ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಜನರಿಗೆ ಉಸಿರಾಡುವುದು ಬೇಕಿದೆ, ಪ್ರಧಾನಿ ನಿವಾಸವಲ್ಲ: ರಾಹುಲ್ ಗಾಂಧಿ

Last Updated 9 ಮೇ 2021, 14:35 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಎರಡನೇ ಅಲೆಯ ಸಂದರ್ಭದಲ್ಲೇ ಕೇಂದ್ರ ಸರ್ಕಾರವು ಹೊಸ ಸಂಸತ್ ಭವನ ನಿರ್ಮಾಣ ಯೋಜನೆ ಕೈಗೆತ್ತಿಕೊಂಡಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ದೇಶದ ಜನರಿಗೆ ಈಗ ಉಸಿರಾಡುವುದು ಬೇಕಾಗಿದೆಯೇ ಹೊರತು ಪ್ರಧಾನಿ ನಿವಾಸವಲ್ಲ’ ಎಂದು ಅವರು ಟ್ವೀಟ್ ಮಾಡಿದ್ದಾರೆ. ಜತೆಗೆ ಜನರು ಆಮ್ಲಜನಕ ಸಿಲಿಂಡರ್‌ಗಳನ್ನು ತುಂಬಿಸಿಕೊಳ್ಳಲು ಸರದಿಯಲ್ಲಿ ನಿಂತಿರುವ ಮತ್ತು ಸೆಂಟ್ರಲ್‌ ವಿಸ್ತಾ ಯೋಜನೆಯ ನಿರ್ಮಾಣ ಕಾಮಗಾರಿಯ ಚಿತ್ರವನ್ನೂ ಲಗತ್ತಿಸಿದ್ದಾರೆ.

‘ಸೆಂಟ್ರಲ್ ವಿಸ್ತಾ’ ಯೋಜನೆಯಡಿ ತ್ರಿಕೋನಾಕಾರದ ಹೊಸ ಸಂಸತ್ತಿನ ಭವನ ನಿರ್ಮಾಣ, ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ ಮೂರು ಕಿ.ಮೀ ಉದ್ದದ ರಾಜಪತ್‌ ನವೀಕರಣ ಮತ್ತು ಪ್ರಧಾನಿ ಮತ್ತು ಉಪ ರಾಷ್ಟ್ರಪತಿಯವರ ನೂತನ ನಿವಾಸಗಳ ನಿರ್ಮಾಣ ಮಾಡಲಾಗುತ್ತಿದೆ. ‌

ಸೆಂಟ್ರಲ್‌ ವಿಸ್ತಾ ಯೋಜನೆಯನ್ನು ‘ಅಗತ್ಯ ವಸ್ತುಗಳ ಕಾಯ್ದೆ‘ಯಡಿ ತಂದು, ಲಾಕ್‌ಡೌನ್‌ ವೇಳೆ ಕಾಮಗಾರಿ ಕೈಗೊಳ್ಳಲಾಗಿದೆ.

ಸಾಂಕ್ರಾಮಿಕವು ಗ್ರಾಮೀಣ ಪ್ರದೇಶಗಳಲ್ಲಿಯೂ ಹರಡುತ್ತಿರುವ ಬಗ್ಗೆ ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದು, ‘ನಗರಗಳ ಬಳಿಕ ಇದೀಗ ಗ್ರಾಮೀಣ ಪ್ರದೇಶಗಳೂ ದೇವರ ಮೇಲೆ ಅವಲಂಬಿತವಾಗಿವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT