ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳ ಮೂಲಕ ದೇಶದ ವಿರುದ್ಧ ಯುದ್ಧ ಸಾರಿದ ಲಷ್ಕರ್–ಎ–ತೈಯಬಾ ಸಂಸ್ಥಾಪಕ ಹಫೀಜ್ ಸಯೀದ್, ಹಿಜ್ಬುಲ್ ಮುಜಾಹಿದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದಿನ್, ಯಾಸಿನ್ ಮಲಿಕ್, ಶಬ್ಬಿರ್ ಶಾ, ಮಸರತ್ ಅಲಂ ಸೇರಿದಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರ ವಿರುದ್ಧ ಕಠಿಣ ಯುಎಪಿಎ ಮತ್ತು ಐಪಿಸಿ ಸೆಕ್ಷನ್, ಕ್ರಿಮಿನಲ್ ಪಿತೂರಿ ಮತ್ತು ಇತರ ಕಾಯ್ದೆಗಳಡಿ ಆರೋಪ ಹೊರಿಸುವಂತೆ ನ್ಯಾಯಾಲಯ ಹೇಳಿದೆ.