ನವದೆಹಲಿ: ಕೋವಿಡ್-19 ಲಸಿಕೆ ವಿತರಣೆಯು ಬೂತ್ ಮಟ್ಟಕ್ಕೆ ಯೋಜಿಸಿರುವ ಚುನಾವಣಾ ಪ್ರಕ್ರಿಯೆಯನ್ನು ಆಧರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
719 ಜಿಲ್ಲೆಗಳಿಂದ 57,000ಕ್ಕೂ ಹೆಚ್ಚು ಮಂದಿ ತರಬೇತಿಯನ್ನು ಪೂರ್ಣಗೊಳಿಸಿದ್ದಾರೆ. ಇದುವರೆಗೆ 96,000 ಮಂದಿಗೆ ಲಸಿಕೆ ವಿತರಣೆ ತರಬೇತಿಯನ್ನು ನೀಡಲಾಗಿದೆ ಎಂದವರು ತಿಳಿಸಿದರು.
ಏತನ್ಮಧ್ಯೆ ಕಳೆದ 24 ತಾಸಿನೊಳಗೆ ದೇಶದಲ್ಲಿ ಹೊಸತಾಗಿ 18,177 ಕೋವಿಡ್-19 ಪ್ರಕರಣಗಳು ದಾಖಲಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1,03,23,965ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಮಾಹಿತಿ ಒದಗಿಸಿದೆ.
ಕಳೆದ 24 ತಾಸಿನಲ್ಲಿ 217 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟಾರೆ ಸಾವಿನ ಸಂಖ್ಯೆ 1,49,435ಕ್ಕೆ ಏರಿಕೆಯಾಗಿದೆ.
ಹಾಗೆಯೇ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,47,220ಕ್ಕೆ ತಲುಪಿದೆ. ಇನ್ನು 99,27,310 ಮಂದಿ ಚೇತರಿಸಿಕೊಂಡಿದ್ದಾರೆ.