<p><strong>ನವದೆಹಲಿ: </strong>ಹೊಸದಾಗಿ ಕೊರೊನಾ ಸೋಂಕಿಗೆ ಒಳಗಾಗುವವರ ಸಂಖ್ಯೆಯು 10,000ಕ್ಕಿಂತ ಕಡಿಮೆ ದಾಖಲಾಗಿದ್ದು, ಶುಕ್ರವಾರ 8,506 ಜನರಲ್ಲಿ ಸೋಂಕು ದೃಢಪಟ್ಟಿದೆ.</p>.<p>ಇದೇ ವೇಳೆ 14,140 ಜನ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 71,794 ಇಳಿದಿರುವುದು ಆಶಾದಾಯಕ ಬೆಳವಣಿಗೆಗಾಗಿ ಹೊರಹೊಮ್ಮಿದೆ.</p>.<p>ಏಪ್ರಿಲ್ 10ರ ನಂತರ ಇದೇ ಮೊದಲ ಬಾರಿಗೆ ಸೋಂಕು ದೃಢಪಟ್ಟವರ ಸಂಖ್ಯೆಯು ನಾಲ್ಕಿಂಕಿಗೆ ಇಳಿದಿರುವುದು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/32-lakh-new-cases-3890-dead-830675.html" itemprop="url">Covid-19 India Update: 3.2 ಲಕ್ಷ ಹೊಸ ಪ್ರಕರಣ, 3,890 ಸಾವು </a></p>.<p>ಶುಕ್ರವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟ 68,575 ಜನರ ಪೈಕಿ ಶೇ 12.40ರ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದೆ.</p>.<p>ಇದೇ ಅವಧಿಯಲ್ಲಿ 289 ಜನ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕು ಹರಡುತ್ತಿರುವ ಪ್ರಮಾಣ ಕಡಿಮೆ ಆಗುತ್ತಿದ್ದರೂ, ಸಾವಿನ ಪ್ರಮಾಣ ನಿಯಂತ್ರಣಕ್ಕೆ ಬಾರದಿರುವುದು ಆತಂಕವನ್ನು ಹೆಚ್ಚಿಸಿದೆ.</p>.<p>ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ 40ರಿಂದ 50ರಷ್ಟು ಕಡಿಮೆ ಆಗುತ್ತಿದೆಯಾದರೂ, ಕಳೆದ 10 ದಿನಗಳ ಅವಧಿಯಲ್ಲಿ 3,539 ಜನ ಪ್ರಾಣ ಕಳೆದುಕೊಂಡಿದ್ದಾರೆ.</p>.<p><strong>ತಗ್ಗಿದ ಆಮ್ಲಜನಕ ಬೇಡಿಕೆ:</strong><br />ಏಪ್ರಿಲ್ 19ರಿಂದ ಜಾರಿಯಾಗಿರುವ ಲಾಕ್ಡೌನ್ ಪರಿಣಾಮ ಸಾರ್ವಜನಿಕರ ಮುಕ್ತ ಓಡಾಟಕ್ಕೆ ಕಡಿವಾಣ ಬಿದ್ದಿದ್ದು, ಸೋಂಕಿನ ಸರಪಳಿ ಬೆಳೆಯದಿರುವುದಕ್ಕೆ ಕಾರಣವಾಗಿದೆ.</p>.<p>ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಗಳಲ್ಲಿ ಆಮ್ಲಜನಕದ ಬೇಡಿಕೆ ತಗ್ಗಿದ್ದು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ದೊರೆಯದೇ ತಲೆದೋರಿದ್ದ ಹಾಹಾಕಾರವೂ ಕಡಿಮೆಯಾಗಿದೆ.</p>.<p>ಕೊರೊನಾ ಪೀಡಿತರಿಗಾಗಿ ಕೇಂದ್ರ ಸರ್ಕಾರವು ದೆಹಲಿಗೆ ಹಂಚಿಕೆ ಮಾಡಿದ್ದ ಆಮ್ಲಜನಕವನ್ನು ಅಗತ್ಯ ರಾಜ್ಯಗಳಿಗೆ ಪೂರೈಸುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹೊಸದಾಗಿ ಕೊರೊನಾ ಸೋಂಕಿಗೆ ಒಳಗಾಗುವವರ ಸಂಖ್ಯೆಯು 10,000ಕ್ಕಿಂತ ಕಡಿಮೆ ದಾಖಲಾಗಿದ್ದು, ಶುಕ್ರವಾರ 8,506 ಜನರಲ್ಲಿ ಸೋಂಕು ದೃಢಪಟ್ಟಿದೆ.</p>.<p>ಇದೇ ವೇಳೆ 14,140 ಜನ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 71,794 ಇಳಿದಿರುವುದು ಆಶಾದಾಯಕ ಬೆಳವಣಿಗೆಗಾಗಿ ಹೊರಹೊಮ್ಮಿದೆ.</p>.<p>ಏಪ್ರಿಲ್ 10ರ ನಂತರ ಇದೇ ಮೊದಲ ಬಾರಿಗೆ ಸೋಂಕು ದೃಢಪಟ್ಟವರ ಸಂಖ್ಯೆಯು ನಾಲ್ಕಿಂಕಿಗೆ ಇಳಿದಿರುವುದು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.</p>.<p>ಇದನ್ನೂ ಓದಿ:<a href="https://www.prajavani.net/india-news/32-lakh-new-cases-3890-dead-830675.html" itemprop="url">Covid-19 India Update: 3.2 ಲಕ್ಷ ಹೊಸ ಪ್ರಕರಣ, 3,890 ಸಾವು </a></p>.<p>ಶುಕ್ರವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟ 68,575 ಜನರ ಪೈಕಿ ಶೇ 12.40ರ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದೆ.</p>.<p>ಇದೇ ಅವಧಿಯಲ್ಲಿ 289 ಜನ ಪ್ರಾಣ ಕಳೆದುಕೊಂಡಿದ್ದಾರೆ. ಸೋಂಕು ಹರಡುತ್ತಿರುವ ಪ್ರಮಾಣ ಕಡಿಮೆ ಆಗುತ್ತಿದ್ದರೂ, ಸಾವಿನ ಪ್ರಮಾಣ ನಿಯಂತ್ರಣಕ್ಕೆ ಬಾರದಿರುವುದು ಆತಂಕವನ್ನು ಹೆಚ್ಚಿಸಿದೆ.</p>.<p>ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ 40ರಿಂದ 50ರಷ್ಟು ಕಡಿಮೆ ಆಗುತ್ತಿದೆಯಾದರೂ, ಕಳೆದ 10 ದಿನಗಳ ಅವಧಿಯಲ್ಲಿ 3,539 ಜನ ಪ್ರಾಣ ಕಳೆದುಕೊಂಡಿದ್ದಾರೆ.</p>.<p><strong>ತಗ್ಗಿದ ಆಮ್ಲಜನಕ ಬೇಡಿಕೆ:</strong><br />ಏಪ್ರಿಲ್ 19ರಿಂದ ಜಾರಿಯಾಗಿರುವ ಲಾಕ್ಡೌನ್ ಪರಿಣಾಮ ಸಾರ್ವಜನಿಕರ ಮುಕ್ತ ಓಡಾಟಕ್ಕೆ ಕಡಿವಾಣ ಬಿದ್ದಿದ್ದು, ಸೋಂಕಿನ ಸರಪಳಿ ಬೆಳೆಯದಿರುವುದಕ್ಕೆ ಕಾರಣವಾಗಿದೆ.</p>.<p>ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಗಳಲ್ಲಿ ಆಮ್ಲಜನಕದ ಬೇಡಿಕೆ ತಗ್ಗಿದ್ದು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು ದೊರೆಯದೇ ತಲೆದೋರಿದ್ದ ಹಾಹಾಕಾರವೂ ಕಡಿಮೆಯಾಗಿದೆ.</p>.<p>ಕೊರೊನಾ ಪೀಡಿತರಿಗಾಗಿ ಕೇಂದ್ರ ಸರ್ಕಾರವು ದೆಹಲಿಗೆ ಹಂಚಿಕೆ ಮಾಡಿದ್ದ ಆಮ್ಲಜನಕವನ್ನು ಅಗತ್ಯ ರಾಜ್ಯಗಳಿಗೆ ಪೂರೈಸುವಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>