ಅಯೋಧ್ಯೆ: ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಈ ವರ್ಷ ಅಯೋಧ್ಯೆಯಲ್ಲಿ ವರ್ಚುವಲ್ ದೀಪೋತ್ಸವಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ನಿರ್ದೇಶನದ ಮೇರೆಗೆ ಈ ವರ್ಷದ ವರ್ಚುವಲ್ ದೀಪೋತ್ಸವಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೋವಿಡ್–19 ಕಾರಣದಿಂದಾಗಿ ಅಯೋಧ್ಯೆಗೆ ಬರಲಾಗದವರು ವೆಬ್ಸೈಟ್ ಮೂಲಕ ರಾಮ ಲಲ್ಲಾನ ಎದುರು ದೀಪ ಬೆಳಗಲು ಅವಕಾಶವಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.
CM श्री @myogiadityanath जी के निर्देशों के क्रम में अयोध्या में आयोजित किए जा रहे ‘दीपोत्सव-2020’ में वर्चुअल दीपोत्सव की व्यवस्था की गई है। कोविड-19 के कारण अयोध्या न पहुंच पाने वाले श्रद्धालु वेबसाइट के माध्यम से श्रीरामलला विराजमान के समक्ष वर्चुअली दीप प्रज्ज्वलित कर सकेंगे।
ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಇದೇ ಮೊದಲ ಬಾರಿಗೆ ದೀಪೋತ್ಸವ ಆಯೋಜಿಸಲಾಗುತ್ತಿದೆ. ಕಳೆದ 500 ವರ್ಷಗಳಿಂದ ಬಾಕಿ ಇರುವ ಕಾರ್ಯಕ್ರಮ ಇದಾಗಿದೆ ಎಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಸಚಿವ ನೀಲಕಂಠ ತಿವಾರಿ ಹೇಳಿದ್ದಾರೆ.
‘ಈ ವರ್ಷದ ದೀಪೋತ್ಸವದಲ್ಲಿ 5 ಲಕ್ಷ ಹಣತೆಗಳನ್ನು ಬೆಳಗಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.
ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರ ಮಾರ್ಗದರ್ಶನದಲ್ಲಿ ಯೋಗಿ ಆದಿತ್ಯನಾಥ ಅವರು ದೀಪೋತ್ಸವ ಆಚರಣೆ ಆರಂಭಿಸಿದ್ದಾರೆ. 2018ರಲ್ಲಿ ದೀಪೋತ್ಸವ ಗಿನ್ನೆಸ್ ದಾಖಲೆ ನಿರ್ಮಿಸಿತ್ತು. 2019ರ ದೀಪೋತ್ಸವ ಮತ್ತೆ ದಾಖಲೆ ನಿರ್ಮಿಸಿತ್ತು ಎಂದು ಅವರು ಹೇಳಿದ್ದಾರೆ.