ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಞಾನವಾಪಿ: ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತು 14ಕ್ಕೆ ತೀರ್ಪು

Last Updated 11 ಅಕ್ಟೋಬರ್ 2022, 12:56 IST
ಅಕ್ಷರ ಗಾತ್ರ

ವಾರಾಣಸಿ:ಜ್ಞಾನವಾಪಿ ಮಸೀದಿಯೊಳಗೆ ಇದೆ ಎನ್ನಲಾದ ಶಿವಲಿಂಗವನ್ನು ಕಾರ್ಬನ್‌ ಡೇಟಿಂಗ್‌ ಪರೀಕ್ಷೆಗೆ ಒಳಪಡಿಸಬೇಕು ಎಂದು ಕೋರಿ ಸಲ್ಲಿಸಲಾದ ಮನವಿಯ ಕುರಿತು ಇಲ್ಲಿನ ಜಿಲ್ಲಾ ನ್ಯಾಯಾಲಯವು ಇದೇ 14ರಂದು ತನ್ನ ತೀರ್ಪನ್ನು ಪ್ರಕಟಿಸಲಿದೆ.

ಮೇ 16ರಂದು ಜ್ಞಾನವಾಪಿ ಮಸೀದಿಯ ಆವರಣದೊಳಗೆ ವಿಡಿಯೊ ಸಮೀಕ್ಷೆ ನಡೆಸಲಾಗಿತ್ತು. ‘ವಝೂಖಾನ’ ಕೊಳದಲ್ಲಿ ಶಿವಲಿಂಗದ ಆಕೃತಿ ಪತ್ತೆಯಾಗಿದೆ ಎಂದು ಆಗ ಹೇಳಲಾಗಿತ್ತು. ಆ ಆಕೃತಿಯನ್ನು ಕಾರ್ಬನ್‌ ಡೇಟಿಂಗ್‌ಗೆ ಒಳಪಡಿಸಬೇಕು ಎಂದು ಜ್ಞಾನವಾಪಿ– ಶೃಂಗಾರ ಗೌರಿ ಮೊಕದ್ದಮೆಯ ಹಿಂದೂ ಪರ ಅರ್ಜಿದಾರರು ಅರ್ಜಿ ಸಲ್ಲಿಸಿದ್ದರು.

ವಿಡಿಯೊ ಸಮೀಕ್ಷೆಯಲ್ಲಿ ಕಂಡುಬಂದಿರುವ ಆಕೃತಿಯು ಕಾರಂಜಿ ಎಂದು ಮಸೀದಿ ಆಡಳಿತವು ಲಿಖಿತ ಹೇಳಿಕೆ ನೀಡಿತ್ತು.

ಇದಕ್ಕೆ ಸಂಬಂಧಿಸಿದ ಅರ್ಜಿಯ ಮೇಲಿನ ವಾದಗಳು ಮಂಗಳವಾರ ಪೂರ್ಣಗೊಂಡಿದ್ದು, ನ್ಯಾಯಾಲಯವು ಇದೇ 14ರಂದು ತೀರ್ಪು ಪ್ರಕಟಿಸಲಿದೆ ಎಂದು ಜಿಲ್ಲಾ ಸರ್ಕಾರಿ ವಕೀಲ ಮಹೇಂದ್ರ ಪ್ರತಾಪ್ ಪಾಂಡೆ ತಿಳಿಸಿದ್ದಾರೆ.‌

ಮುಸ್ಲಿಂ ಪರ ವಾದ ಮಂಡಿಸಿದ ವಕೀಲ ಮುಮ್ತಾಜ್ ಅಹ್ಮದ್ ಅವರು ‘ಯಾವುದೇ ವಸ್ತುವಿನ ಕಾರ್ಬನ್ ಡೇಟಿಂಗ್ ಮಾಡಲು ಸಾಧ್ಯವಿಲ್ಲ. ಕಾರ್ಬನ್ ಡೇಟಿಂಗ್ ಹೆಸರಿನಲ್ಲಿ ವಸ್ತು ಹಾನಿಗೊಳಗಾದರೆ, ಅದು ಸುಪ್ರೀಂ ಕೋರ್ಟ್‌ನ ಆದೇಶವನ್ನು ಧಿಕ್ಕರಿಸಿದಂತೆ ಆಗುತ್ತದೆ’ ಎಂದೂ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT