<p><strong>ನವದೆಹಲಿ: </strong>ಕಳೆದ ಎರಡು ವಾರಗಳಿಂದ ಕರ್ನಾಟಕ, ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲೇ ಅತಿ ಹೆಚ್ಚು ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ.</p>.<p>ಮೇ ತಿಂಗಳ ಆರಂಭದಲ್ಲಿ ಪ್ರತಿ ದಿನ ಪತ್ತೆಯಾಗುತ್ತಿದ್ದ ಕೋವಿಡ್–19 ಹೊಸ ಪ್ರಕರಣಗಳಲ್ಲಿ ಶೇಕಡ 30ರಷ್ಟು ದಕ್ಷಿಣ ರಾಜ್ಯಗಳಲ್ಲಿ ದೃಢಪಟ್ಟಿದ್ದವು. ಆದರೆ, ಕಳೆದ ಮೂರು ದಿನಗಳಿಂದ ಇದು ಶೇಕಡ 40ಕ್ಕೆ ಏರಿಕೆಯಾಗಿದೆ.</p>.<p>ಸೋಮವಾರ, ಶೇಕಡ 42ಕ್ಕೂ ಹೆಚ್ಚು ಪ್ರಕರಣಗಳು ಈ ನಾಲ್ಕು ರಾಜ್ಯಗಳಲ್ಲೇ ಪತ್ತೆಯಾಗಿವೆ. ತಮಿಳುನಾಡಿನಲ್ಲಿ ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ತಮಿಳುನಾಡಿನಲ್ಲಿ ಸೋಮವಾರ 33 ಸಾವಿರಕ್ಕೂ ಹೆಚ್ಚು ಕೋವಿಡ್–19 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 34 ಸಾವಿರ ಪ್ರಕರಣಗಳು ದೃಢಪಟ್ಟಿವೆ.</p>.<p>ನಾಲ್ಕು ದಕ್ಷಿಣ ರಾಜ್ಯಗಳ ಸುಮಾರು 100 ಜಿಲ್ಲೆಗಳಲ್ಲಿ ಶೇಕಡ 10ಕ್ಕೂ ಹೆಚ್ಚು ಪಾಸಿಟಿವಿಟಿ ದರ ವರದಿಯಾಗಿದೆ. ಇವುಗಳ ಪೈಕಿ ಎಂಟು ಜಿಲ್ಲೆಗಳಲ್ಲಿ ಶೇಕಡ 40ಕ್ಕೂ ಹೆಚ್ಚು ಪಾಸಿಟಿವಿಟಿ ದರ ವರದಿಯಾಗಿದೆ. ಇವುಗ<br />ಳಲ್ಲಿ ಕರ್ನಾಟಕದ ಬಳ್ಳಾರಿ (ಶೇಕಡ 47.2), ಉತ್ತರ ಕನ್ನಡ (ಶೇಕಡ 46.1), ಮೈಸೂರು (ಶೇಕಡ 44.7), ಹಾಸನ (ಶೇಕಡ 42.6) ಮತ್ತು ಶಿವಮೊಗ್ಗ (ಶೇಕಡ 42.1) ಸೇರಿವೆ.</p>.<p>ಬಹುತೇಕ ರಾಜ್ಯಗಳಲ್ಲಿ ಪರೀಕ್ಷೆ ನಡೆಸುವುದನ್ನು ಕಡಿಮೆಗೊಳಿಸುತ್ತಿರುವುದಕ್ಕೆ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>‘ದಕ್ಷಿಣ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತ್ವರಿತಗತಿಯಲ್ಲಿ ತಡೆಯಬೇಕು. ಇದಕ್ಕಾಗಿ ಆರೋಗ್ಯ<br />ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಬೇಕು. ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಆಗ ಮಾತ್ರ ನಿಜವಾದ ಪರಿಸ್ಥಿತಿ ಗೊತ್ತಾಗುತ್ತದೆ’ ಎಂದು ಸಾರ್ವಜನಿಕ ನೀತಿ ಮತ್ತು ಆರೋಗ್ಯ ವ್ಯವಸ್ಥೆಯ ತಜ್ಞ ಚಂದ್ರಕಾಂತ್ ಲಹರಿಯಾ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಯಾವ ರಾಜ್ಯವು ಸೋಂಕು ನಿಯಂತ್ರಿಸಿದೆ ಎನ್ನುವುದು ತಿಳಿಯುವುದು ಕಷ್ಟಸಾಧ್ಯ. ಬಹುತೇಕ ರಾಜ್ಯಗಳಲ್ಲಿ ಪರೀಕ್ಷೆ ನಡೆಸುವುದನ್ನು ಕಡಿಮೆಗೊಳಿಸಲಾಗಿದೆ’ ಎಂದು ತಜ್ಞರಾದ ಗಿರಿಧರ್ ಬಾಬು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕಳೆದ ಎರಡು ವಾರಗಳಿಂದ ಕರ್ನಾಟಕ, ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲೇ ಅತಿ ಹೆಚ್ಚು ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ.</p>.<p>ಮೇ ತಿಂಗಳ ಆರಂಭದಲ್ಲಿ ಪ್ರತಿ ದಿನ ಪತ್ತೆಯಾಗುತ್ತಿದ್ದ ಕೋವಿಡ್–19 ಹೊಸ ಪ್ರಕರಣಗಳಲ್ಲಿ ಶೇಕಡ 30ರಷ್ಟು ದಕ್ಷಿಣ ರಾಜ್ಯಗಳಲ್ಲಿ ದೃಢಪಟ್ಟಿದ್ದವು. ಆದರೆ, ಕಳೆದ ಮೂರು ದಿನಗಳಿಂದ ಇದು ಶೇಕಡ 40ಕ್ಕೆ ಏರಿಕೆಯಾಗಿದೆ.</p>.<p>ಸೋಮವಾರ, ಶೇಕಡ 42ಕ್ಕೂ ಹೆಚ್ಚು ಪ್ರಕರಣಗಳು ಈ ನಾಲ್ಕು ರಾಜ್ಯಗಳಲ್ಲೇ ಪತ್ತೆಯಾಗಿವೆ. ತಮಿಳುನಾಡಿನಲ್ಲಿ ಪ್ರತಿ ದಿನ ಹೆಚ್ಚಿನ ಸಂಖ್ಯೆಯಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ತಮಿಳುನಾಡಿನಲ್ಲಿ ಸೋಮವಾರ 33 ಸಾವಿರಕ್ಕೂ ಹೆಚ್ಚು ಕೋವಿಡ್–19 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 34 ಸಾವಿರ ಪ್ರಕರಣಗಳು ದೃಢಪಟ್ಟಿವೆ.</p>.<p>ನಾಲ್ಕು ದಕ್ಷಿಣ ರಾಜ್ಯಗಳ ಸುಮಾರು 100 ಜಿಲ್ಲೆಗಳಲ್ಲಿ ಶೇಕಡ 10ಕ್ಕೂ ಹೆಚ್ಚು ಪಾಸಿಟಿವಿಟಿ ದರ ವರದಿಯಾಗಿದೆ. ಇವುಗಳ ಪೈಕಿ ಎಂಟು ಜಿಲ್ಲೆಗಳಲ್ಲಿ ಶೇಕಡ 40ಕ್ಕೂ ಹೆಚ್ಚು ಪಾಸಿಟಿವಿಟಿ ದರ ವರದಿಯಾಗಿದೆ. ಇವುಗ<br />ಳಲ್ಲಿ ಕರ್ನಾಟಕದ ಬಳ್ಳಾರಿ (ಶೇಕಡ 47.2), ಉತ್ತರ ಕನ್ನಡ (ಶೇಕಡ 46.1), ಮೈಸೂರು (ಶೇಕಡ 44.7), ಹಾಸನ (ಶೇಕಡ 42.6) ಮತ್ತು ಶಿವಮೊಗ್ಗ (ಶೇಕಡ 42.1) ಸೇರಿವೆ.</p>.<p>ಬಹುತೇಕ ರಾಜ್ಯಗಳಲ್ಲಿ ಪರೀಕ್ಷೆ ನಡೆಸುವುದನ್ನು ಕಡಿಮೆಗೊಳಿಸುತ್ತಿರುವುದಕ್ಕೆ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>‘ದಕ್ಷಿಣ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತ್ವರಿತಗತಿಯಲ್ಲಿ ತಡೆಯಬೇಕು. ಇದಕ್ಕಾಗಿ ಆರೋಗ್ಯ<br />ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸಬೇಕು. ಉತ್ತರ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಆಗ ಮಾತ್ರ ನಿಜವಾದ ಪರಿಸ್ಥಿತಿ ಗೊತ್ತಾಗುತ್ತದೆ’ ಎಂದು ಸಾರ್ವಜನಿಕ ನೀತಿ ಮತ್ತು ಆರೋಗ್ಯ ವ್ಯವಸ್ಥೆಯ ತಜ್ಞ ಚಂದ್ರಕಾಂತ್ ಲಹರಿಯಾ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಯಾವ ರಾಜ್ಯವು ಸೋಂಕು ನಿಯಂತ್ರಿಸಿದೆ ಎನ್ನುವುದು ತಿಳಿಯುವುದು ಕಷ್ಟಸಾಧ್ಯ. ಬಹುತೇಕ ರಾಜ್ಯಗಳಲ್ಲಿ ಪರೀಕ್ಷೆ ನಡೆಸುವುದನ್ನು ಕಡಿಮೆಗೊಳಿಸಲಾಗಿದೆ’ ಎಂದು ತಜ್ಞರಾದ ಗಿರಿಧರ್ ಬಾಬು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>