ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಗುರುವಾರ ಬಿಡುಗಡೆ ಸಾಧ್ಯತೆ

Last Updated 1 ಫೆಬ್ರುವರಿ 2023, 13:45 IST
ಅಕ್ಷರ ಗಾತ್ರ

ಲಖನೌ: ಕೇರಳದ ಪತ್ರಕರ್ತ ಸಿದ್ದೀಕ್‌ ಕಪ್ಪನ್‌ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲು ಅಗತ್ಯವಾದ ಶ್ಯೂರಿಟಿಗಳನ್ನು ನ್ಯಾಯಾಲಯಕ್ಕೆ ಸಮರ್ಪಿಸಿದ್ದು, ಅವರು ಗುರುವಾರ ಜೈಲಿನಿಂದ ಹೊರಬರುವ ಸಾಧ್ಯತೆ ಇದೆ ಎಂದು ಅವರ ಪರ ವಕೀಲ ಮೊಹಮ್ಮದ್ ಧಾನೀಶ್ ಕೆ. ಎಸ್. ಬುಧವಾರ ಹೇಳಿದ್ದಾರೆ.

‘ಪಿಎಂಎಲ್‌ಎ ನ್ಯಾಯಾಲಯದಲ್ಲಿ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಬಿಡುಗಡೆ ಆದೇಶವನ್ನು ಜೈಲಿಗೆ ಕಳುಹಿಸಲಾಗಿದೆ’ ಎಂದೂ ಅವರು ತಿಳಿಸಿದ್ದಾರೆ.

2020ರ ಅಕ್ಟೋಬರ್‌ನಲ್ಲಿ ಹಾತ್ರಾಸ್‌ಗೆ ತೆರಳುತ್ತಿದ್ದಾಗ ಉತ್ತರ ಪ್ರದೇಶ ಪೊಲೀಸರು ಕಪ್ಪನ್‌ ಅವರನ್ನು ಬಂಧಿಸಿದ್ದರು. ಕಪ್ಪನ್‌ ಅವರನ್ನು ಲಖನೌನ ಜಿಲ್ಲಾ ಕಾರಾಗೃಹದಲ್ಲಿರಿಸಲಾಗಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT