<p><strong>ನವದೆಹಲಿ</strong>: ಕೇಂದ್ರ ಸರ್ಕಾರ ತೈಲ ಮಾರಾಟದಿಂದ ಸಂಗ್ರಹಿಸಿರುವ ತೆರಿಗೆ ಹಣದಲ್ಲಿ, ದೇಶಕ್ಕೆ ಬೇಕಾಗಿರುವ ಕೋವಿಡ್ ಲಸಿಕೆ ಖರೀದಿ ಸೇರಿದಂತೆ, ಅನೇಕ ಸೌಲಭ್ಯಗಳನ್ನು ಕಲ್ಪಿಸಬಹುದಿತ್ತು. ಆದರೆ, ಇಲ್ಲಿವರೆಗೂ ಏನೂ ಮಾಡಿಲ್ಲ‘ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.</p>.<p>ತೈಲ ಬೆಲೆ ಇಳಿಕೆಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ಸಾಂಕೇತಿಕವಾಗಿ ನಗರದ ವಿವಿಧ ಪೆಟ್ರೊಲ್ ಬಂಕ್ಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ‘ಈ ಸಾಂಕ್ರಾಮಿಕ ರೋಗದ ಕಾಲದಲ್ಲಿ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಿಂದ ₹2.74 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುತ್ತಿದೆ‘ ಎಂದು ಉಲ್ಲೇಖಿಸಿದ್ದಾರೆ.</p>.<p>‘ಈ ತೆರಿಗೆ ಹಣದಿಂದ ದೇಶಕ್ಕೆ ಬೇಕಾಗುವಷ್ಟು ಲಸಿಕೆ ಖರೀದಿಸಬಹುದು (₹67ಸಾವಿರ ಕೋಟಿ) ಅಲ್ಲದೆ 718 ಜಿಲ್ಲೆಗಳಲ್ಲಿ ಆಮ್ಲಜನಕ ಘಟಕಗಳನ್ನು ಆರಂಭಿಸಬಹುದು. 29 ರಾಜ್ಯಗಳಲ್ಲಿ ಎಐಐಎಂಎಸ್ ಆಸ್ಪತ್ರೆ ಆರಂಭಿಸಬಹುದು. 25 ಕೋಟಿ ಬಡ ಜನರಿಗೆ ತಲಾ ₹6ಸಾವಿರದಂತೆ ಆರ್ಥಿಕ ನೆರವು ನೀಡಬಹುದು. ಆದರೆ, ಇಲ್ಲಿವರೆಗೂ ಈ ಸರ್ಕಾರ ಯಾವುದನ್ನೂ ಮಾಡಿಲ್ಲ‘ ಎಂದು 'BJPLootingIndia' ಎಂಬ ಹ್ಯಾಷ್ಟ್ಯಾಗ್ನೊಂದಿಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇಂದ್ರ ಸರ್ಕಾರ ತೈಲ ಮಾರಾಟದಿಂದ ಸಂಗ್ರಹಿಸಿರುವ ತೆರಿಗೆ ಹಣದಲ್ಲಿ, ದೇಶಕ್ಕೆ ಬೇಕಾಗಿರುವ ಕೋವಿಡ್ ಲಸಿಕೆ ಖರೀದಿ ಸೇರಿದಂತೆ, ಅನೇಕ ಸೌಲಭ್ಯಗಳನ್ನು ಕಲ್ಪಿಸಬಹುದಿತ್ತು. ಆದರೆ, ಇಲ್ಲಿವರೆಗೂ ಏನೂ ಮಾಡಿಲ್ಲ‘ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.</p>.<p>ತೈಲ ಬೆಲೆ ಇಳಿಕೆಗೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ಸಾಂಕೇತಿಕವಾಗಿ ನಗರದ ವಿವಿಧ ಪೆಟ್ರೊಲ್ ಬಂಕ್ಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ‘ಈ ಸಾಂಕ್ರಾಮಿಕ ರೋಗದ ಕಾಲದಲ್ಲಿ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಿಂದ ₹2.74 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುತ್ತಿದೆ‘ ಎಂದು ಉಲ್ಲೇಖಿಸಿದ್ದಾರೆ.</p>.<p>‘ಈ ತೆರಿಗೆ ಹಣದಿಂದ ದೇಶಕ್ಕೆ ಬೇಕಾಗುವಷ್ಟು ಲಸಿಕೆ ಖರೀದಿಸಬಹುದು (₹67ಸಾವಿರ ಕೋಟಿ) ಅಲ್ಲದೆ 718 ಜಿಲ್ಲೆಗಳಲ್ಲಿ ಆಮ್ಲಜನಕ ಘಟಕಗಳನ್ನು ಆರಂಭಿಸಬಹುದು. 29 ರಾಜ್ಯಗಳಲ್ಲಿ ಎಐಐಎಂಎಸ್ ಆಸ್ಪತ್ರೆ ಆರಂಭಿಸಬಹುದು. 25 ಕೋಟಿ ಬಡ ಜನರಿಗೆ ತಲಾ ₹6ಸಾವಿರದಂತೆ ಆರ್ಥಿಕ ನೆರವು ನೀಡಬಹುದು. ಆದರೆ, ಇಲ್ಲಿವರೆಗೂ ಈ ಸರ್ಕಾರ ಯಾವುದನ್ನೂ ಮಾಡಿಲ್ಲ‘ ಎಂದು 'BJPLootingIndia' ಎಂಬ ಹ್ಯಾಷ್ಟ್ಯಾಗ್ನೊಂದಿಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>