<p><strong>ವಿಶ್ವಸಂಸ್ಥೆ:</strong> ‘ಕೋವಿಡ್ ಸಾಂಕ್ರಾಮಿಕವು ವಿಶ್ವದಾದ್ಯಂತ ಲಕ್ಷಾಂತರ ಜನರ ಆಹಾರ ಭದ್ರತೆ ಮತ್ತು ಪೌಷ್ಟಿಕತೆಗೆ ಅಡ್ಡಿಪಡಿಸಿದೆ. ಇದರಿಂದಾಗಿ 2030ರ ವೇಳೆಗೆ ಹಸಿವನ್ನು ನೀಗಿಸುವ ಗುರಿಗೂ ಹಿನ್ನಡೆಯಾಗುವ ಸಾಧ್ಯತೆ ಇದೆ’ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಸೋಮವಾರ ಹೇಳಿದರು.</p>.<p>‘ಜನಸಂಖ್ಯೆ, ಆಹಾರ ಭದ್ರತೆ, ಪೌಷ್ಟಿಕತೆ ಮತ್ತು ಸುಸ್ಥಿರ ಅಭಿವೃದ್ಧಿ’ ವಿಷಯದ ಕುರಿತಾಗಿ54ನೇ ಜನಸಂಖ್ಯೆ ಮತ್ತು ಅಭಿವೃದ್ಧಿ ಆಯೋಗವನ್ನು ಉದ್ದೇಶಿಸಿ ಮಾತನಾಡಿದ ಅವರು,‘ ಭಾರತ ಸರ್ಕಾರವು ಆಹಾರ ಭದ್ರತೆ ಮತ್ತು ಪೌಷ್ಟಿಕತೆಗೆ ಆದ್ಯತೆ ನೀಡಿದೆ. ಇದಕ್ಕೆ ಕಳೆದ ಹಲವು ವರ್ಷಗಳಿಂದ ಸರ್ಕಾರ ಜಾರಿಗೆ ತಂದಿರುವ ಕಾನೂನು ಮತ್ತು ಯೋಜನೆಗಳು ಸಾಕ್ಷಿಯಾಗಿವೆ’ ಎಂದರು.</p>.<p><strong>ಓದಿ:</strong><a href="https://www.prajavani.net/india-news/health-minister-harsh-vardhan-says-ex-prime-minister-manmohan-singh-health-is-stable-823931.html" itemprop="url">ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಹೆಚ್ಚಿನ ನಿಗಾ ಎಂದ ಸಚಿವ ಹರ್ಷವರ್ಧನ್</a></p>.<p>‘ಜನಸಂಖ್ಯೆ, ಆಹಾರ ಭದ್ರತೆ, ಪೌಷ್ಟಿಕತೆ, ಸುಸ್ಥಿರ ಅಭಿವೃದ್ಧಿ ಪ್ರಮುಖ ವಿಷಯಗಳಾಗಿವೆ. ಕೋವಿಡ್ ಬಿಕ್ಕಟ್ಟಿನ ವೇಳೆಯಲ್ಲಿ ಇದಕ್ಕೆ ಇನ್ನಷ್ಟು ಮಹತ್ವವನ್ನು ನೀಡಲಾಗಿದೆ. ಅಲ್ಲದೆ ಈ ಸಮಯದಲ್ಲಿ ಸೋಂಕು ನಿಯಂತ್ರಣದೊಂದಿಗೆ ರೈತರಿಗೆ, ಕಾರ್ಮಿಕರಿಗೆ, ಹಿಂದುಳಿದ ಜನರಿಗೆ, ಸ್ವ–ಸಹಾಯ ಸಂಘಗಳಿಗೆ, ಮಹಿಳೆಯರಿಗೆ, ಬಡ ಹಿರಿಯ ನಾಗರಿಕರಿಗೆ ಹೆಚ್ಚಿನ ನೆರವುಗಳನ್ನು ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.</p>.<p>‘ಭಾರತ ಸರ್ಕಾರವು ಅತಿ ಬಡವರಿಗೆ ಸಹಾಯ ಮಾಡಲು ಆಹಾರ ಭದ್ರತೆಗಾಗಿ 22.6 ಶತಕೋಟಿ ಡಾಲರ್ ಪರಿಹಾರ ಪ್ಯಾಕೆಜ್ ಅನ್ನು ಘೋಷಿಸಿದೆ. ಅಲ್ಲದೆ ಆರ್ಥಿಕತೆ ಮೇಲೆತ್ತಲು ಕೃಷಿ ಮತ್ತು ಆಹಾರ ಕ್ಷೇತ್ರಗಳಲ್ಲಿ ಸಣ್ಣ ಮತ್ತು ಮಧ್ಯಮ ವ್ಯವಹಾರಗಳಿಗಾಗಿ 13 ಶತಕೋಟಿ ಡಾಲರ್ ಯೋಜನೆಯನ್ನು ಘೋಷಿಸಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ:</strong> ‘ಕೋವಿಡ್ ಸಾಂಕ್ರಾಮಿಕವು ವಿಶ್ವದಾದ್ಯಂತ ಲಕ್ಷಾಂತರ ಜನರ ಆಹಾರ ಭದ್ರತೆ ಮತ್ತು ಪೌಷ್ಟಿಕತೆಗೆ ಅಡ್ಡಿಪಡಿಸಿದೆ. ಇದರಿಂದಾಗಿ 2030ರ ವೇಳೆಗೆ ಹಸಿವನ್ನು ನೀಗಿಸುವ ಗುರಿಗೂ ಹಿನ್ನಡೆಯಾಗುವ ಸಾಧ್ಯತೆ ಇದೆ’ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಸೋಮವಾರ ಹೇಳಿದರು.</p>.<p>‘ಜನಸಂಖ್ಯೆ, ಆಹಾರ ಭದ್ರತೆ, ಪೌಷ್ಟಿಕತೆ ಮತ್ತು ಸುಸ್ಥಿರ ಅಭಿವೃದ್ಧಿ’ ವಿಷಯದ ಕುರಿತಾಗಿ54ನೇ ಜನಸಂಖ್ಯೆ ಮತ್ತು ಅಭಿವೃದ್ಧಿ ಆಯೋಗವನ್ನು ಉದ್ದೇಶಿಸಿ ಮಾತನಾಡಿದ ಅವರು,‘ ಭಾರತ ಸರ್ಕಾರವು ಆಹಾರ ಭದ್ರತೆ ಮತ್ತು ಪೌಷ್ಟಿಕತೆಗೆ ಆದ್ಯತೆ ನೀಡಿದೆ. ಇದಕ್ಕೆ ಕಳೆದ ಹಲವು ವರ್ಷಗಳಿಂದ ಸರ್ಕಾರ ಜಾರಿಗೆ ತಂದಿರುವ ಕಾನೂನು ಮತ್ತು ಯೋಜನೆಗಳು ಸಾಕ್ಷಿಯಾಗಿವೆ’ ಎಂದರು.</p>.<p><strong>ಓದಿ:</strong><a href="https://www.prajavani.net/india-news/health-minister-harsh-vardhan-says-ex-prime-minister-manmohan-singh-health-is-stable-823931.html" itemprop="url">ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಹೆಚ್ಚಿನ ನಿಗಾ ಎಂದ ಸಚಿವ ಹರ್ಷವರ್ಧನ್</a></p>.<p>‘ಜನಸಂಖ್ಯೆ, ಆಹಾರ ಭದ್ರತೆ, ಪೌಷ್ಟಿಕತೆ, ಸುಸ್ಥಿರ ಅಭಿವೃದ್ಧಿ ಪ್ರಮುಖ ವಿಷಯಗಳಾಗಿವೆ. ಕೋವಿಡ್ ಬಿಕ್ಕಟ್ಟಿನ ವೇಳೆಯಲ್ಲಿ ಇದಕ್ಕೆ ಇನ್ನಷ್ಟು ಮಹತ್ವವನ್ನು ನೀಡಲಾಗಿದೆ. ಅಲ್ಲದೆ ಈ ಸಮಯದಲ್ಲಿ ಸೋಂಕು ನಿಯಂತ್ರಣದೊಂದಿಗೆ ರೈತರಿಗೆ, ಕಾರ್ಮಿಕರಿಗೆ, ಹಿಂದುಳಿದ ಜನರಿಗೆ, ಸ್ವ–ಸಹಾಯ ಸಂಘಗಳಿಗೆ, ಮಹಿಳೆಯರಿಗೆ, ಬಡ ಹಿರಿಯ ನಾಗರಿಕರಿಗೆ ಹೆಚ್ಚಿನ ನೆರವುಗಳನ್ನು ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.</p>.<p>‘ಭಾರತ ಸರ್ಕಾರವು ಅತಿ ಬಡವರಿಗೆ ಸಹಾಯ ಮಾಡಲು ಆಹಾರ ಭದ್ರತೆಗಾಗಿ 22.6 ಶತಕೋಟಿ ಡಾಲರ್ ಪರಿಹಾರ ಪ್ಯಾಕೆಜ್ ಅನ್ನು ಘೋಷಿಸಿದೆ. ಅಲ್ಲದೆ ಆರ್ಥಿಕತೆ ಮೇಲೆತ್ತಲು ಕೃಷಿ ಮತ್ತು ಆಹಾರ ಕ್ಷೇತ್ರಗಳಲ್ಲಿ ಸಣ್ಣ ಮತ್ತು ಮಧ್ಯಮ ವ್ಯವಹಾರಗಳಿಗಾಗಿ 13 ಶತಕೋಟಿ ಡಾಲರ್ ಯೋಜನೆಯನ್ನು ಘೋಷಿಸಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>