<p><strong>ನವದೆಹಲಿ:</strong>ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ಬೆನ್ನಲೇ ಸರ್ಕಾರ ಶೀಘ್ರದಲ್ಲಿ ಸೆರಂ ಕಂಪನಿಯ ಲಸಿಕೆ ಬಳಕೆಗೆ ಅನುಮತಿ ನೀಡುವ ಸಾಧ್ಯತೆಗಳಿವೆ.</p>.<p>ಈಗಾಗಲೇ ಬ್ರಿಟನ್ ಸರ್ಕಾರ ತುರ್ತು ಬಳಕೆಗೆ ಅನುಮತಿ ನೀಡಿದೆ. ಈ ಲಸಿಕೆ ಮಾತ್ರವಲ್ಲದೆ ಇನ್ನು ಎರಡು ಲಸಿಕೆಗಳನ್ನು ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.</p>.<p>ದೇಶದಲ್ಲಿ ಒಂದೇ ದಿನ 20,549 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,02,44,852ಕ್ಕೆ ಏರಿಕೆಯಾಗಿದೆ. ಹೊಸದಾಗಿ 286 ಮಂದಿ ಮೃತಪಟ್ಟಿದ್ದು, ಸೋಂಕಿನಿಂದಾಗಿ ಇದುವರೆಗೆ ಒಟ್ಟು 1,48,439 ಮಂದಿ ಸಾವನ್ನಪ್ಪಿದ್ದಾರೆ.</p>.<p>ಈವರೆಗೆ 98 ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಭಾರತದಲ್ಲಿ ಚೇತರಿಕೆಯ ಪ್ರಮಾಣವು ಶೇಕಡ 95.99 ಹಾಗೂ ಸಾವಿನ ಪ್ರಮಾಣವು ಶೇಕಡ 1.45ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ತಿಳಿಸಿದೆ.</p>.<p>ದೇಶದಲ್ಲಿ ಈವರೆಗೆ 98,34,141 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 2,62,272 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 2.56ರಷ್ಟು ಇದೆ. ಸತತ 9ನೇ ದಿನವೂ ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷಕ್ಕಿಂತ ಕಡಿಮೆಯಿದೆ ಎಂದು ಸಚಿವಾಲಯವು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ಬೆನ್ನಲೇ ಸರ್ಕಾರ ಶೀಘ್ರದಲ್ಲಿ ಸೆರಂ ಕಂಪನಿಯ ಲಸಿಕೆ ಬಳಕೆಗೆ ಅನುಮತಿ ನೀಡುವ ಸಾಧ್ಯತೆಗಳಿವೆ.</p>.<p>ಈಗಾಗಲೇ ಬ್ರಿಟನ್ ಸರ್ಕಾರ ತುರ್ತು ಬಳಕೆಗೆ ಅನುಮತಿ ನೀಡಿದೆ. ಈ ಲಸಿಕೆ ಮಾತ್ರವಲ್ಲದೆ ಇನ್ನು ಎರಡು ಲಸಿಕೆಗಳನ್ನು ತುರ್ತು ಬಳಕೆಗೆ ಅನುಮತಿ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.</p>.<p>ದೇಶದಲ್ಲಿ ಒಂದೇ ದಿನ 20,549 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,02,44,852ಕ್ಕೆ ಏರಿಕೆಯಾಗಿದೆ. ಹೊಸದಾಗಿ 286 ಮಂದಿ ಮೃತಪಟ್ಟಿದ್ದು, ಸೋಂಕಿನಿಂದಾಗಿ ಇದುವರೆಗೆ ಒಟ್ಟು 1,48,439 ಮಂದಿ ಸಾವನ್ನಪ್ಪಿದ್ದಾರೆ.</p>.<p>ಈವರೆಗೆ 98 ಲಕ್ಷಕ್ಕಿಂತ ಹೆಚ್ಚು ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಭಾರತದಲ್ಲಿ ಚೇತರಿಕೆಯ ಪ್ರಮಾಣವು ಶೇಕಡ 95.99 ಹಾಗೂ ಸಾವಿನ ಪ್ರಮಾಣವು ಶೇಕಡ 1.45ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ತಿಳಿಸಿದೆ.</p>.<p>ದೇಶದಲ್ಲಿ ಈವರೆಗೆ 98,34,141 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 2,62,272 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 2.56ರಷ್ಟು ಇದೆ. ಸತತ 9ನೇ ದಿನವೂ ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷಕ್ಕಿಂತ ಕಡಿಮೆಯಿದೆ ಎಂದು ಸಚಿವಾಲಯವು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>