<p><strong>ಭುವನೇಶ್ವರ</strong>: ಒಡಿಶಾ ಸರ್ಕಾರವು ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಷನ್ (ಸಿಎಚ್ಎಸ್ಇ) ನಡೆಸುವ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ.</p>.<p>ಈ ನಿರ್ಧಾರವನ್ನು ಪ್ರಕಟಿಸುವಾಗ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ‘ಪರೀಕ್ಷೆಗಳಿಗಿಂತ ವಿದ್ಯಾರ್ಥಿಗಳ ಸುರಕ್ಷತೆ ಮುಖ್ಯ’ ಎಂದು ಹೇಳಿದರು.</p>.<p>‘ಕೋವಿಡ್– 19 ಪಿಡುಗಿನ ಎರಡನೇ ಅಲೆಯು ದೇಶದಾದ್ಯಂತ ಹಿಂದೆಂದೂ ಕಂಡರಿಯದ ಪರಿಸ್ಥಿತಿ ಸೃಷ್ಟಿಸಿದೆ. ಸದ್ಯದ ಪರಿಸ್ಥಿತಿಯು ಮಕ್ಕಳ ಶಿಕ್ಷಣದ ಮೇಲೆ ತೀವ್ರ ಪರಿಣಾಮ ಬೀರಿದೆ. ಆದಾಗ್ಯೂ, ವಿದ್ಯಾರ್ಥಿಗಳ ಜೀವದ ರಕ್ಷಣೆ ಎಲ್ಲ ಪರೀಕ್ಷೆಗಳಿಗಿಂತ ಹೆಚ್ಚಿನದು’ ಎಂದು ಅವರು ಹೇಳಿದರು.</p>.<p>‘ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ಮೌಲ್ಯಮಾಪನಕ್ಕೆ ವಸ್ತುನಿಷ್ಠ ಮಾನದಂಡಗಳನ್ನು ಅನುಸರಿಸಲಾಗುವುದು’ ಎಂದ ಪಟ್ನಾಯಕ್, ಪರಿಸ್ಥಿತಿಗೆ ಅನುಗುಣವಾದ ಮಾನದಂಡಗಳನ್ನು ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಾಜ್ಯ ಸರ್ಕಾರದ ಮಾನದಂಡಗಳ ಬಗ್ಗೆ ಯಾರಿಗಾದರೂ ಆಕ್ಷೇಪಣೆ ಇದ್ದರೆ, ಯಾವುದೇ ವಿದ್ಯಾರ್ಥಿ ಪರೀಕ್ಷೆಗಳಿಗೆ ಹಾಜರಾಗಬಹುದು. ಸದ್ಯದ ಪರಿಸ್ಥಿತಿ ಆಧರಿಸಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸಿಎಚ್ಎಸ್ಇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/government-decided-to-not-to-conductt-puc-835881.html" itemprop="url">ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಒಡಿಶಾ ಸರ್ಕಾರವು ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಷನ್ (ಸಿಎಚ್ಎಸ್ಇ) ನಡೆಸುವ 12ನೇ ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ.</p>.<p>ಈ ನಿರ್ಧಾರವನ್ನು ಪ್ರಕಟಿಸುವಾಗ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ‘ಪರೀಕ್ಷೆಗಳಿಗಿಂತ ವಿದ್ಯಾರ್ಥಿಗಳ ಸುರಕ್ಷತೆ ಮುಖ್ಯ’ ಎಂದು ಹೇಳಿದರು.</p>.<p>‘ಕೋವಿಡ್– 19 ಪಿಡುಗಿನ ಎರಡನೇ ಅಲೆಯು ದೇಶದಾದ್ಯಂತ ಹಿಂದೆಂದೂ ಕಂಡರಿಯದ ಪರಿಸ್ಥಿತಿ ಸೃಷ್ಟಿಸಿದೆ. ಸದ್ಯದ ಪರಿಸ್ಥಿತಿಯು ಮಕ್ಕಳ ಶಿಕ್ಷಣದ ಮೇಲೆ ತೀವ್ರ ಪರಿಣಾಮ ಬೀರಿದೆ. ಆದಾಗ್ಯೂ, ವಿದ್ಯಾರ್ಥಿಗಳ ಜೀವದ ರಕ್ಷಣೆ ಎಲ್ಲ ಪರೀಕ್ಷೆಗಳಿಗಿಂತ ಹೆಚ್ಚಿನದು’ ಎಂದು ಅವರು ಹೇಳಿದರು.</p>.<p>‘ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ಮೌಲ್ಯಮಾಪನಕ್ಕೆ ವಸ್ತುನಿಷ್ಠ ಮಾನದಂಡಗಳನ್ನು ಅನುಸರಿಸಲಾಗುವುದು’ ಎಂದ ಪಟ್ನಾಯಕ್, ಪರಿಸ್ಥಿತಿಗೆ ಅನುಗುಣವಾದ ಮಾನದಂಡಗಳನ್ನು ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ರಾಜ್ಯ ಸರ್ಕಾರದ ಮಾನದಂಡಗಳ ಬಗ್ಗೆ ಯಾರಿಗಾದರೂ ಆಕ್ಷೇಪಣೆ ಇದ್ದರೆ, ಯಾವುದೇ ವಿದ್ಯಾರ್ಥಿ ಪರೀಕ್ಷೆಗಳಿಗೆ ಹಾಜರಾಗಬಹುದು. ಸದ್ಯದ ಪರಿಸ್ಥಿತಿ ಆಧರಿಸಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸಿಎಚ್ಎಸ್ಇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/government-decided-to-not-to-conductt-puc-835881.html" itemprop="url">ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>