<p><strong>ಮುಂಬೈ:</strong> ಬಳ್ಳಾರಿಯ ಉಕ್ಕಿನ ಘಟಕದಿಂದ ಪಶ್ಚಿಮ ಮಹಾರಾಷ್ಟ್ರಕ್ಕೆ ಆಮ್ಲಜನಕದ ಸರಬರಾಜನ್ನು ನೆರೆಯ ಕರ್ನಾಟಕ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಮಹಾರಾಷ್ಟ್ರದ ಸಚಿವ ಸತೇಜ್ ಪಾಟೀಲ್ ಶನಿವಾರ ಆರೋಪಿಸಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿಕೊಂಡಿದ್ದಾರೆ.</p>.<p>ಕೊಲ್ಹಾಪುರ ಹಾಗೂ ಇತರೆ ಜಿಲ್ಲೆಗಳಲ್ಲಿ ಕರ್ನಾಟಕದಿಂದ ಉಂಟಾಗುವ ಆಮ್ಲಜನಕದ ಅಡಚಣೆ ದುರದೃಷ್ಟಕರ ಎಂದು ಗೃಹ ಖಾತೆ ರಾಜ್ಯ ಸಚಿವ ಪಾಟೀಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಪ್ರಾಣಿ ಹಾನಿ ತಪ್ಪಿಸಲು ಆಮ್ಲಜನಕ ಸರಬರಾಜು ಅಸ್ತವ್ಯಸ್ತವಾಗದಂತೆ ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಬೇಕಿದೆ ಎಂದು ಮನವಿ ಮಾಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/covid-coronavirus-rajasthan-village-allegedly-after-burial-of-man-without-covid-protocol-828938.html" itemprop="url">ಕೋವಿಡ್ ಮಾರ್ಗಸೂಚಿ ಪಾಲಿಸದೇ ಅಂತ್ಯಸಂಸ್ಕಾರ: 21 ಮಂದಿ ಸಾವು </a></p>.<p>ಮಹಾರಾಷ್ಟ್ರಕ್ಕೆ ವಿಶೇಷವಾಗಿ ಪಶ್ಚಿಮ ಮಹಾರಾಷ್ಟ್ರಕ್ಕೆ ಕೇಂದ್ರ ಸರ್ಕಾರವು 50 ಟನ್ ಆಮ್ಲಜನಕ ಪೂರೈಸುವುದನ್ನು ಕರ್ನಾಟಕ ಸರ್ಕಾರವು ಅಡ್ಡಿಪಡಿಸಿದೆ. ಇದರಿಂದ ಕೋಲ್ಹಾಪುರ, ಸಾಂಗ್ಲಿ, ಸತಾರಾ, ಸಿಂಧುದುರ್ಗ್ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ಮುಖಂಡ ಹೇಳಿದ್ದಾರೆ.</p>.<p>ಕಳೆದ ಕೆಲವು ವಾರಗಳಲ್ಲಿ ಕೊರೊನಾವೈರಸ್ ಪ್ರಕರಣಗಳು ತೀವ್ರವಾಗಿ ಹೆಚ್ಚಿದ್ದು, ದೇಶದ ಅನೇಕ ರಾಜ್ಯಗಳಲ್ಲಿ ಆಮ್ಲಜನಕದ ಕೊರತೆ ಎದುರಾಗಿದೆ.</p>.<p>ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಜಿಲ್ಲೆಯಲ್ಲಿ 14 ಆಮ್ಲಜನಕ ಘಟಕವನ್ನು ಸ್ಥಾಪಿಸಲಾಗುವುದು ಎಂದು ಕೊಲ್ಹಾಪುರ ಉಸ್ತುವಾರಿ ಸಚಿವರೂ ಆಗಿರುವ ಪಾಟೀಲ್ ತಿಳಿಸಿದ್ದಾರೆ.</p>.<p>ಹೊಸ ಘಟಕಗಳು 23 ಟನ್ ಆಮ್ಲಜನಕವನ್ನು ಉತ್ಪಾದಿಸಲಿದ್ದು, ಪ್ರತಿದಿನ 1,800 ಸಿಲಿಂಡರ್ಗಳನ್ನು ಪುನಃ ಭರ್ತಿಮಾಡಬಹುದಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬಳ್ಳಾರಿಯ ಉಕ್ಕಿನ ಘಟಕದಿಂದ ಪಶ್ಚಿಮ ಮಹಾರಾಷ್ಟ್ರಕ್ಕೆ ಆಮ್ಲಜನಕದ ಸರಬರಾಜನ್ನು ನೆರೆಯ ಕರ್ನಾಟಕ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಮಹಾರಾಷ್ಟ್ರದ ಸಚಿವ ಸತೇಜ್ ಪಾಟೀಲ್ ಶನಿವಾರ ಆರೋಪಿಸಿದ್ದು, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿಕೊಂಡಿದ್ದಾರೆ.</p>.<p>ಕೊಲ್ಹಾಪುರ ಹಾಗೂ ಇತರೆ ಜಿಲ್ಲೆಗಳಲ್ಲಿ ಕರ್ನಾಟಕದಿಂದ ಉಂಟಾಗುವ ಆಮ್ಲಜನಕದ ಅಡಚಣೆ ದುರದೃಷ್ಟಕರ ಎಂದು ಗೃಹ ಖಾತೆ ರಾಜ್ಯ ಸಚಿವ ಪಾಟೀಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಪ್ರಾಣಿ ಹಾನಿ ತಪ್ಪಿಸಲು ಆಮ್ಲಜನಕ ಸರಬರಾಜು ಅಸ್ತವ್ಯಸ್ತವಾಗದಂತೆ ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಬೇಕಿದೆ ಎಂದು ಮನವಿ ಮಾಡಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/covid-coronavirus-rajasthan-village-allegedly-after-burial-of-man-without-covid-protocol-828938.html" itemprop="url">ಕೋವಿಡ್ ಮಾರ್ಗಸೂಚಿ ಪಾಲಿಸದೇ ಅಂತ್ಯಸಂಸ್ಕಾರ: 21 ಮಂದಿ ಸಾವು </a></p>.<p>ಮಹಾರಾಷ್ಟ್ರಕ್ಕೆ ವಿಶೇಷವಾಗಿ ಪಶ್ಚಿಮ ಮಹಾರಾಷ್ಟ್ರಕ್ಕೆ ಕೇಂದ್ರ ಸರ್ಕಾರವು 50 ಟನ್ ಆಮ್ಲಜನಕ ಪೂರೈಸುವುದನ್ನು ಕರ್ನಾಟಕ ಸರ್ಕಾರವು ಅಡ್ಡಿಪಡಿಸಿದೆ. ಇದರಿಂದ ಕೋಲ್ಹಾಪುರ, ಸಾಂಗ್ಲಿ, ಸತಾರಾ, ಸಿಂಧುದುರ್ಗ್ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ಮುಖಂಡ ಹೇಳಿದ್ದಾರೆ.</p>.<p>ಕಳೆದ ಕೆಲವು ವಾರಗಳಲ್ಲಿ ಕೊರೊನಾವೈರಸ್ ಪ್ರಕರಣಗಳು ತೀವ್ರವಾಗಿ ಹೆಚ್ಚಿದ್ದು, ದೇಶದ ಅನೇಕ ರಾಜ್ಯಗಳಲ್ಲಿ ಆಮ್ಲಜನಕದ ಕೊರತೆ ಎದುರಾಗಿದೆ.</p>.<p>ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಜಿಲ್ಲೆಯಲ್ಲಿ 14 ಆಮ್ಲಜನಕ ಘಟಕವನ್ನು ಸ್ಥಾಪಿಸಲಾಗುವುದು ಎಂದು ಕೊಲ್ಹಾಪುರ ಉಸ್ತುವಾರಿ ಸಚಿವರೂ ಆಗಿರುವ ಪಾಟೀಲ್ ತಿಳಿಸಿದ್ದಾರೆ.</p>.<p>ಹೊಸ ಘಟಕಗಳು 23 ಟನ್ ಆಮ್ಲಜನಕವನ್ನು ಉತ್ಪಾದಿಸಲಿದ್ದು, ಪ್ರತಿದಿನ 1,800 ಸಿಲಿಂಡರ್ಗಳನ್ನು ಪುನಃ ಭರ್ತಿಮಾಡಬಹುದಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>