<p><strong>ನವದೆಹಲಿ:</strong> ದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಜನವರಿ 16ರಂದು ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದು ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನವಾಗಲಿದೆ.</p>.<p>ಹೊಸ ವರ್ಷದಲ್ಲಿ ಬಿಡುಗಡೆ ಮಾಡಲಾಗಿರುವ ಕೋವಿಡ್-19 ಲಸಿಕೆಗಳನ್ನು ಈಗಾಗಲೇ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಿಸಲಾಗಿದೆ.</p>.<p>ಗುರುವಾರದಂದು ಮಹಾರಾಷ್ಟ್ರದಲ್ಲಿ 3,579 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 19,81,623ಕ್ಕೆ ತಲುಪಿದೆ. ಹಾಗೆಯೇ 24 ತಾಸಿನಲ್ಲಿ 70 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 50,291ಕ್ಕೆ ತಲುಪಿದೆ.</p>.<p>ಕಳೆದ 24 ತಾಸಿನಲ್ಲಿ 3,309 ಮಂದಿ ಚೇತರಿಸಿದ್ದಾರೆ. ಇದರೊಂದಿಗೆ ಒಟ್ಟು 18,77,588 ಮಂದಿ ರೋಗ ಮುಕ್ತಿಯನ್ನು ಪಡೆದಿದ್ದಾರೆ. ಮಹಾರಾಷ್ಟ್ರದಲ್ಲಿ 52,558 ಸಕ್ರಿಯ ಪ್ರಕರಣಗಳಿವೆ.</p>.<p>ವಾಣಿಜ್ಯ ನಗರಿ ಮುಂಬೈನಲ್ಲಿ 607 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,01,081ರಷ್ಟಾಗಿದೆ. ಒಂಬತ್ತು ಮಂದಿ ಮೃತಪಟ್ಟಿದ್ದು, ಒಟ್ಟು 11,221 ಮಂದಿ ಮೃತಪಟ್ಟಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/pm-narendra-modi-to-launch-covid-19-vaccination-drive-on-january-16-796324.html" itemprop="url">ಕೋವಿಡ್ ಲಸಿಕೆ ಅಭಿಯಾನ: ಇದೇ 16ರಂದು ಮೋದಿ ಚಾಲನೆ </a></p>.<p>ನೆರೆಯ ಕೇರಳದಲ್ಲಿ ಗುರುವಾರದಂದು 5490 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗಿದೆ. ಹಾಗೆಯೇ 4,337 ಮಂದಿ ಚೇತರಿಸಿದ್ದಾರೆ ಎಂದು ಅಲ್ಲಿನ ಆರೋಗ್ಯ ಇಲಾಖೆ ವರದಿ ಮಾಡಿದೆ.</p>.<p>ಕೇರಳದಲ್ಲೀಗ 66,503 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 7,61,154 ಮಂದಿ ಚೇತರಿಸಿದ್ದಾರೆ.</p>.<p>ಮತ್ತಷ್ಟು ಮೂವರಲ್ಲಿ ಕೇರಳದಲ್ಲಿ ಬ್ರಿಟನ್ ಮೂಲದ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದೆ.ಹಾಗೆಯೇ ಒಟ್ಟು ಸೋಂಕಿತರ ಸಂಖ್ಯೆ 8,31,259ಕ್ಕೆ ಏರಿಕೆಯಾಗಿದೆ.</p>.<p>ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 340 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗಿದೆ. ಹಾಗೆಯೇ ಕಳೆದ 24 ತಾಸಿನಲ್ಲಿ 390 ಚೇತರಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.</p>.<p>ದೆಹಲಿಯಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 631589 ತಲುಪಿದ್ದು, 6,17,930 ಮಂದಿ ಚೇತರಿಸಿದ್ದಾರೆ. ಇನ್ನು 2937 ಸಕ್ರಿಯ ಪ್ರಕರಣಗಳಿದ್ದು, 10,722 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಜನವರಿ 16ರಂದು ಕೋವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದು ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನವಾಗಲಿದೆ.</p>.<p>ಹೊಸ ವರ್ಷದಲ್ಲಿ ಬಿಡುಗಡೆ ಮಾಡಲಾಗಿರುವ ಕೋವಿಡ್-19 ಲಸಿಕೆಗಳನ್ನು ಈಗಾಗಲೇ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಿಸಲಾಗಿದೆ.</p>.<p>ಗುರುವಾರದಂದು ಮಹಾರಾಷ್ಟ್ರದಲ್ಲಿ 3,579 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 19,81,623ಕ್ಕೆ ತಲುಪಿದೆ. ಹಾಗೆಯೇ 24 ತಾಸಿನಲ್ಲಿ 70 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 50,291ಕ್ಕೆ ತಲುಪಿದೆ.</p>.<p>ಕಳೆದ 24 ತಾಸಿನಲ್ಲಿ 3,309 ಮಂದಿ ಚೇತರಿಸಿದ್ದಾರೆ. ಇದರೊಂದಿಗೆ ಒಟ್ಟು 18,77,588 ಮಂದಿ ರೋಗ ಮುಕ್ತಿಯನ್ನು ಪಡೆದಿದ್ದಾರೆ. ಮಹಾರಾಷ್ಟ್ರದಲ್ಲಿ 52,558 ಸಕ್ರಿಯ ಪ್ರಕರಣಗಳಿವೆ.</p>.<p>ವಾಣಿಜ್ಯ ನಗರಿ ಮುಂಬೈನಲ್ಲಿ 607 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,01,081ರಷ್ಟಾಗಿದೆ. ಒಂಬತ್ತು ಮಂದಿ ಮೃತಪಟ್ಟಿದ್ದು, ಒಟ್ಟು 11,221 ಮಂದಿ ಮೃತಪಟ್ಟಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/pm-narendra-modi-to-launch-covid-19-vaccination-drive-on-january-16-796324.html" itemprop="url">ಕೋವಿಡ್ ಲಸಿಕೆ ಅಭಿಯಾನ: ಇದೇ 16ರಂದು ಮೋದಿ ಚಾಲನೆ </a></p>.<p>ನೆರೆಯ ಕೇರಳದಲ್ಲಿ ಗುರುವಾರದಂದು 5490 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗಿದೆ. ಹಾಗೆಯೇ 4,337 ಮಂದಿ ಚೇತರಿಸಿದ್ದಾರೆ ಎಂದು ಅಲ್ಲಿನ ಆರೋಗ್ಯ ಇಲಾಖೆ ವರದಿ ಮಾಡಿದೆ.</p>.<p>ಕೇರಳದಲ್ಲೀಗ 66,503 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 7,61,154 ಮಂದಿ ಚೇತರಿಸಿದ್ದಾರೆ.</p>.<p>ಮತ್ತಷ್ಟು ಮೂವರಲ್ಲಿ ಕೇರಳದಲ್ಲಿ ಬ್ರಿಟನ್ ಮೂಲದ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿದೆ.ಹಾಗೆಯೇ ಒಟ್ಟು ಸೋಂಕಿತರ ಸಂಖ್ಯೆ 8,31,259ಕ್ಕೆ ಏರಿಕೆಯಾಗಿದೆ.</p>.<p>ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 340 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗಿದೆ. ಹಾಗೆಯೇ ಕಳೆದ 24 ತಾಸಿನಲ್ಲಿ 390 ಚೇತರಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.</p>.<p>ದೆಹಲಿಯಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 631589 ತಲುಪಿದ್ದು, 6,17,930 ಮಂದಿ ಚೇತರಿಸಿದ್ದಾರೆ. ಇನ್ನು 2937 ಸಕ್ರಿಯ ಪ್ರಕರಣಗಳಿದ್ದು, 10,722 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>