<p><strong>ನವದೆಹಲಿ: </strong>ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ.</p>.<p>ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 13,165 ಹೊಸ ಪ್ರಕರಣಗಳು ದೃಢಪಟ್ಟಿದ್ದು, 346 ಮಂದಿ ಮೃತಪಟ್ಟಿದ್ದಾರೆ. 9,011 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,60,413 ಸಕ್ರಿಯ ಪ್ರಕರಣಗಳಿವೆ.</p>.<p>ದೇಶದ ವಾಣಿಜ್ಯ ನಗರಿ ಮುಂಬೈಯಲ್ಲಿ ಒಂದೇ ದಿನ 1,132 ಹೊಸ ಪ್ರಕರಣಗಳು ದೃಢಪಟ್ಟಿದ್ದು, 864 ಜನ ಚೇತರಿಸಿಕೊಂಡಿದ್ದಾರೆ. 46 ಸಾವು ಸಂಭವಿಸಿದೆ. ಮುಂಬೈಯಲ್ಲಿ ಈವರೆಗೆ 1,06,057 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p>ಪಂಜಾಬ್ನಲ್ಲಿ 1,693 ಹೊಸ ಪ್ರಕರಣಗಳು ಪತ್ತೆಯಾಗಿದೆ. 941 ಮಂದಿ ಗುಣಮುಖರಾಗಿದ್ದು, 24 ಮಂದಿ ಸಾವಿಗೀಡಾಗಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ 3,169, ಉತ್ತರ ಪ್ರದೇಶದಲ್ಲಿ 5,156, ರಾಜಸ್ಥಾನದಲ್ಲಿ 1,312 ಹೊಸ ಪ್ರಕರಣಗಳು ಪತ್ತೆಯಾಗಿವೆ.</p>.<p>ತಮಿಳುನಾಡಿನಲ್ಲಿ 5,795 ಪ್ರಕರಣಗಳು ಹಾಗೂ 116 ಸಾವು ವರದಿಯಾಗಿದೆ. ಸದ್ಯ 53,155 ಸಕ್ರಿಯ ಪ್ರಕರಣಗಳಿವೆ.</p>.<p><strong>ಮನೆಯಲ್ಲೇ ಓಣಂ ಆಚರಿಸಲು ಕೇರಳ ಸಿಎಂ ಮನವಿ: </strong>ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮನೆಯಲ್ಲಿಯೆ ಓಣಂ ಹಬ್ಬ ಆಚರಿಸುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಜತೆಗೆ, ರಾಜ್ಯದ ಗಡಿ ಪ್ರದೇಶಗಳಲ್ಲಿ ಕಣ್ಗಾವಲಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ.</p>.<p>ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 13,165 ಹೊಸ ಪ್ರಕರಣಗಳು ದೃಢಪಟ್ಟಿದ್ದು, 346 ಮಂದಿ ಮೃತಪಟ್ಟಿದ್ದಾರೆ. 9,011 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1,60,413 ಸಕ್ರಿಯ ಪ್ರಕರಣಗಳಿವೆ.</p>.<p>ದೇಶದ ವಾಣಿಜ್ಯ ನಗರಿ ಮುಂಬೈಯಲ್ಲಿ ಒಂದೇ ದಿನ 1,132 ಹೊಸ ಪ್ರಕರಣಗಳು ದೃಢಪಟ್ಟಿದ್ದು, 864 ಜನ ಚೇತರಿಸಿಕೊಂಡಿದ್ದಾರೆ. 46 ಸಾವು ಸಂಭವಿಸಿದೆ. ಮುಂಬೈಯಲ್ಲಿ ಈವರೆಗೆ 1,06,057 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.</p>.<p>ಪಂಜಾಬ್ನಲ್ಲಿ 1,693 ಹೊಸ ಪ್ರಕರಣಗಳು ಪತ್ತೆಯಾಗಿದೆ. 941 ಮಂದಿ ಗುಣಮುಖರಾಗಿದ್ದು, 24 ಮಂದಿ ಸಾವಿಗೀಡಾಗಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ 3,169, ಉತ್ತರ ಪ್ರದೇಶದಲ್ಲಿ 5,156, ರಾಜಸ್ಥಾನದಲ್ಲಿ 1,312 ಹೊಸ ಪ್ರಕರಣಗಳು ಪತ್ತೆಯಾಗಿವೆ.</p>.<p>ತಮಿಳುನಾಡಿನಲ್ಲಿ 5,795 ಪ್ರಕರಣಗಳು ಹಾಗೂ 116 ಸಾವು ವರದಿಯಾಗಿದೆ. ಸದ್ಯ 53,155 ಸಕ್ರಿಯ ಪ್ರಕರಣಗಳಿವೆ.</p>.<p><strong>ಮನೆಯಲ್ಲೇ ಓಣಂ ಆಚರಿಸಲು ಕೇರಳ ಸಿಎಂ ಮನವಿ: </strong>ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮನೆಯಲ್ಲಿಯೆ ಓಣಂ ಹಬ್ಬ ಆಚರಿಸುವಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಜತೆಗೆ, ರಾಜ್ಯದ ಗಡಿ ಪ್ರದೇಶಗಳಲ್ಲಿ ಕಣ್ಗಾವಲಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>