‘ಸರ್ಕಾರ ಜನರ ಮೇಲೆ ಕಠಿಣ ನಿಯಮಗಳನ್ನು ಸುಲಭವಾಗಿ ಏರುವುದಿಲ್ಲ. ಆದರೆ, ಜನರು ಇದಕ್ಕೆ ಆಸ್ಪದ ನೀಡಬಾರದು. ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕು' ಎಂದು ಮನವಿ ಮಾಡಿದ್ದಾರೆ.
ಲೂಧಿಯಾನ, ಜಲಂಧರ್, ಪಟಿಯಾಲ, ಮೊಹಾಲಿ, ಅಮೃತಸರ, ಗುರುದಾಸ್ಪುರ, ಹೋಶಿಯಾರ್ಪುರ, ಕಪುರ್ಥಾಲಾ ಮತ್ತು ರೂಪ್ನಗರ್ದಲ್ಲಿ ರಾತ್ರಿ ಕರ್ಫ್ಯೂ ಈಗ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಇರುತ್ತದೆ ಎಂದು ತಿಳಿಸಿದರು.
ಇತ್ತೀಚೆಗೆ ಈ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿದಿನ 100ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಪಂಜಾಬ್ನಲ್ಲಿ ಬುಧವಾರ 2,039 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 35 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿತ್ತು.