<p><strong>ನವದೆಹಲಿ</strong>: ‘ದೇಶದಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿದ್ದು, ಹೊಸದಾಗಿ 3,689 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆಯು 2,15,542ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹೇಳಿದೆ.</p>.<p>‘ಭಾರತದಲ್ಲಿ 3,92,488 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 1,95,57,457ಕ್ಕೆ ಹೆಚ್ಚಿದೆ. ಜತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆಯೂ 33 ಲಕ್ಷವನ್ನು ದಾಟಿದೆ’ ಎಂದು ಸಚಿವಾಲಯ ತಿಳಿಸಿದೆ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ದೇಶದಲ್ಲಿ 33,49,644 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 17.13ರಷ್ಟು ಪಾಲನ್ನು ಹೊಂದಿದೆ. ಇನ್ನೊಂದೆಡೆ ಚೇತರಿಕೆ ಪ್ರಮಾಣವು ಶೇಕಡ 81.77ಕ್ಕೆ ಕುಸಿದಿದೆ.</p>.<p>‘ಈವರೆಗೆ 1,59,92,271 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣವು ಶೇಕಡ 1.10ಕ್ಕೆ ಇಳಿದಿದೆ’ ಎಂದು ಸಚಿವಾಲಯ ಮಾಹಿತಿ ನೀಡಿದೆ.</p>.<p>ಶನಿವಾರ(ಮೇ.01) 18,04,954 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈವರೆಗೆ 29,01,42,339 ಮಾದರಿಗಳನ್ನು ಪರೀಕ್ಷಿಸಲಾಗಿದೆ.</p>.<p>ಮಹಾರಾಷ್ಟ್ರ(802), ದೆಹಲಿ(412),ಉತ್ತರ ಪ್ರದೇಶ(304),ಕರ್ನಾಟಕ(271), ಛತ್ತೀಸಗಢ(229), ಗುಜರಾತ್(172), ಜಾರ್ಖಾಂಡ್(169),ರಾಜಸ್ತಾನ(160),ತಮಿಳುನಾಡು(147), ಪಂಜಾಬ್(138), ಹರಿಯಾಣ(125),ಉತ್ತರಖಾಂಡ(107), ಪಶ್ಚಿಮ ಬಂಗಾಳ(103),ಮಧ್ಯಪ್ರದೇಶ(102) ಸೇರಿದಂತೆ ಒಟ್ಟು 3,689 ಸೋಂಕಿನಿಂದ ಹೊಸದಾಗಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ದೇಶದಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿದ್ದು, ಹೊಸದಾಗಿ 3,689 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆಯು 2,15,542ಕ್ಕೆ ಏರಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಹೇಳಿದೆ.</p>.<p>‘ಭಾರತದಲ್ಲಿ 3,92,488 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 1,95,57,457ಕ್ಕೆ ಹೆಚ್ಚಿದೆ. ಜತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆಯೂ 33 ಲಕ್ಷವನ್ನು ದಾಟಿದೆ’ ಎಂದು ಸಚಿವಾಲಯ ತಿಳಿಸಿದೆ.</p>.<p>ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ದೇಶದಲ್ಲಿ 33,49,644 ಸಕ್ರಿಯ ಪ್ರಕರಣಗಳಿವೆ. ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 17.13ರಷ್ಟು ಪಾಲನ್ನು ಹೊಂದಿದೆ. ಇನ್ನೊಂದೆಡೆ ಚೇತರಿಕೆ ಪ್ರಮಾಣವು ಶೇಕಡ 81.77ಕ್ಕೆ ಕುಸಿದಿದೆ.</p>.<p>‘ಈವರೆಗೆ 1,59,92,271 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಾವಿನ ಪ್ರಮಾಣವು ಶೇಕಡ 1.10ಕ್ಕೆ ಇಳಿದಿದೆ’ ಎಂದು ಸಚಿವಾಲಯ ಮಾಹಿತಿ ನೀಡಿದೆ.</p>.<p>ಶನಿವಾರ(ಮೇ.01) 18,04,954 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈವರೆಗೆ 29,01,42,339 ಮಾದರಿಗಳನ್ನು ಪರೀಕ್ಷಿಸಲಾಗಿದೆ.</p>.<p>ಮಹಾರಾಷ್ಟ್ರ(802), ದೆಹಲಿ(412),ಉತ್ತರ ಪ್ರದೇಶ(304),ಕರ್ನಾಟಕ(271), ಛತ್ತೀಸಗಢ(229), ಗುಜರಾತ್(172), ಜಾರ್ಖಾಂಡ್(169),ರಾಜಸ್ತಾನ(160),ತಮಿಳುನಾಡು(147), ಪಂಜಾಬ್(138), ಹರಿಯಾಣ(125),ಉತ್ತರಖಾಂಡ(107), ಪಶ್ಚಿಮ ಬಂಗಾಳ(103),ಮಧ್ಯಪ್ರದೇಶ(102) ಸೇರಿದಂತೆ ಒಟ್ಟು 3,689 ಸೋಂಕಿನಿಂದ ಹೊಸದಾಗಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>