<p class="title"><strong>ಚೆನ್ನೈ</strong>: ‘ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ದೇಶದ ಎಲ್ಲರಿಗೂ ಲಸಿಕೆ ನೀಡಲು ಭಾರತ ಶಕ್ತವಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.</p>.<p class="title">ನಿರ್ದಿಷ್ಟ ಫಲಾನುಭವಿಗಳನ್ನು ಆಯ್ಕೆ ಮಾಡುವ ಕಾರ್ಯಕ್ಕೆ ಕೇಂದ್ರ ಚಾಲನೆ ನೀಡಿದ್ದು, ಅವರಿಗೆ ವಿದ್ಯುನ್ಮಾನ ಪ್ರಮಾಣಪತ್ರ ನೀಡಲಿದೆ ಎಂದು ಹೇಳಿದರು.</p>.<p class="title">ಇಲ್ಲಿನ ರಾಜೀವ್ಗಾಂಧಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್–19 ಲಸಿಕೆ ನೀಡುವ ತಾಲೀಮು ಪರಿಶೀಲನೆ ಬಳಿಕ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು.</p>.<p class="title">ಅಲ್ಪಾವಧಿಯಲ್ಲಿಯೇ ಕೋವಿಡ್ –19ಕ್ಕೆ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಭಾರತ ಶಕ್ತವಾಗಿದೆ. ಸದ್ಯ, ಎರಡು ಲಸಿಕೆಗಳಿಗೆ ತುರ್ತು ಬಳಕೆಗಾಗಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.</p>.<p>ಮುಂದಿನ ನಾಲ್ಕು ಐದು ದಿನಗಳು ಅಥವಾ ಆದಷ್ಟು ಶೀಘ್ರದಲ್ಲಿ ನಾವು ಆದ್ಯತೆ ಗುಂಪುಗಳಿಗೆ ಲಸಿಕೆ ನೀಡುವ ಪ್ರಕ್ರಿಯೆ ಆರಂಭಿಸಲಿದ್ದೇವೆ. ಈಗಾಗಲೇ ಪೂರಕ ಯೋಜನೆಗಳನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.</p>.<p>135 ಕೋಟಿ ಜನಸಂಖ್ಯೆಯುಳ್ಳ ಭಾರತದಲ್ಲಿ ಸರ್ವರಿಗೂ ವ್ಯವಸ್ಥಿತವಾಗಿ ಲಸಿಕೆ ನೀಡಲಾಗುವುದು ಎಂದು ಸಚಿವರು ಹೇಳಿದರು.</p>.<p><strong>ರೂಪಾಂತರ ವೈರಸ್: ಸೋಂಕಿತರ ಸಂಖ್ಯೆ 82ಕ್ಕೆ ಏರಿಕೆ</strong></p>.<p><strong>ನವದೆಹಲಿ: </strong>ದೇಶದಲ್ಲಿ ಈವರೆಗೆ 82 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.</p>.<p>ಜನವರಿ 6ರ ತನಕ 76 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಆದರೆ ಶುಕ್ರವಾರಕ್ಕೆ ಈ ಪ್ರಕರಣಗಳ ಸಂಖ್ಯೆ 82ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.</p>.<p>ಎಲ್ಲ ಸೋಂಕಿತರನ್ನು ಆಯಾ ರಾಜ್ಯ ಸರ್ಕಾರಗಳು ಗೊತ್ತುಪಡಿಸಿದ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ. ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅವರ ಜತೆ ಪ್ರಯಾಣಿಸಿದವರು, ಸಂಪರ್ಕಕ್ಕೆ ಬಂದ ಕುಟುಂಬದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.</p>.<p>ಸೋಂಕು ಪ್ರಸರಣನ್ನು ತಡೆಯುವ ನಿಟ್ಟಿನಲ್ಲಿ ಕಣ್ಗಾವಲು ಮತ್ತು ನಿಯಂತ್ರಣ ಕ್ರಮಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಲಾಗಿದೆ. ಅಲ್ಲದೇ ಮಾದರಿಗಳನ್ನು ಐಎನ್ಎಸ್ಎಸಿಓಜಿ ಪ್ರಯೋಗಾಲಯಕ್ಕೆ ಕಳುಹಿಸುವಂತೆ ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ</strong>: ‘ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ದೇಶದ ಎಲ್ಲರಿಗೂ ಲಸಿಕೆ ನೀಡಲು ಭಾರತ ಶಕ್ತವಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ.</p>.<p class="title">ನಿರ್ದಿಷ್ಟ ಫಲಾನುಭವಿಗಳನ್ನು ಆಯ್ಕೆ ಮಾಡುವ ಕಾರ್ಯಕ್ಕೆ ಕೇಂದ್ರ ಚಾಲನೆ ನೀಡಿದ್ದು, ಅವರಿಗೆ ವಿದ್ಯುನ್ಮಾನ ಪ್ರಮಾಣಪತ್ರ ನೀಡಲಿದೆ ಎಂದು ಹೇಳಿದರು.</p>.<p class="title">ಇಲ್ಲಿನ ರಾಜೀವ್ಗಾಂಧಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್–19 ಲಸಿಕೆ ನೀಡುವ ತಾಲೀಮು ಪರಿಶೀಲನೆ ಬಳಿಕ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು.</p>.<p class="title">ಅಲ್ಪಾವಧಿಯಲ್ಲಿಯೇ ಕೋವಿಡ್ –19ಕ್ಕೆ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಭಾರತ ಶಕ್ತವಾಗಿದೆ. ಸದ್ಯ, ಎರಡು ಲಸಿಕೆಗಳಿಗೆ ತುರ್ತು ಬಳಕೆಗಾಗಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.</p>.<p>ಮುಂದಿನ ನಾಲ್ಕು ಐದು ದಿನಗಳು ಅಥವಾ ಆದಷ್ಟು ಶೀಘ್ರದಲ್ಲಿ ನಾವು ಆದ್ಯತೆ ಗುಂಪುಗಳಿಗೆ ಲಸಿಕೆ ನೀಡುವ ಪ್ರಕ್ರಿಯೆ ಆರಂಭಿಸಲಿದ್ದೇವೆ. ಈಗಾಗಲೇ ಪೂರಕ ಯೋಜನೆಗಳನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.</p>.<p>135 ಕೋಟಿ ಜನಸಂಖ್ಯೆಯುಳ್ಳ ಭಾರತದಲ್ಲಿ ಸರ್ವರಿಗೂ ವ್ಯವಸ್ಥಿತವಾಗಿ ಲಸಿಕೆ ನೀಡಲಾಗುವುದು ಎಂದು ಸಚಿವರು ಹೇಳಿದರು.</p>.<p><strong>ರೂಪಾಂತರ ವೈರಸ್: ಸೋಂಕಿತರ ಸಂಖ್ಯೆ 82ಕ್ಕೆ ಏರಿಕೆ</strong></p>.<p><strong>ನವದೆಹಲಿ: </strong>ದೇಶದಲ್ಲಿ ಈವರೆಗೆ 82 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.</p>.<p>ಜನವರಿ 6ರ ತನಕ 76 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಆದರೆ ಶುಕ್ರವಾರಕ್ಕೆ ಈ ಪ್ರಕರಣಗಳ ಸಂಖ್ಯೆ 82ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.</p>.<p>ಎಲ್ಲ ಸೋಂಕಿತರನ್ನು ಆಯಾ ರಾಜ್ಯ ಸರ್ಕಾರಗಳು ಗೊತ್ತುಪಡಿಸಿದ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ. ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅವರ ಜತೆ ಪ್ರಯಾಣಿಸಿದವರು, ಸಂಪರ್ಕಕ್ಕೆ ಬಂದ ಕುಟುಂಬದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.</p>.<p>ಸೋಂಕು ಪ್ರಸರಣನ್ನು ತಡೆಯುವ ನಿಟ್ಟಿನಲ್ಲಿ ಕಣ್ಗಾವಲು ಮತ್ತು ನಿಯಂತ್ರಣ ಕ್ರಮಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಲಾಗಿದೆ. ಅಲ್ಲದೇ ಮಾದರಿಗಳನ್ನು ಐಎನ್ಎಸ್ಎಸಿಓಜಿ ಪ್ರಯೋಗಾಲಯಕ್ಕೆ ಕಳುಹಿಸುವಂತೆ ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>