<p class="title"><strong>ನವದೆಹಲಿ: </strong>ಕೇಂದ್ರ ಗೃಹ ಸಚಿವಾಲಯವು ಕೊರೊನಾ ನಿಯಂತ್ರಣಕ್ಕಾಗಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯನ್ನು ಮಾರ್ಚ್ 31ರವರೆಗೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿ, ಶುಕ್ರವಾರ ಆದೇಶ ಹೊರಡಿಸಿದೆ.</p>.<p class="title">ಕೋವಿಡ್ ನಿಯಂತ್ರಣಕ್ಕೆ ಎಲ್ಲ ರಾಜ್ಯಗಳು ಪ್ರಮಾಣಿತ ಕಾರ್ಯತಂತ್ರ ವಿಧಾನವನ್ನು (ಎಸ್ಒಪಿ) ಕಟ್ಟುನಿಟ್ಟಾಗಿ ಪಾಲಿಸಬೇಕು. ವಿವಿಧ ಚಟುವಟಿಕೆಗಳನ್ನು ನಡೆಸುವಾಗ ಕೋವಿಡ್ ಮಾರ್ಗಸೂಚಿ ಸರಿಯಾಗಿ ಪಾಲನೆಯಾಗುತ್ತಿದೆಯೇ ಎನ್ನುವುದರ ಮೇಲೂ ಕಣ್ಗಾವಲು ಇಡಬೇಕು ಎಂದು ಸಚಿವಾಲಯ ಸೂಚಿಸಿದೆ.</p>.<p class="title">ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳು ಮತ್ತು ಹೊಸ ಕೋವಿಡ್ 19 ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿರುವುದು ಕಂಡುಬಂದಿದೆ. ಆದರೆ, ಈ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿವಾರಿಸಲು ಕಣ್ಗಾವಲು, ನಿಯಂತ್ರಣ ಮತ್ತು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಸಚಿವಾಲಯ ಹೇಳಿದೆ.</p>.<p class="title">ಕಂಟೈನ್ಮೆಂಟ್ ವಲಯಗಳನ್ನು ಎಚ್ಚರಿಕೆಯಿಂದ ಗುರುತಿಸಬೇಕು. ಈ ವಲಯಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಜತೆಗೆ, ಅನುಮತಿ ನೀಡಿರುವ ವಿವಿಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸೂಚಿಸಿರುವ ಎಸ್ಒಪಿಯನ್ನು ಸರಿಯಾಗಿ ಪಾಲಿಸಲಾಗುತ್ತಿದೆಯೇ ಎನ್ನುವುದನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಅದು ಹೇಳಿದೆ.</p>.<p class="title">ಕೋವಿಡ್ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿರುವ ಕೇಂದ್ರ ಗೃಹ ಸಚಿವಾಲಯ, ಇದರಿಂದ ಕೋವಿಡ್ ಪ್ರಸರಣ ಕೊಂಡಿಯನ್ನು ತಪ್ಪಿಸಿ, ಸಾಂಕ್ರಾಮಿಕ ರೋಗ ಇನ್ನಷ್ಟು ಹರಡುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಕೇಂದ್ರ ಗೃಹ ಸಚಿವಾಲಯವು ಕೊರೊನಾ ನಿಯಂತ್ರಣಕ್ಕಾಗಿ ಕೋವಿಡ್ ಮಾರ್ಗಸೂಚಿಗಳ ಪಾಲನೆಯನ್ನು ಮಾರ್ಚ್ 31ರವರೆಗೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿ, ಶುಕ್ರವಾರ ಆದೇಶ ಹೊರಡಿಸಿದೆ.</p>.<p class="title">ಕೋವಿಡ್ ನಿಯಂತ್ರಣಕ್ಕೆ ಎಲ್ಲ ರಾಜ್ಯಗಳು ಪ್ರಮಾಣಿತ ಕಾರ್ಯತಂತ್ರ ವಿಧಾನವನ್ನು (ಎಸ್ಒಪಿ) ಕಟ್ಟುನಿಟ್ಟಾಗಿ ಪಾಲಿಸಬೇಕು. ವಿವಿಧ ಚಟುವಟಿಕೆಗಳನ್ನು ನಡೆಸುವಾಗ ಕೋವಿಡ್ ಮಾರ್ಗಸೂಚಿ ಸರಿಯಾಗಿ ಪಾಲನೆಯಾಗುತ್ತಿದೆಯೇ ಎನ್ನುವುದರ ಮೇಲೂ ಕಣ್ಗಾವಲು ಇಡಬೇಕು ಎಂದು ಸಚಿವಾಲಯ ಸೂಚಿಸಿದೆ.</p>.<p class="title">ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳು ಮತ್ತು ಹೊಸ ಕೋವಿಡ್ 19 ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿರುವುದು ಕಂಡುಬಂದಿದೆ. ಆದರೆ, ಈ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿವಾರಿಸಲು ಕಣ್ಗಾವಲು, ನಿಯಂತ್ರಣ ಮತ್ತು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಸಚಿವಾಲಯ ಹೇಳಿದೆ.</p>.<p class="title">ಕಂಟೈನ್ಮೆಂಟ್ ವಲಯಗಳನ್ನು ಎಚ್ಚರಿಕೆಯಿಂದ ಗುರುತಿಸಬೇಕು. ಈ ವಲಯಗಳಲ್ಲಿ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಜತೆಗೆ, ಅನುಮತಿ ನೀಡಿರುವ ವಿವಿಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸೂಚಿಸಿರುವ ಎಸ್ಒಪಿಯನ್ನು ಸರಿಯಾಗಿ ಪಾಲಿಸಲಾಗುತ್ತಿದೆಯೇ ಎನ್ನುವುದನ್ನು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಅದು ಹೇಳಿದೆ.</p>.<p class="title">ಕೋವಿಡ್ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಲು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿರುವ ಕೇಂದ್ರ ಗೃಹ ಸಚಿವಾಲಯ, ಇದರಿಂದ ಕೋವಿಡ್ ಪ್ರಸರಣ ಕೊಂಡಿಯನ್ನು ತಪ್ಪಿಸಿ, ಸಾಂಕ್ರಾಮಿಕ ರೋಗ ಇನ್ನಷ್ಟು ಹರಡುವುದನ್ನು ತಪ್ಪಿಸಬಹುದಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>