<p><strong>ಲಖನೌ</strong>: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನದಲ್ಲಿರಿಸಿ ಧಾರ್ಮಿಕ ಕ್ಷೇತ್ರಗಳಿಗೆ ಐದಕ್ಕಿಂತ ಹೆಚ್ಚು ಜನರು ಒಟ್ಟಿಗೆ ಪ್ರವೇಶಿಸಲು ಅವಕಾಶ ನೀಡುವಂತಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ʼಕೋವಿಡ್-19 ಹರಡುವಿಕೆಯನ್ನು ತಡೆಯಲು ರಾಜ್ಯವು ಉತ್ತಮ ಸಂಪನ್ಮೂಲ ಮತ್ತು ಅನುಭವವನ್ನು ಹೊಂದಿದೆ. ಕೋವಿಡ್ ನಿರ್ವಹಣೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕಿದೆ. ಏಕೀಕೃತ ಆದೇಶ ಮತ್ತು ನಿಯಂತ್ರಣ ವ್ಯವಸ್ಥೆಯನ್ನು ಒಳಗೊಂಡ ಕೇಂದ್ರಗಳನ್ನು ಎಲ್ಲ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ. ಸಾಂಕ್ರಾಮಿಕ ತಡೆಯುವ ನಿಟ್ಟಿನಲ್ಲಿ ಇದನ್ನು ಪರಿಣಾಮಕಾರಿಯಾಗಿ ಬಳಸಬೇಕುʼ ಎಂದು ಹೇಳಿದ್ದಾರೆ.</p>.<p>ಇದೇ ವೇಳೆ ಒಂದೇಬಾರಿ ಐದಕ್ಕೂ ಹೆಚ್ಚು ಜನರು ಧಾರ್ಮಿಕ ಸ್ಥಳಗಳಿಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು ಎಂದು ಯೋಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂದುವರಿದು, ಕಂಟೈನ್ಮೆಂಟ್ ವಲಯಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜೊತೆಗೆ, ಈ ವಲಯಗಳಲ್ಲಿನ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಇದರ ಮೇಲ್ವಿಚಾರಣೆಯನ್ನು ಸಮಗ್ರ ಆಜ್ಞೆ ಮತ್ತು ನಿಯಂತ್ರಣ ಕೇಂದ್ರಗಳು ನಿರ್ವಹಿಸಬೇಕು ಎಂದೂ ಹೇಳಿದ್ದಾರೆ.</p>.<p>ಶನಿವಾರ ದೇಶದಲ್ಲಿ 1,45,384 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸತತ ನಾಲ್ಕನೇ ದಿನ ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಮನದಲ್ಲಿರಿಸಿ ಧಾರ್ಮಿಕ ಕ್ಷೇತ್ರಗಳಿಗೆ ಐದಕ್ಕಿಂತ ಹೆಚ್ಚು ಜನರು ಒಟ್ಟಿಗೆ ಪ್ರವೇಶಿಸಲು ಅವಕಾಶ ನೀಡುವಂತಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ʼಕೋವಿಡ್-19 ಹರಡುವಿಕೆಯನ್ನು ತಡೆಯಲು ರಾಜ್ಯವು ಉತ್ತಮ ಸಂಪನ್ಮೂಲ ಮತ್ತು ಅನುಭವವನ್ನು ಹೊಂದಿದೆ. ಕೋವಿಡ್ ನಿರ್ವಹಣೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕಿದೆ. ಏಕೀಕೃತ ಆದೇಶ ಮತ್ತು ನಿಯಂತ್ರಣ ವ್ಯವಸ್ಥೆಯನ್ನು ಒಳಗೊಂಡ ಕೇಂದ್ರಗಳನ್ನು ಎಲ್ಲ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ. ಸಾಂಕ್ರಾಮಿಕ ತಡೆಯುವ ನಿಟ್ಟಿನಲ್ಲಿ ಇದನ್ನು ಪರಿಣಾಮಕಾರಿಯಾಗಿ ಬಳಸಬೇಕುʼ ಎಂದು ಹೇಳಿದ್ದಾರೆ.</p>.<p>ಇದೇ ವೇಳೆ ಒಂದೇಬಾರಿ ಐದಕ್ಕೂ ಹೆಚ್ಚು ಜನರು ಧಾರ್ಮಿಕ ಸ್ಥಳಗಳಿಗೆ ಪ್ರವೇಶಿಸದಂತೆ ನೋಡಿಕೊಳ್ಳಬೇಕು ಎಂದು ಯೋಗಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಂದುವರಿದು, ಕಂಟೈನ್ಮೆಂಟ್ ವಲಯಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜೊತೆಗೆ, ಈ ವಲಯಗಳಲ್ಲಿನ ನಾಗರಿಕರಿಗೆ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಇದರ ಮೇಲ್ವಿಚಾರಣೆಯನ್ನು ಸಮಗ್ರ ಆಜ್ಞೆ ಮತ್ತು ನಿಯಂತ್ರಣ ಕೇಂದ್ರಗಳು ನಿರ್ವಹಿಸಬೇಕು ಎಂದೂ ಹೇಳಿದ್ದಾರೆ.</p>.<p>ಶನಿವಾರ ದೇಶದಲ್ಲಿ 1,45,384 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸತತ ನಾಲ್ಕನೇ ದಿನ ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>