<p><strong>ನವದೆಹಲಿ:</strong> ಕೋವಿಡ್–19 ಕರ್ತವ್ಯದ ವೇಳೆ ಸಾವಿಗೀಡಾಗುವ ಆರೋಗ್ಯ ಕಾರ್ಯಕರ್ತರನ್ನು ಗಮನದಲ್ಲಿಟ್ಟುಕೊಂಡು ಘೋಷಿಸಲಾಗಿದ್ದ ₹50 ಲಕ್ಷ ವಿಮೆ ಯೋಜನೆಯನ್ನು ಕೇಂದ್ರ ಸರ್ಕಾರ ಒಂದು ವರ್ಷದವರೆಗೆ ವಿಸ್ತರಿಸಿದೆ.</p>.<p>ಕರ್ತವ್ಯದ ವೇಳೆ ಮೃತಪಟ್ಟ ಕೊರೊನಾ ಯೋಧರನ್ನು ಅವಲಂಬಿಸಿರುವವರಿಗೆ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ (ಪಿಎಂಜಿಕೆಪಿ)’ ಸುರಕ್ಷತೆ ಒದಗಿಸಿದೆ. ಈ ಯೋಜನೆಯು ಇಂದಿನಿಂದ ಅನ್ವಯವಾಗುವಂತೆ ಒಂದು ವರ್ಷದ ವರೆಗೆ ವಿಸ್ತರಿಸಲಾಗಿದೆ ಎಂದು ಈ ಮೂಲಕ ತಿಳಿಸಲು ಸಂತೋಷವಾಗುತ್ತಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಮಂಗಳವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/uttar-pradesh-govt-announces-free-covid-19-vaccine-for-all-above-eighteen-years-from-may-1-824203.html" itemprop="url">ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ: ಉತ್ತರ ಪ್ರದೇಶ ಸರ್ಕಾರ</a></p>.<p><strong>ಓದಿ:</strong><a href="https://www.prajavani.net/india-news/india-waives-import-duty-on-covid-19-drug-remdesivir-824201.html" itemprop="url">ಕೋವಿಡ್-19 ಔಷಧ ರೆಮ್ಡಿಸಿವಿರ್ ಆಮದು ಸುಂಕ ರದ್ದು</a></p>.<p>ಹಾಲಿ ವಿಮೆ ಯೋಜನೆ ಅವಧಿಯು ಏಪ್ರಿಲ್ 24ಕ್ಕೆ ಕೊನೆಗೊಳ್ಳಲಿದೆ. ಬಳಿಕ ಯೋಜನೆಯನ್ನು ಮುಂದುವರಿಸುವುದಿಲ್ಲ ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದರು. ಇದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ವಿಮೆ ಅವಧಿಯನ್ನು ಮುಂದುವರಿಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು.</p>.<p>ಕೋವಿಡ್ ಯೋಧರನ್ನು ಅವಲಂಬಿಸಿರುವವರನ್ನು ಗಮನದಲ್ಲಿಟ್ಟುಕೊಂಡು 2020ರ ಮಾರ್ಚ್ 30ರಂದು ವಿಮಾ ಯೋಜನೆ ಆರಂಭಿಸಲಾಗಿತ್ತು. ಆರಂಭದಲ್ಲಿ 90 ದಿನಗಳ ಅವಧಿಗೆ ಸೀಮಿತವಾಗಿದ್ದ ಯೋಜನೆಯನ್ನು ಬಳಿಕ ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್–19 ಕರ್ತವ್ಯದ ವೇಳೆ ಸಾವಿಗೀಡಾಗುವ ಆರೋಗ್ಯ ಕಾರ್ಯಕರ್ತರನ್ನು ಗಮನದಲ್ಲಿಟ್ಟುಕೊಂಡು ಘೋಷಿಸಲಾಗಿದ್ದ ₹50 ಲಕ್ಷ ವಿಮೆ ಯೋಜನೆಯನ್ನು ಕೇಂದ್ರ ಸರ್ಕಾರ ಒಂದು ವರ್ಷದವರೆಗೆ ವಿಸ್ತರಿಸಿದೆ.</p>.<p>ಕರ್ತವ್ಯದ ವೇಳೆ ಮೃತಪಟ್ಟ ಕೊರೊನಾ ಯೋಧರನ್ನು ಅವಲಂಬಿಸಿರುವವರಿಗೆ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಪ್ಯಾಕೇಜ್ (ಪಿಎಂಜಿಕೆಪಿ)’ ಸುರಕ್ಷತೆ ಒದಗಿಸಿದೆ. ಈ ಯೋಜನೆಯು ಇಂದಿನಿಂದ ಅನ್ವಯವಾಗುವಂತೆ ಒಂದು ವರ್ಷದ ವರೆಗೆ ವಿಸ್ತರಿಸಲಾಗಿದೆ ಎಂದು ಈ ಮೂಲಕ ತಿಳಿಸಲು ಸಂತೋಷವಾಗುತ್ತಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಮಂಗಳವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/uttar-pradesh-govt-announces-free-covid-19-vaccine-for-all-above-eighteen-years-from-may-1-824203.html" itemprop="url">ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ: ಉತ್ತರ ಪ್ರದೇಶ ಸರ್ಕಾರ</a></p>.<p><strong>ಓದಿ:</strong><a href="https://www.prajavani.net/india-news/india-waives-import-duty-on-covid-19-drug-remdesivir-824201.html" itemprop="url">ಕೋವಿಡ್-19 ಔಷಧ ರೆಮ್ಡಿಸಿವಿರ್ ಆಮದು ಸುಂಕ ರದ್ದು</a></p>.<p>ಹಾಲಿ ವಿಮೆ ಯೋಜನೆ ಅವಧಿಯು ಏಪ್ರಿಲ್ 24ಕ್ಕೆ ಕೊನೆಗೊಳ್ಳಲಿದೆ. ಬಳಿಕ ಯೋಜನೆಯನ್ನು ಮುಂದುವರಿಸುವುದಿಲ್ಲ ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದರು. ಇದಕ್ಕೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು. ವಿಮೆ ಅವಧಿಯನ್ನು ಮುಂದುವರಿಸಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು.</p>.<p>ಕೋವಿಡ್ ಯೋಧರನ್ನು ಅವಲಂಬಿಸಿರುವವರನ್ನು ಗಮನದಲ್ಲಿಟ್ಟುಕೊಂಡು 2020ರ ಮಾರ್ಚ್ 30ರಂದು ವಿಮಾ ಯೋಜನೆ ಆರಂಭಿಸಲಾಗಿತ್ತು. ಆರಂಭದಲ್ಲಿ 90 ದಿನಗಳ ಅವಧಿಗೆ ಸೀಮಿತವಾಗಿದ್ದ ಯೋಜನೆಯನ್ನು ಬಳಿಕ ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>