ಕೋವಿಡ್–19 ನಾಲ್ಕನೇ ಅಲೆ ಮುಕ್ತಾಯದ ಬಳಿಕ ಕೇಂದ್ರ ಸರ್ಕಾರವು ದೇಶದಲ್ಲಿ ಸಿಎಎ ಜಾರಿಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಿತೀಶ್ ಕುಮಾರ್, ಕೊರೊನಾವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹೊತ್ತಿನಲ್ಲಿ, ಅವರು (ಅಮಿತ್ ಶಾ) ಸೋಂಕು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.