<p><strong>ಮುಂಬೈ: </strong>‘ಕೋವಿಡ್ 19‘ ಸಾಂಕ್ರಾಮಿಕದ ಪ್ರಕರಣಗಳ ಸಂಖ್ಯೆ ಏರುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ, ವಿದರ್ಭ ಪ್ರಾಂತ್ಯದ ಯವತ್ಮಾಲ್,ಅಮರಾವತಿ ಮತ್ತು ಅಕೋಲಾ ನಗರಗಳಲ್ಲಿ ಯಾವುದೇ ಕ್ಷಣದಲ್ಲಿ ‘ಕಟ್ಟುನಿಟ್ಟಿನ ಲಾಕ್ಡೌನ್‘ ನಿಯಮಗಳನ್ನು ಜಾರಿಗೊಳಿಸುವಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಉಪ ಮುಖ್ಯಮಂತ್ರಿ ಅಜತ್ ಪವಾರ್ ಅವರು ಗುರುವಾರ ಚರ್ಚೆ ನಡೆಸಿದ್ದಾರೆ.</p>.<p>ಕೊರೊನಾ ಸೋಂಕಿನ ಪರಿಸ್ಥಿತಿಯನ್ನು ಅವಲೋಕಿಸುವುದಕ್ಕಾಗಿ ಒಬ್ಬರು ಸರ್ಕಾರಿ ವೈದ್ಯರನ್ನು ಅಮರಾವತಿಗೆ ಕಳುಹಿಸಲಾಗಿದೆ. ಅವರು ದೂರವಾಣಿ ಮೂಲಕ ನಗರದಲ್ಲಿರುವ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮಹಾರಾಷ್ಟ್ರದಲ್ಲಿ ಬುಧವಾರ 4,787 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿವೆ. ಇದು ಈ ವರ್ಷದಲ್ಲೇ ಅತ್ಯಧಿಕ ಪ್ರಮಾಣದಲ್ಲಿ ವರದಿಯಾಗಿರುವ ಸೋಂಕಿನ ಪ್ರಕರಣಗಳಾಗಿವೆ. ಅಮರಾವತಿಯಲ್ಲಿ ಒಂದು ದಿನದಲ್ಲಿ ಅತಿ ಹೆಚ್ಚು ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈ ಜಿಲ್ಲೆಯಲ್ಲಿ ಮಂಗಳವಾರ 82 ಪ್ರಕರಣಗಳು ವರದಿಯಾಗಿತ್ತು, ಬುಧವಾರ 230 ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅಕೋಲಾ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಬುಧವಾರ 105 ಪ್ರಕರಣಗಳು ದಾಖಲಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>‘ಕೋವಿಡ್ 19‘ ಸಾಂಕ್ರಾಮಿಕದ ಪ್ರಕರಣಗಳ ಸಂಖ್ಯೆ ಏರುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ, ವಿದರ್ಭ ಪ್ರಾಂತ್ಯದ ಯವತ್ಮಾಲ್,ಅಮರಾವತಿ ಮತ್ತು ಅಕೋಲಾ ನಗರಗಳಲ್ಲಿ ಯಾವುದೇ ಕ್ಷಣದಲ್ಲಿ ‘ಕಟ್ಟುನಿಟ್ಟಿನ ಲಾಕ್ಡೌನ್‘ ನಿಯಮಗಳನ್ನು ಜಾರಿಗೊಳಿಸುವಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಉಪ ಮುಖ್ಯಮಂತ್ರಿ ಅಜತ್ ಪವಾರ್ ಅವರು ಗುರುವಾರ ಚರ್ಚೆ ನಡೆಸಿದ್ದಾರೆ.</p>.<p>ಕೊರೊನಾ ಸೋಂಕಿನ ಪರಿಸ್ಥಿತಿಯನ್ನು ಅವಲೋಕಿಸುವುದಕ್ಕಾಗಿ ಒಬ್ಬರು ಸರ್ಕಾರಿ ವೈದ್ಯರನ್ನು ಅಮರಾವತಿಗೆ ಕಳುಹಿಸಲಾಗಿದೆ. ಅವರು ದೂರವಾಣಿ ಮೂಲಕ ನಗರದಲ್ಲಿರುವ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.</p>.<p>ಮಹಾರಾಷ್ಟ್ರದಲ್ಲಿ ಬುಧವಾರ 4,787 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿವೆ. ಇದು ಈ ವರ್ಷದಲ್ಲೇ ಅತ್ಯಧಿಕ ಪ್ರಮಾಣದಲ್ಲಿ ವರದಿಯಾಗಿರುವ ಸೋಂಕಿನ ಪ್ರಕರಣಗಳಾಗಿವೆ. ಅಮರಾವತಿಯಲ್ಲಿ ಒಂದು ದಿನದಲ್ಲಿ ಅತಿ ಹೆಚ್ಚು ಸೋಂಕಿನ ಪ್ರಕರಣಗಳು ದಾಖಲಾಗಿವೆ. ಈ ಜಿಲ್ಲೆಯಲ್ಲಿ ಮಂಗಳವಾರ 82 ಪ್ರಕರಣಗಳು ವರದಿಯಾಗಿತ್ತು, ಬುಧವಾರ 230 ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅಕೋಲಾ ಮುನ್ಸಿಪಲ್ ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಬುಧವಾರ 105 ಪ್ರಕರಣಗಳು ದಾಖಲಾಗಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>