಾ ಗ್ರಾಮವು ಇಂತಹ ಘಟನೆಗೆ ಸಾಕ್ಷಿಯಾಗಿದೆ.