<p><strong>ನವದೆಹಲಿ</strong>: ‘ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಸಂಭವಿಸಿದ ಸಾವುಗಳೆಲ್ಲ ವೈದ್ಯಕೀಯ ನಿರ್ಲಕ್ಷ್ಯದಿಂದಲೇ ಆಗಿವೆ’ ಎಂದು ನ್ಯಾಯಾಲಯಗಳು ಅಂದಾಜಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ಇದೇ ವೇಳೆ, ವೈದ್ಯಕೀಯ ನಿರ್ಲಕ್ಷ್ಯದಿಂದ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಇದಕ್ಕೆ ಪರಿಹಾರ ನೀಡಬೇಕೆಂದು ಕೋರಿ ದೀಪಕ್ ರಾಜ್ ಸಿಂಗ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.</p>.<p>ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ವಿಕ್ರಮ್ ನಾಥ್ ಮತ್ತು ಹಿಮಾ ಕೊಯ್ಲಿ ಅವರನ್ನೊಳಗೊಂಡ ಪೀಠ, ‘ಈ ಸಂಬಂಧ ನೀವು ಹೆಚ್ಚಿನ ಸಲಹೆಗಳಿಗಾಗಿ ಸಮರ್ಥ ಅಧಿಕಾರಿಗಳನ್ನು ಸಂಪರ್ಕಿಸಬಹುದು‘ ಎಂದು ಅರ್ಜಿದಾರ ದೀಪಕ್ ರಾಜ್ ಸಿಂಗ್ಗೆ ತಿಳಿಸಿತು.</p>.<p>‘ಕೋವಿಡ್ನಿಂದ ಸಂಭವಿಸಿರುವ ಪ್ರತಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಹೇಳುವುದು ಅತಿರೇಕ ಎನ್ನಿಸುತ್ತದೆ. ಕೋವಿಡ್ ಎರಡನೇ ಅಲೆ ದೇಶದಾದ್ಯಂತ ತೀವ್ರ ಪರಿಣಾಮ ಬೀರಿದೆ. ಹಾಗೆಂದ ಮಾತ್ರಕ್ಕೆ, ನಿಮ್ಮ ಅರ್ಜಿಯಲ್ಲಿ ಮಾಡಿರುವ ಆರೋಪದಂತೆ ಈ ಸಮಯದಲ್ಲಿ ಕೋವಿಡ್ನಿಂದ ಸಂಭವಿಸಿದ ಸಾವುಗಳಿಗೆಲ್ಲ ವೈದ್ಯಕೀಯ ನಿರ್ಲಕ್ಷ್ಯ ಕಾರಣ ಎಂದು ಅಂದಾಜಿಸಲು ಸಾಧ್ಯವಿಲ್ಲ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>ಇದೇ ವೇಳೆ ನ್ಯಾಯಪೀಠ, ಜೂ. 30ರ ತೀರ್ಪೊಂದನ್ನು ಉಲ್ಲೇಖಿಸಿದೆ. ಅದರಲ್ಲಿ, ‘ವ್ಯಕ್ತಿಯೊಬ್ಬ ಕೋವಿಡ್ನಿಂದ ಸಾವನ್ನಪ್ಪಿದ ಆರು ವಾರದೊಳಗೆ, ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಪರಿಹಾರ (ಎಕ್ಸ್ಗ್ರೇಷಿಯಾ) ನೀಡುವಂತೆ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.</p>.<p>‘ಈ ತೀರ್ಪಿನಲ್ಲಿ ನ್ಯಾಯಾಲಯವು ಮಾನವೀಯತೆಯ ದೃಷ್ಟಿಯಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ತಿಳಿಸಿದೆಯೇ ಹೊರತು, ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ ಅಲ್ಲ‘ ಎಂದು ನ್ಯಾಯಪೀಠ ಹೇಳಿದೆ. ಈ ವಿಚಾರವಾಗಿ ಸರ್ಕಾರ ಇನ್ನೂ ನೀತಿಯನ್ನು ರೂಪಿಸಬೇಕಾಗಿದೆ. ಈ ನೀತಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿಮ್ಮಲ್ಲಿ ಯಾವುದಾದರೂ ಸಲಹೆಗಳಿದ್ದರೆ, ನೀವು ಸೂಕ್ತ ಪ್ರಾಧಿಕಾರವನ್ನು ಸಂಪರ್ಕಿಸಬಹುದು‘ ಎಂದು ನ್ಯಾಯಪೀಠ ಅರ್ಜಿದಾರರಿಗೆ ತಿಳಿಸಿದೆ.</p>.<p>ಅರ್ಜಿದಾರರ ಪರ ಹಾಜರಾದ ವಕೀಲ ಶ್ರೀರಾಮ್ ಪರಕಟ್, ‘ಈ ಅರ್ಜಿಯು ವಿಭಿನ್ನವಾಗಿದ್ದು, ಇದರಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಅಂಶಗಳನ್ನು ಉಲ್ಲೇಖಿಸುವ ಜೊತೆಗೆ, ಅಂತ ನಿರ್ಲಕ್ಷ್ಯದಿಂದಾದ ಸಾವಿಗೆ ಪರಿಹಾರವನ್ನು ಕೇಳಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>‘ಮೇ ತಿಂಗಳಲ್ಲಿ ಈ ಅರ್ಜಿ ಸಲ್ಲಿಕೆಯಾಗಿದ್ದು, ಅಲ್ಲಿಂದ ಈಚೆಗೆ ಸಾಕಷ್ಟು ಬೆಳವಣಿಗೆಗಳು ನಡೆದಿವೆ‘ ಎಂದು ನ್ಯಾಯಪೀಠ ತಿಳಿಸಿತು.</p>.<p><strong>ಇದನ್ನೂ ಓದಿ:</strong><a href="https://www.prajavani.net/world-news/china-pakistan-russia-iran-trying-to-figure-out-what-do-they-do-now-taliban-us-president-joe-biden-864939.html" target="_blank"><strong>ತಾಲಿಬಾನ್ ಜೊತೆ ಮುಂದೇನು; ತಲೆ ಕೆಡಿಸಿಕೊಂಡಿವೆ ಚೀನಾ, ಪಾಕ್, ರಷ್ಯಾ: ಬೈಡನ್</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಕೋವಿಡ್ ಎರಡನೇ ಅಲೆ ಸಂದರ್ಭದಲ್ಲಿ ಸಂಭವಿಸಿದ ಸಾವುಗಳೆಲ್ಲ ವೈದ್ಯಕೀಯ ನಿರ್ಲಕ್ಷ್ಯದಿಂದಲೇ ಆಗಿವೆ’ ಎಂದು ನ್ಯಾಯಾಲಯಗಳು ಅಂದಾಜಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ಇದೇ ವೇಳೆ, ವೈದ್ಯಕೀಯ ನಿರ್ಲಕ್ಷ್ಯದಿಂದ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಇದಕ್ಕೆ ಪರಿಹಾರ ನೀಡಬೇಕೆಂದು ಕೋರಿ ದೀಪಕ್ ರಾಜ್ ಸಿಂಗ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.</p>.<p>ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ವಿಕ್ರಮ್ ನಾಥ್ ಮತ್ತು ಹಿಮಾ ಕೊಯ್ಲಿ ಅವರನ್ನೊಳಗೊಂಡ ಪೀಠ, ‘ಈ ಸಂಬಂಧ ನೀವು ಹೆಚ್ಚಿನ ಸಲಹೆಗಳಿಗಾಗಿ ಸಮರ್ಥ ಅಧಿಕಾರಿಗಳನ್ನು ಸಂಪರ್ಕಿಸಬಹುದು‘ ಎಂದು ಅರ್ಜಿದಾರ ದೀಪಕ್ ರಾಜ್ ಸಿಂಗ್ಗೆ ತಿಳಿಸಿತು.</p>.<p>‘ಕೋವಿಡ್ನಿಂದ ಸಂಭವಿಸಿರುವ ಪ್ರತಿ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಹೇಳುವುದು ಅತಿರೇಕ ಎನ್ನಿಸುತ್ತದೆ. ಕೋವಿಡ್ ಎರಡನೇ ಅಲೆ ದೇಶದಾದ್ಯಂತ ತೀವ್ರ ಪರಿಣಾಮ ಬೀರಿದೆ. ಹಾಗೆಂದ ಮಾತ್ರಕ್ಕೆ, ನಿಮ್ಮ ಅರ್ಜಿಯಲ್ಲಿ ಮಾಡಿರುವ ಆರೋಪದಂತೆ ಈ ಸಮಯದಲ್ಲಿ ಕೋವಿಡ್ನಿಂದ ಸಂಭವಿಸಿದ ಸಾವುಗಳಿಗೆಲ್ಲ ವೈದ್ಯಕೀಯ ನಿರ್ಲಕ್ಷ್ಯ ಕಾರಣ ಎಂದು ಅಂದಾಜಿಸಲು ಸಾಧ್ಯವಿಲ್ಲ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>ಇದೇ ವೇಳೆ ನ್ಯಾಯಪೀಠ, ಜೂ. 30ರ ತೀರ್ಪೊಂದನ್ನು ಉಲ್ಲೇಖಿಸಿದೆ. ಅದರಲ್ಲಿ, ‘ವ್ಯಕ್ತಿಯೊಬ್ಬ ಕೋವಿಡ್ನಿಂದ ಸಾವನ್ನಪ್ಪಿದ ಆರು ವಾರದೊಳಗೆ, ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಪರಿಹಾರ (ಎಕ್ಸ್ಗ್ರೇಷಿಯಾ) ನೀಡುವಂತೆ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.</p>.<p>‘ಈ ತೀರ್ಪಿನಲ್ಲಿ ನ್ಯಾಯಾಲಯವು ಮಾನವೀಯತೆಯ ದೃಷ್ಟಿಯಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ತಿಳಿಸಿದೆಯೇ ಹೊರತು, ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ ಅಲ್ಲ‘ ಎಂದು ನ್ಯಾಯಪೀಠ ಹೇಳಿದೆ. ಈ ವಿಚಾರವಾಗಿ ಸರ್ಕಾರ ಇನ್ನೂ ನೀತಿಯನ್ನು ರೂಪಿಸಬೇಕಾಗಿದೆ. ಈ ನೀತಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿಮ್ಮಲ್ಲಿ ಯಾವುದಾದರೂ ಸಲಹೆಗಳಿದ್ದರೆ, ನೀವು ಸೂಕ್ತ ಪ್ರಾಧಿಕಾರವನ್ನು ಸಂಪರ್ಕಿಸಬಹುದು‘ ಎಂದು ನ್ಯಾಯಪೀಠ ಅರ್ಜಿದಾರರಿಗೆ ತಿಳಿಸಿದೆ.</p>.<p>ಅರ್ಜಿದಾರರ ಪರ ಹಾಜರಾದ ವಕೀಲ ಶ್ರೀರಾಮ್ ಪರಕಟ್, ‘ಈ ಅರ್ಜಿಯು ವಿಭಿನ್ನವಾಗಿದ್ದು, ಇದರಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಅಂಶಗಳನ್ನು ಉಲ್ಲೇಖಿಸುವ ಜೊತೆಗೆ, ಅಂತ ನಿರ್ಲಕ್ಷ್ಯದಿಂದಾದ ಸಾವಿಗೆ ಪರಿಹಾರವನ್ನು ಕೇಳಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>‘ಮೇ ತಿಂಗಳಲ್ಲಿ ಈ ಅರ್ಜಿ ಸಲ್ಲಿಕೆಯಾಗಿದ್ದು, ಅಲ್ಲಿಂದ ಈಚೆಗೆ ಸಾಕಷ್ಟು ಬೆಳವಣಿಗೆಗಳು ನಡೆದಿವೆ‘ ಎಂದು ನ್ಯಾಯಪೀಠ ತಿಳಿಸಿತು.</p>.<p><strong>ಇದನ್ನೂ ಓದಿ:</strong><a href="https://www.prajavani.net/world-news/china-pakistan-russia-iran-trying-to-figure-out-what-do-they-do-now-taliban-us-president-joe-biden-864939.html" target="_blank"><strong>ತಾಲಿಬಾನ್ ಜೊತೆ ಮುಂದೇನು; ತಲೆ ಕೆಡಿಸಿಕೊಂಡಿವೆ ಚೀನಾ, ಪಾಕ್, ರಷ್ಯಾ: ಬೈಡನ್</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>