ಠಾಣೆ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಏರುಗತಿಯಲ್ಲಿರುವುದರಿಂದ ಮದುವೆಗಳಿಗೆ 50 ಜನರ ಮಿತಿ ವಿಧಿಸಲಾಗಿದ್ದು, ಠಾಣೆ ಜಿಲ್ಲೆಯ ಕಲ್ಯಾಣ್ನಲ್ಲಿ ಮದುವೆಯೊಂದರಲ್ಲಿ ಸುಮಾರು 700 ಜನರು ಪಾಲ್ಗೊಂಡಿದ್ದ ಕಾರಣಕ್ಕೆ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
‘ಕಲ್ಯಾಣ್ (ಪೂರ್ವ)ನ ಮಂಟಪವೊಂದರಲ್ಲಿಬುಧವಾರ ನಡೆದ ಮದುವೆಯಲ್ಲಿ ಸುಮಾರು 700 ಜನರು ಪಾಲ್ಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಕಲ್ಯಾಣ್ ಡೊಂಬಿವಿಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದರು. ಸರ್ಕಾರದ ಮಾರ್ಗಸೂಚಿಯ ಉಲ್ಲಂಘನೆಯಾಗಿರುವುದು ದೃಢಪಟ್ಟ ಕಾರಣ ಪೊಲೀಸ್ ಠಾಣೆಯಲ್ಲಿ ಸಂಘಟಕರಾದ ರಾಜೇಶ್ ಮಹಾತ್ರೆ ಮತ್ತು ಮಹೇಶ್ ರಾವತ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಯಿತು’ ಎಂದು ಪಾಲಿಕೆಯ ಪ್ರಕಟಣೆ ತಿಳಿಸಿದೆ.