ನವದೆಹಲಿ: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ಯು) ಆವರಣದಲ್ಲಿ ಕಳೆದ ಜನವರಿಯಲ್ಲಿನಡೆದಿದ್ದ ದಾಂದಲೆ, ಹಲ್ಲೆ ಪ್ರಕರಣ ಕುರಿತು ಎಫ್ಐಆರ್ ದಾಖಲಿಸಲು ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ದಾಂದಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಪ್ರೊಫೆಸರ್ ಸುಚರಿತಾ ಸೆನ್ ಅವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದರು. ಘಟನೆ ಸಂಬಂಧ ಈಗಾಗಲೇ ಮೊಕದ್ದಮೆ ದಾಖಲಾಗಿದೆ ಎಂದು ಉಲ್ಲೇಖಿಸಿದ ಕೋರ್ಟ್ ಶುಕ್ರವಾರ ಈ ಅರ್ಜಿಯನ್ನು ತಿರಸ್ಕರಿಸಿತು. ಇದಕ್ಕೂ ಮೊದಲು ಪೊಲೀಸರು ಸಲ್ಲಿಸಿದ್ದ ವಸ್ತುಸ್ಥಿತಿ ವರದಿಯನ್ನು ಕೋರ್ಟ್ ಪರಿಶೀಲಿಸಿತು.
ವಸ್ತುಸ್ಥಿತಿ ವರದಿ ಅನುಸಾರ ಅರ್ಜಿದಾರರು ಸೇರಿ ಹಲವರು ಗಾಯಗೊಂಡಿದ್ದಾರೆ. ಈ ಸಂಬಂಧ ಈಗಾಗಲೇ ಮೊಕದ್ದಮೆ ದಾಖಲಾಗಿದೆ ಎಂಬುದನ್ನು ಕೋರ್ಟ್ ಉಲ್ಲೇಖಿಸಿತು.