ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ಎದುರಿಸುತ್ತಿರುವ ಎರಡು ಮುಖ್ಯ ಸಮಸ್ಯೆಗಳ ಬಗ್ಗೆ ಎಚ್ಚರಿಸಿದ ಮೋದಿ 

Last Updated 15 ಆಗಸ್ಟ್ 2022, 5:28 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಭಾರತದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಮುಂದಿರುವ ಎರಡು ಬಹುಮುಖ್ಯ ಸವಾಲಿನ ಬಗ್ಗೆ ಎಚ್ಚರಿಸಿದರು.

ದೆಹಲಿಯ ಕೆಂಪು ಕೋಟೆ ಮೇಲೆ ಸತತ 9ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶವನ್ನು ಉದ್ದೇಶಿಸಿ ಮಾತನಾಡಿದರು.

‘ಇಂದು ನಾವು ಎರಡು ದೊಡ್ಡ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಭ್ರಷ್ಟಾಚಾರ ಮತ್ತು 'ಪರಿವಾರವಾದ' ಅಥವಾ ಸ್ವಜನಪಕ್ಷಪಾತ. ಭ್ರಷ್ಟಾಚಾರ ದೇಶವನ್ನು ಗೆದ್ದಲಿನಂತೆ ಟೊಳ್ಳು ಮಾಡುತ್ತಿದೆ. ನಾವು ಅದರ ವಿರುದ್ಧ ಹೋರಾಡಬೇಕಾಗಿದೆ. ಈ ಹೋರಾಟದಲ್ಲಿ ನಾನು ಎಲ್ಲಾ ಭಾರತೀಯರ ಬೆಂಬಲವನ್ನು ಕೋರುತ್ತೇನೆ. ನಮ್ಮ ಸಂಸ್ಥೆಗಳ ಶಕ್ತಿಯನ್ನು ಅರಿತುಕೊಳ್ಳಲು, ಅರ್ಹತೆಯ ಆಧಾರದ ಮೇಲೆ ದೇಶವನ್ನು ಮುನ್ನಡೆಸಲು 'ಪರಿವಾರವಾದ'ದ ವಿರುದ್ಧ ನಾವು ಜಾಗೃತಿ ಮೂಡಿಸಬೇಕಿದೆ ಎಂದು ಮೋದಿ ಹೇಳಿದರು.

ಕೆಲವರು ತಮ್ಮ ಅಕ್ರಮ ಸಂಪತ್ತನ್ನು ರಕ್ಷಿಸಿಕೊಳ್ಳುವ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ ಎಂದರು.

ಭಾರತ ಬಡತನದ ವಿರುದ್ಧ ಹೋರಾಡುತ್ತಿವೆ. ಹೀಗಾಗಿ ಭ್ರಷ್ಟಾಚಾರದ ವಿರುದ್ಧವೂ ನಾವು ನಮ್ಮೆಲ್ಲ ಶಕ್ತಿಯಿಂದ ಹೋರಾಡಬೇಕಾಗಿದೆ ಎಂದು ಅವರು ತಿಳಿಸಿದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT