ಮಂಗಳವಾರ ನಡೆದ ವಿಧಾನಸಭೆಯ ಕಲಾಪದಲ್ಲಿ ಸಮಾಜವಾದಿ ಪಕ್ಷದ ಶಾಸಕ ಮೊಹದ್ ಫಹೀಮ್ ಇರ್ಫಾನ್ ಈ ಕುರಿತು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಕೊರೊನಾ ನಿಯಂತ್ರಣ ಮತ್ತು ಸೋಂಕಿತರಿಗೆ ಚಿಕಿತ್ಸೆ ನೀಡುವ ಸರ್ಕಾರಿ, ಅರೆ ಸರ್ಕಾರಿ, ನಗರ ಪಾಲಿಕೆಗಳು, ಸ್ವಾಯತ್ತ ಸಂಸ್ಥೆಗಳು, ಗುತ್ತಿಗೆ ಕಾರ್ಮಿಕರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರೆ, ಅವರ ಕುಟುಂಬದವರಿಗೆ ತಲಾ ₹50 ಲಕ್ಷ ಎಕ್ಸ್–ಗ್ರೇಷಿಯಾ ನೀಡುವ ಅವಕಾಶ ಕಲ್ಪಿಸಲಾಗಿದೆ‘ ಎಂದು ಹೇಳಿದರು.